AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Rate Today, 25-11-2021: ನಿರಂತರವಾಗಿ 21 ದಿನಗಳ ಕಾಲ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Price Today: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2021 | 7:38 AM

Share

Petrol Diesel Price Today | ದೆಹಲಿ: ಕಳೆದ ತಿಂಗಳು ನಿರಂತವಾಗಿ ದರ ಏರಿಕೆ ಕಂಡಿತ್ತು. ಆ ಬಳಿಕ ದೀಪಾವಳಿ ಮುನ್ನಾದಿನ ಪೆಟ್ರೋಲ್ (Petrol Price), ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸರ್ಕಾರ ಕಡಿತ ಗೊಳಿಸಿದ ನಂತರದ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ (Diesel Price) ಯಾವುದೇ ಏರಿಳಿತ ಕಂಡು ಬಂದಿಲ್ಲ. ಇಲ್ಲಿಯವರೆಗೂ ಸಹ ಇಂಧನ ದರ (Fuel price) ಸ್ಥಿರವಾಗಿದೆ. ಸತತ 21 ದಿನಗಳ ಕಾಲ ನಿರಂತರವಾಗಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಗುರುವಾರ ಸಹ (ನವೆಂಬರ್ 25) ಇಂಧನ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:35 am, Thu, 25 November 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ