AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF interest: ಈ ದಿನದೊಳಗೆ ಚಂದಾದಾರರ ಖಾತೆಗಳಿಗೆ ಜಮೆ ಆಗಲಿದೆ ಶೇ 8.5ರಷ್ಟು ಪಿಎಫ್​ ಬಡ್ಡಿ, ಪರಿಶೀಲನೆ ಮಾಡಿಕೊಳ್ಳಿ

2020- 21ನೇ ಸಾಲಿಗೆ ಪಿಎಫ್​ ಬಡ್ಡಿ ದರ ಶೇ 8.5ರಷ್ಟು ಚಂದಾದಾರರ ಖಾತೆಗೆ ಯಾವಾಗ ಜಮೆ ಆಗಲಿದೆ ಎಂಬ ವಿವರ ಇಲ್ಲಿದೆ. ಕಳೆದ ವರ್ಷ ಬಡ್ಡಿ ದರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿತ್ತು.

PF interest: ಈ ದಿನದೊಳಗೆ ಚಂದಾದಾರರ ಖಾತೆಗಳಿಗೆ ಜಮೆ ಆಗಲಿದೆ ಶೇ 8.5ರಷ್ಟು ಪಿಎಫ್​ ಬಡ್ಡಿ, ಪರಿಶೀಲನೆ ಮಾಡಿಕೊಳ್ಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 12:26 PM

Share

ಪ್ರಮುಖ ದಿನಪತ್ರಿಕೆಗಳ ವರದಿ ಪ್ರಕಾರ, ಇಪಿಎಫ್​ಒದಿಂದ ಬಡ್ಡಿ ದರವನ್ನು ಜುಲೈ ಕೊನೆ ಹೊತ್ತಿಗೆ ಕ್ರೆಡಿಟ್ ಮಾಡಲಾಗುತ್ತದೆ. ಯಾರೆಲ್ಲ ಇಪಿಎಫ್ ಚಂದಾದಾರರಿದ್ದಾರೋ ಅವರ ಖಾತೆಗಳಿಗೆ 2020- 21ನೇ ಹಣಕಾಸು ವರ್ಷದ ಶೇ 8.5ರಷ್ಟು ಬಡ್ಡಿ ದರವು ಖಾತೆಗೆ ಜಮೆ ಆಗುತ್ತದೆ. ಅಂದ ಹಾಗೆ ಶೇ 8.5ರ ಬಡ್ಡಿ ದರಕ್ಕೆ ಕಾರ್ಮಿಕ ಸಚಿವಾಲಯದಿಂದಲೂ ಒಪ್ಪಿಗೆ ಸಿಕ್ಕಿತ್ತು. ಮಾರ್ಚ್​ನಲ್ಲಿ ಶ್ರೀನಗರ್​ನಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಕುಮಾರ್ ಗಂಗ್ವರ್ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಮಂಡಳಿ ಟ್ರಸ್ಟಿಗಳ (CBT) ಸಭೆಯಲ್ಲಿ ಇಪಿಎಫ್​ ದರವನ್ನು ಶೇ 8.5 ಉಳಿಸಿಕೊಳ್ಳಲು ನಿರ್ಧರಿಸಲಾಗಿತ್ತು.

ಅಂದಹಾಗೆ ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಇಪಿಎಫ್​ಒದಿಂದ ತನ್ನ ಸದಸ್ಯರಿಗೆ ಕೋವಿಡ್- 19 ಮುಂಗಡ ತೆಗೆದುಕೊಳ್ಳುವುದಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಹೇಗೆ ಕೊರೊನಾದ ಮೊದಲ ಅಲೆಯ ಸಂದರ್ಭದಲ್ಲಿ ಪಿಎಫ್​ ವಿಥ್​ಡ್ರಾಗೆ ಅರ್ಜಿ ಹಾಕಿಕೊಳ್ಳಲಾಗಿತ್ತೋ ಅದೇ ರೀತಿಯಲ್ಲಿ ಈ ಸಲವೂ ಅಪ್ಲೈ ಮಾಡಬಹುದಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇನ್ನು ಜೂನ್ 1ರಿಂದ ಅನ್ವಯ ಆಗುವಂತೆ ಪಿಎಫ್​ ಖಾತೆಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಮಾಡದಿದ್ದಲ್ಲಿ ಉದ್ಯೋಗದಾತರ ಪಿಎಫ್​ ಕೊಡುಗೆ ಖಾತೆಗೆ ಜಮೆ ಆಗುವುದಿಲ್ಲ. ಈ ಬಾರಿ ಆಧಾರ್ ಜೋಡಣೆ ಜವಾಬ್ದಾರಿಯನ್ನು ಉದ್ಯೋಗದಾತರಿಗೆ ನೀಡಲಾಗಿದೆ. ತಮ್ಮ ಉದ್ಯೋಗಿಗೆ ಸೂಚನೆ ನೀಡಿ, ಆಧಾರ್ ಜತೆಗೆ ಪಿಎಫ್ ಖಾತೆ ಜೋಡಣೆ ಆಗಿದೆಯಾ ಎಂಬುದನ್ನು ಖಾತ್ರಿ ಪಡಿಸಬೇಕಾಗುತ್ತದೆ.

ಇದನ್ನೂ ಓದಿ: How to Link Aadhaar Card with EPF Account: ಆಧಾರ್ ಜತೆಗೆ ಪಿಎಫ್​ ಖಾತೆ ಜೋಡಣೆ ಮಾಡುವುದು ಹೇಗೆ?

ಇದನ್ನೂ ಓದಿ: Covid- 19 PF Withdrawal: ಕೋವಿಡ್-19 ಕಾರಣಕ್ಕೆ ಎರಡನೇ ಬಾರಿಗೆ ಪಿಎಫ್​ ವಿಥ್​ಡ್ರಾ ಅವಕಾಶ; ಎಷ್ಟು, ಹೇಗೆ ಮಾಹಿತಿ ಇಲ್ಲಿದೆ

(EPFO will credit PF interest of 8.5% to subscribers account by this date)

Published On - 12:23 pm, Wed, 2 June 21

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!