AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Petrol Diesel Price Today, 01-03-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 01, 2022 | 7:47 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಇಂದು (ಮಾರ್ಚ್  01, ಮಂಗಳವಾರ) ಕೂಡ ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ಈ ಮೊದಲು ಶತಕ ಬಾರಿಸಿದ್ದ ಇಂಧನ ದರ ನಂತರ ಇಳಿಕೆ ಕಂಡಿತ್ತು. ಆ ನಂತರ ಪೆಟ್ರೋಲ್, ಡೀಸೆಲ್ ರೇಟ್ ಸ್ಥಿರತೆ ಕಾಯ್ದುಕೊಂಡಿವೆ. ಕಳೆದ ಮೂರು ತಿಂಗಳುಗಳಿಂದಲೂ ತೈಲಗಳ ಬೆಲೆ ಸ್ಥಿರವಾಗಿಯೇ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್(Petrol price)​ ಪ್ರತಿ ಲೀಟರ್​ಗೆ 95.41 ರೂಪಾಯಿಯೇ ಇದ್ದು, ಡೀಸೆಲ್(Diesel Price)​ ಪ್ರತಿ ಲೀಟರ್​ಗೆ 86.67 ರೂ.ಇದೆ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ