AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price Today: ಸತತ 3 ದಿನಗಳಿಂದ ಇಳಿಕೆ ಕಂಡ ಡೀಸೆಲ್​ ದರ; ಪೆಟ್ರೋಲ್​ ಬೆಲೆ ಸ್ಥಿರ!

Petrol Rate Today: ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಡೀಸೆಲ್ ದರ ಇಳಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಡೀಸೆಲ್ ಬೆಲೆ 89.67 ರೂಪಾಯಿಯಿಂದ 89.47 ರೂಪಾಯಿಗೆ ಇಳಿಕೆಯಾಗಿದೆ.

Petrol Diesel Price Today: ಸತತ 3 ದಿನಗಳಿಂದ ಇಳಿಕೆ ಕಂಡ ಡೀಸೆಲ್​ ದರ; ಪೆಟ್ರೋಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 20, 2021 | 8:23 AM

Share

Petrol Diesel Rate Today | ದೆಹಲಿ: ಸತತ 3 ದಿನಗಳಿಂದ ಡೀಸೆಲ್ ಬೆಲೆ ಇಳಿಕೆಯತ್ತ ಸಾಗುತ್ತಿದೆ. ಇಂದು ಸಹ (ಆಗಸ್ಟ್ 20, ಶುಕ್ರವಾರ) ಡೀಸೆಲ್ ದರದಲ್ಲಿ (Diesel Rate) ಇಳಿಕೆ ಕಂಡು ಬಂದಿದೆ. ಆದರೆ ಪೆಟ್ರೋಲ್ ದರದಲ್ಲಿ (Petrol Rate) ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಡೀಸೆಲ್ ದರ ಇಳಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಡೀಸೆಲ್ ಬೆಲೆ 89.67 ರೂಪಾಯಿಯಿಂದ 89.47 ರೂಪಾಯಿಗೆ ಇಳಿಕೆಯಾಗಿದೆ.

ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದೆ. ಆದೆ ಪೆಟ್ರೋಲ್ ದರ ಸತತವಾಗಿ 33 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.84 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 96.84 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.49 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 93.84 ರೂಪಾಯಿಗೆ ಇಳಿಕೆ ಕಂಡಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.25 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 92.32 ರೂಪಾಯಿಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.25 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 94.65 ರೂಪಾಯಿಗೆ ಇಳಿದಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 110.20 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 98.05 ರೂಪಾಯಿಗೆ ಇಳಿಕೆಯಾಗಿದೆ. ರಾಂಚಿಯಲ್ಲಿ ಲೀಟರ್ ಪೆಟ್ರೋಲ್ಅನ್ನು 96.68 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದರೆ, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿಗೆ ಇಳಿಕೆ ಕಂಡಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 89.61 ರೂಪಾಯಿಗೆ ಇಳಿಕೆಯಾಗಿದೆ. ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.25 ರೂಪಾಯಿ ಇದೆ. ಲೀಟರ್ ಡೀಸೆಲ್ ಬೆಲೆ 95.01 ರೂಪಾಯಿಗೆ ಇಳಿಕೆ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 8:13 am, Fri, 20 August 21

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು