AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಸತತ 5 ದಿನಗಳಿಂದ ಇಂಧನ ದರ ಸ್ಥಿರ

Petrol Rate Today: ಈಗಾಗಲೇ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಪೆಟ್ರೋಲ್​ ಮತ್ತು ಡೀಸೆಲ್​ ದರ ಗರಿಷ್ಟ ಮಟ್ಟ ತಲುಪಿದೆ. ಆ ಬಳಿಕವೂ ದರ ಏರುತ್ತಲೇ ಇತ್ತು. ಸದ್ಯ! ಈ ಐದು ದಿನಗಳ ಕಾಲ ಇಂಧನ ದರ ಬದಲಾಗಿಲ್ಲ ಎಂದು ಹೇಳುತ್ತಿದ್ದಾರೆ. ಜುಲೈ 18ರಂದು ಪೆಟ್ರೋಲ್​ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ಗೆ 102 ರೂಪಾಯಿ ಆಗಿದೆ.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಸತತ 5 ದಿನಗಳಿಂದ ಇಂಧನ ದರ ಸ್ಥಿರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 22, 2021 | 8:21 AM

Share

Petrol Diesel Price Today | ದೆಹಲಿ: ಏರುತ್ತಲೇ ಇರುವ ಪೆಟ್ರೋಲ್​(Petrol Price) ಡೀಸೆಲ್​ ಬೆಲೆಯನ್ನು ಗಮನಿಸುತ್ತಿದ್ದ ವಾಹನ ಸವಾರರು ಬೇಸತ್ತಿದ್ದರು. ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಅವರ ಪ್ರಶ್ನೆ ಆಗಿತ್ತು. ಜುಲೈ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಎರಡು ಬಾರು ಡೀಸೆಲ್ ದರ(Diesel Price) ಇಳಿಕೆಯತ್ತ ಸಾಗಿದೆ ಅನಿಸಿದರೂ ಪುನಃ ಏರಿಕೆ ಕಂಡಿತು. ಆ ನಂತರ ಸತತ ಐದು ದಿನಗಳ ಕಾಲ ಇಂಧನ ದರ(Fuel Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇದು ವಾಹನ ಸವಾರರಿಗೆ ಸ್ವಲ್ಪ ಸಮಾಧಾನ ತಂದಿರುವ ವಿಚಾರ.

ಈಗಾಗಲೇ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಪೆಟ್ರೋಲ್​ ಮತ್ತು ಡೀಸೆಲ್​ ದರ ಗರಿಷ್ಟ ಮಟ್ಟ ತಲುಪಿದೆ. ಆ ಬಳಿಕವೂ ದರ ಏರುತ್ತಲೇ ಇತ್ತು. ಸದ್ಯ! ಈ ಐದು ದಿನಗಳ ಕಾಲ ಇಂಧನ ದರ ಬದಲಾಗಿಲ್ಲ ಎಂದು ಹೇಳುತ್ತಿದ್ದಾರೆ. ಜುಲೈ 18ರಂದು ಪೆಟ್ರೋಲ್​ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್​ಗೆ 102 ರೂಪಾಯಿ ಆಗಿದೆ.

ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 101.84 ರೂಪಾಯಿ ಇದೆ. ಲೀಟರ್​ ಡಿಸೆಲ್​ ದರ 89.87 ರೂಪಾಯಿ ಇದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್​ ಪೆಟ್ರೋಲ್ ದರ 107.83 ರೂಪಾಯಿ ಹಾಗೂ ಲೀಟರ್​ ಡೀಸೆಲ್ ದರ 97.45 ರೂಪಾಯಿ ಇದೆ. ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಅತಿ ಗರಿಷ್ಟ ಮಟ್ಟದಲ್ಲಿ ಪೆಟ್ರೋಲ್​ ದರ ಹೊಂದಿರುವ ನಗರ ಮುಂಬೈ. ಮೇ 29ರಂದು ಲೀಟರ್ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ.

ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 102.08 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 93.02 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 102.49 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.39 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್​ ಪೆಟ್ರೋಲ್ ದರ 110.19 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 98.67 ರೂಪಾಯಿ ಇದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 105.25 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 95.26 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol price unchanged today on 2021 july 22 check diesel rate in Bangalore Delhi Chennai Mumbai and major city)

Published On - 8:20 am, Thu, 22 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ