AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fuel Price: ದೀಪಾವಳಿ ಗಿಫ್ಟ್​ ಕೊಟ್ಟ ಸರ್ಕಾರ; ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ!

Petrol, Diesel Rate: ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿತ ಮಾಡಲಾಗಿದೆ. ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂ. ಕಡಿತಗೊಳಿಸಲಾಗಿದೆ. ಇಂದು ಮಧ್ಯ ರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ.

Fuel Price: ದೀಪಾವಳಿ ಗಿಫ್ಟ್​ ಕೊಟ್ಟ ಸರ್ಕಾರ; ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 03, 2021 | 8:49 PM

Share

ದೆಹಲಿ: ದೇಶದ ಜನತೆಗೆ ಸರ್ಕಾರ ದೀಪಾವಳಿ ಉಡುಗೊರೆ​ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ. ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಕಡಿತ ಮಾಡಲಾಗಿದೆ. ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ. ಇಂದು (ನವೆಂಬರ್ 3) ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ಇದೀಗ ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ. ನಾಳೆ (ನವೆಂಬರ್ 4) ರಿಂದಲೇ ಹೊಸ ದರ ಅನ್ವಯವಾಗಲಿದೆ. ಪೆಟ್ರೋಲ್ ಮೇಲೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿತಗೊಳಿಸಲಾಗಿದೆ. ಅದರಂತೆ ಇಂಧನ ದರ ಕೂಡ ಕಡಿಮೆ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಮೇಲೆ ವ್ಯಾಟ್ (VAT)​ ಕಡಿತಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಒತ್ತಾಯಿಸಿದ್ದಾರೆ. ಎಲ್ಲಾ ರಾಜ್ಯಗಳಿಗೆ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕಳೆದ ವರ್ಷ 19.98 ರೂಪಾಯಿಗಳಿಂದ 32.9 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಅಬಕಾರಿ ಸುಂಕವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಳಿಕ ಸತತವಾಗಿ ಇಂಧನ ದರ ಏರಿಕೆ, ಅಡುಗೆ ಅನಿಲ ದರ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೀಡಾಗಿತ್ತು. ಇತ್ತೀಚೆಗಷ್ಟೇ ಎಲ್​ಪಿಜಿ ಸಿಲಿಂಡರ್ ದರದಲ್ಲಿ 266 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಜನರಿಗೆ ಕೊಂಚ ಸಮಾಧಾನ ತಂದಿದೆ.

ಇಂದು (ನವೆಂಬರ್ 3) ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಇಲ್ಲಿದೆ ವಿವರ: Petrol Price Today: ಸತತ ಏಳು ದಿನಗಳಿಂದ ಏರಿಕೆ ಕಂಡಿದ್ದ ಪೆಟ್ರೋಲ್​ ಡೀಸೆಲ್​ ದರದಲ್ಲಿ ಇಂದು ಯಾವುದೇ ಏರಿಳಿತಗಳಿಲ್ಲ!

ಇದನ್ನೂ ಓದಿ: Shocking Video: ಪಟಾಕಿಗೆ ಬೆಂಕಿ ಹೊತ್ತಿಸಿ ಪೆಟ್ರೋಲ್ ಬಂಕ್​ ಮೇಲೆ ಎಸೆದ ಯುವಕರು; ಆಮೇಲೇನಾಯ್ತು?

Published On - 8:11 pm, Wed, 3 November 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?