AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Balance Check: ದೀಪಾವಳಿಗೂ ಮುನ್ನ 6 ಕೋಟಿ ಖಾತೆಗಳಿಗೆ ಬರಲಿದೆ ಶೇ 8.5ರ ಪಿಎಫ್​ ಬಡ್ಡಿ; ಬ್ಯಾಲೆನ್ಸ್ ಚೆಕ್ ಹೇಗೆ?

ಆರು ಕೋಟಿಯಷ್ಟು ಪಿಎಫ್​ ಖಾತೆಗಳಿಗೆ ಈ ಬಾರಿಯ ದೀಪಾವಳಿಗೂ ಮುನ್ನವೇ ಶೇ 8.5ರ ಬಡ್ಡಿ ಜಮೆ ಆಗುವ ಸಾಧ್ಯತೆ ಇದೆ. ಪಿಎಫ್​ ಬಾಕಿಯನ್ನು ಪರೀಕ್ಷಿಸುವುದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

PF Balance Check: ದೀಪಾವಳಿಗೂ ಮುನ್ನ 6 ಕೋಟಿ ಖಾತೆಗಳಿಗೆ ಬರಲಿದೆ ಶೇ 8.5ರ ಪಿಎಫ್​ ಬಡ್ಡಿ; ಬ್ಯಾಲೆನ್ಸ್ ಚೆಕ್ ಹೇಗೆ?
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Oct 11, 2021 | 6:14 PM

Share

ಇಪಿಎಫ್‌ಒ (ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ) 2020-21ರ ಹಣಕಾಸು ವರ್ಷಕ್ಕೆ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಯನ್ನು ಖಾತೆದಾರರ ಖಾತೆಗೆ ಜಮೆ ಮಾಡುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಈ ತಿಂಗಳ ಅಂತ್ಯದ ವೇಳೆಗೆ- ದೀಪಾವಳಿಯ ಸಮಯಕ್ಕೆ 6 ಕೋಟಿಗೂ ಅಧಿಕ ಉದ್ಯೋಗಿಗಳು ಸ್ವೀಕರಿಸುತ್ತಾರೆ. 2020-21ರ ಆರ್ಥಿಕ ವರ್ಷಕ್ಕೆ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡಾ 8.5ಕ್ಕೆ ನಿಗದಿಪಡಿಸಲಾಗಿದೆ. ಕೊವಿಡ್-19 ಬಿಕ್ಕಟ್ಟಿನ ಸಮಯದಲ್ಲಿ ಸದಸ್ಯರಿಂದ ಹೆಚ್ಚಿನ ಹಿಂಪಡೆಯುವಿಕೆ ಮತ್ತು ಕಡಿಮೆ ಕೊಡುಗೆ ಇತ್ತು. ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ಕೊರೊನಾ ಬಿಕ್ಕಟ್ಟು ಏಕಾಏಕಿ ಕಾಣಿಸಿಕೊಂಡ ನಂತರ ಇಪಿಎಫ್‌ಒ ಬಡ್ಡಿದರವನ್ನು ಏಳು ವರ್ಷದ ಕನಿಷ್ಠ ಮಟ್ಟವಾದ ಶೇಕಡಾ 8.5ಕ್ಕೆ 2019-20ನೇ ಸಾಲಿಗೆ ಮಾರ್ಚ್‌ನಲ್ಲಿ ಕಡಿತಗೊಳಿಸಿತು. 2018-19ರಲ್ಲಿ ಬಡ್ಡಿದರ ಶೇಕಡಾ 8.65ರಷ್ಟಿತ್ತು. 2017-18ರ ಆರ್ಥಿಕ ವರ್ಷಕ್ಕೆ EPFO ​​ತನ್ನ ಚಂದಾದಾರರಿಗೆ ಶೇಕಡಾ 8.55 ಬಡ್ಡಿ ನೀಡಿತು. 2016-17ರಲ್ಲಿ ಬಡ್ಡಿ ದರ ಶೇ 8.65 ಆಗಿತ್ತು.

ಕೊವಿಡ್ -19 ಬಿಕ್ಕಟ್ಟನ್ನು ಉಲ್ಲೇಖಿಸಿ, ಇಪಿಎಫ್‌ಒ ಇತ್ತೀಚೆಗೆ ಸದಸ್ಯರಿಗೆ ತಮ್ಮ ನಿವೃತ್ತಿ ನಿಧಿಯಿಂದ ಮರುಪಾವತಿಸಲಾಗದ ಮುಂಗಡವಾಗಿ ಹಣವನ್ನು ತೆಗೆದುಕೊಳ್ಳಲು ಅನುಮತಿ ನೀಡಿದೆ. ಕೇಂದ್ರ ಸರ್ಕಾರವು ಮಾರ್ಚ್ 2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKY) ಅಡಿಯಲ್ಲಿ ಒಂದು ಹೊಸ ಅವಕಾಶವನ್ನು ನೀಡಿತು. ಈ ಮೂಲಕವಾಗಿ ಇಪಿಎಫ್ ಸದಸ್ಯರು ಮೂರು ತಿಂಗಳ ಮೂಲ ವೇತನ ಮತ್ತು ತುಟ್ಟಿ ಭತ್ಯೆ (ಡಿಎ) ಅಥವಾ ಅವರ ಭವಿಷ್ಯ ನಿಧಿಯ ಹಣದ ಶೇ 75ರಷ್ಟು ಹಣ- ಈ ಪೈಕಿ ಯಾವುದು ಕಡಿಮೆಯೋ ಅದನ್ನು ಮುಂಗಡವಾಗಿ ತೆಗೆದುಕೊಳ್ಳಲು ಅನುವು ಮಾಡಿಕೊಟ್ಟಿತು.

“ಕೊವಿಡ್-19 ಬಿಕ್ಕಟ್ಟಿನ ಎರಡನೇ ಅಲೆಯ ಸಂದರ್ಭದಲ್ಲಿ ತನ್ನ ಚಂದಾದಾರರಿಗೆ ನೆರವಾಗುವ ಉದ್ದೇಶದಿಂದ EPFO ತನ್ನ ಸದಸ್ಯರಿಗೆ ಎರಡನೇ ಬಾರಿಗೆ ಮರುಪಾವತಿಸಲು ಅಗತ್ಯ ಇಲ್ಲದ ಕೊವಿಡ್-19 ಮುಂಗಡವನ್ನು ಪಡೆಯಲು ಅವಕಾಶ ನೀಡಿತು. ಕೊರೊನಾ ಸಮಯದಲ್ಲಿ ಸದಸ್ಯರ ಆರ್ಥಿಕ ಅಗತ್ಯವನ್ನು ಪೂರೈಸಲು ವಿಶೇಷ ಹಿಂತೆಗೆದುಕೊಳ್ಳುವ ಅವಕಾಶವನ್ನು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (PMGKY) ಅಡಿಯಲ್ಲಿ ಮಾರ್ಚ್ 2020ರಲ್ಲಿ ಪರಿಚಯಿಸಲಾಯಿತು,” ಎಂದು ಸಚಿವಾಲಯ ಹೇಳಿದೆ. “ಕೊವಿಡ್-19 ಕಷ್ಟದ ಸಮಯದಲ್ಲಿ, EPFO ​​ತನ್ನ ಎಲ್ಲ ಪಾಲುದಾರರಿಗೆ ಸಹಾಯ ಹಸ್ತ ನೀಡಲು ಬದ್ಧವಾಗಿದೆ,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ 2021ರಲ್ಲಿ ಹೇಳಿರುವ ಪ್ರಕಾರ, ಉದ್ಯೋಗಿಯ ಕೊಡುಗೆ ಮೇಲಿನ ವಾರ್ಷಿಕ ಬಡ್ಡಿಯು ರೂ. 2.5 ಲಕ್ಷಕ್ಕಿಂತ ಹೆಚ್ಚಾದಲ್ಲಿ ಅದಕ್ಕೆ ತೆರಿಗೆ ವಿಧಿಸಲಾಗುತ್ತದೆ.

ಪಿಎಫ್ ಬ್ಯಾಲೆನ್ಸ್ ಅನ್ನು ಪರೀಕ್ಷಿಸುವುದು ಹೇಗೆ: 1) ಎಸ್ಎಂಎಸ್ ಮೂಲಕ ಪಿಎಫ್ ಬ್ಯಾಲೆನ್ಸ್ UAN (ಯೂನಿವರ್ಸಲ್ ಅಕೌಂಟ್ ನಂಬರ್) ಹೊಂದಿರುವ EPFO ​​ಸದಸ್ಯರು ತಮ್ಮ ನೋಂದಾಯಿತ ಸೆಲ್‌ಫೋನ್‌ನಿಂದ “EPFOHO UAN ENG” ಇದನ್ನು 7738299899ಗೆ ಸಂದೇಶ ಕಳುಹಿಸಬಹುದು. ಎಸ್‌ಎಂಎಸ್ ಅನ್ನು ಯಶಸ್ವಿಯಾಗಿ ಕಳುಹಿಸಿದ ನಂತರ ನಿಮ್ಮ ಪಿಎಫ್ ಖಾತೆಯ ಬ್ಯಾಲೆನ್ಸ್ ಸೇರಿದಂತೆ ಇಪಿಎಫ್ ಖಾತೆಯ ಮಾಹಿತಿಯನ್ನು ಒದಗಿಸುವ ಸಂದೇಶವನ್ನು ಬಳಕೆದಾರರು ಸ್ವೀಕರಿಸುತ್ತಾರೆ. SMSನಲ್ಲಿ EPFO ​​ಸದಸ್ಯರು ಆದ್ಯತೆಯ ಸಂವಹನ ಭಾಷೆಯನ್ನು ಆಯ್ಕೆ ಮಾಡಬೇಕು.

2) ಇಪಿಎಫ್ ಬ್ಯಾಲೆನ್ಸ್ ಪರೀಕ್ಷೆ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಅಧಿಕೃತ ಫೋನ್‌ಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಇಪಿಎಫ್ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು. UAN ಅನ್ನು KYC ಮಾಹಿತಿಗೆ ಜೋಡಣೆ ಮಾಡಿದ್ದರೆ ಮಾತ್ರ ಈ ಫೀಚರ್ ಲಭ್ಯವಿರುತ್ತದೆ.

ಇದನ್ನೂ ಓದಿ: EPF explainer: ಇಪಿಎಫ್​ ಕೊಡುಗೆ 2.5 ಲಕ್ಷ ರೂಪಾಯಿಗಿಂತ ಹೆಚ್ಚಾದಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!