AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today:​ ಸ್ಥಿರವಾಗಿಯೇ ಉಳಿದಿದೆ ಇಂಧನ ದರ; ನಿಮ್ಮೂರಿನ ಪೆಟ್ರೋಲ್​, ಡೀಸೆಲ್​ ಬೆಲೆ ಇಲ್ಲಿದೆ

Petrol Diesel Price Today, 21-02-2022: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್​ಗೆ 95.41 ರೂಪಾಯಿಯೇ ಇದ್ದು, ಡೀಸೆಲ್​ ಪ್ರತಿ ಲೀಟರ್​ಗೆ 86.67 ರೂ.ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ.

Petrol Diesel Rate Today:​ ಸ್ಥಿರವಾಗಿಯೇ ಉಳಿದಿದೆ ಇಂಧನ ದರ; ನಿಮ್ಮೂರಿನ ಪೆಟ್ರೋಲ್​, ಡೀಸೆಲ್​ ಬೆಲೆ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 21, 2022 | 7:44 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು(ಫೆಬ್ರವರಿ 21,ಸೋಮ ವಾರ) ಕೂಡ ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್(Petrol price)​ ಪ್ರತಿ ಲೀಟರ್​ಗೆ 95.41 ರೂಪಾಯಿಯೇ ಇದ್ದು, ಡೀಸೆಲ್(Diesel Price)​ ಪ್ರತಿ ಲೀಟರ್​ಗೆ 86.67 ರೂ.ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು