AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಎಷ್ಟಿದೆ ಮಹಾನಗರಗಳಲ್ಲಿ ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ದರ?

Petrol Diesel Price Today, 15-01-2022: ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್-ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

Petrol Rate: ಎಷ್ಟಿದೆ ಮಹಾನಗರಗಳಲ್ಲಿ ಇಂದು ಲೀಟರ್​ ಪೆಟ್ರೋಲ್​, ಡೀಸೆಲ್​ ದರ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 15, 2022 | 8:01 AM

Share

Petrol Diesel Price Today|ದೆಹಲಿ: ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಜನವರಿ 15, ಶನಿವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು,ಇಂದು ಕೂಡ ಇಂಧನಗಳ ದರದಲ್ಲಿ(Fuel Price) ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ