AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fuel Price: ದೀಪಾವಳಿ ಗಿಫ್ಟ್​ ಕೊಟ್ಟ ಸರ್ಕಾರ; ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ!

Petrol, Diesel Rate: ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿತ ಮಾಡಲಾಗಿದೆ. ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂ. ಕಡಿತಗೊಳಿಸಲಾಗಿದೆ. ಇಂದು ಮಧ್ಯ ರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ.

Fuel Price: ದೀಪಾವಳಿ ಗಿಫ್ಟ್​ ಕೊಟ್ಟ ಸರ್ಕಾರ; ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ!
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Nov 03, 2021 | 8:49 PM

Share

ದೆಹಲಿ: ದೇಶದ ಜನತೆಗೆ ಸರ್ಕಾರ ದೀಪಾವಳಿ ಉಡುಗೊರೆ​ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ. ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಕಡಿತ ಮಾಡಲಾಗಿದೆ. ಪೆಟ್ರೋಲ್​ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ. ಇಂದು (ನವೆಂಬರ್ 3) ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ಇದೀಗ ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ. ನಾಳೆ (ನವೆಂಬರ್ 4) ರಿಂದಲೇ ಹೊಸ ದರ ಅನ್ವಯವಾಗಲಿದೆ. ಪೆಟ್ರೋಲ್ ಮೇಲೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿತಗೊಳಿಸಲಾಗಿದೆ. ಅದರಂತೆ ಇಂಧನ ದರ ಕೂಡ ಕಡಿಮೆ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ ಪೆಟ್ರೋಲ್, ಡೀಸೆಲ್ ಮೇಲೆ ವ್ಯಾಟ್ (VAT)​ ಕಡಿತಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಒತ್ತಾಯಿಸಿದ್ದಾರೆ. ಎಲ್ಲಾ ರಾಜ್ಯಗಳಿಗೆ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕಳೆದ ವರ್ಷ 19.98 ರೂಪಾಯಿಗಳಿಂದ 32.9 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಅಬಕಾರಿ ಸುಂಕವನ್ನು ಮತ್ತೆ ಇಳಿಕೆ ಮಾಡಲಾಗಿದೆ. ಬಳಿಕ ಸತತವಾಗಿ ಇಂಧನ ದರ ಏರಿಕೆ, ಅಡುಗೆ ಅನಿಲ ದರ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೀಡಾಗಿತ್ತು. ಇತ್ತೀಚೆಗಷ್ಟೇ ಎಲ್​ಪಿಜಿ ಸಿಲಿಂಡರ್ ದರದಲ್ಲಿ 266 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಜನರಿಗೆ ಕೊಂಚ ಸಮಾಧಾನ ತಂದಿದೆ.

ಇಂದು (ನವೆಂಬರ್ 3) ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಇಲ್ಲಿದೆ ವಿವರ: Petrol Price Today: ಸತತ ಏಳು ದಿನಗಳಿಂದ ಏರಿಕೆ ಕಂಡಿದ್ದ ಪೆಟ್ರೋಲ್​ ಡೀಸೆಲ್​ ದರದಲ್ಲಿ ಇಂದು ಯಾವುದೇ ಏರಿಳಿತಗಳಿಲ್ಲ!

ಇದನ್ನೂ ಓದಿ: Shocking Video: ಪಟಾಕಿಗೆ ಬೆಂಕಿ ಹೊತ್ತಿಸಿ ಪೆಟ್ರೋಲ್ ಬಂಕ್​ ಮೇಲೆ ಎಸೆದ ಯುವಕರು; ಆಮೇಲೇನಾಯ್ತು?

Published On - 8:11 pm, Wed, 3 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ