AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF withdraw for covid emergency: ಕೋವಿಡ್ ತುರ್ತಿಗಾಗಿ ಅರ್ಜಿ ಹಾಕಿದ 3 ದಿನದೊಳಗೆ ಬ್ಯಾಂಕ್ ಖಾತೆಗೆ ಪಿಎಫ್ ಮೊತ್ತ

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಪಿಎಫ್ ಅಕೌಂಟ್​ನಿಂದ ತುರ್ತು ಹಣಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಮೂರೇ ದಿನದೊಳಗೆ ಬ್ಯಾಂಕ್​ ಖಾತೆಗೆ ವರ್ಗಾವಣೆ ಆಗುತ್ತದೆ.

PF withdraw for covid emergency: ಕೋವಿಡ್ ತುರ್ತಿಗಾಗಿ ಅರ್ಜಿ ಹಾಕಿದ 3 ದಿನದೊಳಗೆ ಬ್ಯಾಂಕ್ ಖಾತೆಗೆ ಪಿಎಫ್ ಮೊತ್ತ
ಈ ತಿಂಗಳು, ಅಂದರೆ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳಿಸಬೇಕಾದ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ಐದು ಜವಾಬ್ದಾರಿಗಳು ಇಲ್ಲಿವೆ. ಒಂದು ವೇಳೆ ಈ ಗಡುವನ್ನು ಮೀರಿದಲ್ಲಿ ದಂಡ ಪಾವತಿಸಬೇಕಾದ ಸನ್ನಿವೇಶ ಉದ್ಭವಿಸಬಹುದು. ಯಾವುದು ಆ 5 ಜವಾಬ್ದಾರಿಗಳು ಎಂಬ ವಿವರ ನಿಮ್ಮೆದುರು ಇದೆ.
TV9 Web
| Updated By: Srinivas Mata|

Updated on:Jun 02, 2021 | 2:01 PM

Share

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಾರ್ಮಿಕ ಭವಿಷ್ಯ ನಿಧಿ ಒಕ್ಕೂಟ (ಇಪಿಎಫ್​ಒ)ದಿಂದ ಚಂದಾದಾರರು ಹಣ ವಿಥ್​ಡ್ರಾ ಮಾಡಲು ಅವಕಾಶ ಮಾಡಿಕೊಟ್ಟಿದೆ. ಪಿಎಫ್​ ಖಾತೆದಾರರಿಗೆ ಮರುಪಾವತಿಸುವ ಅಗತ್ಯ ಇಲ್ಲದ ಮುಂಗಡ ನೀಡಲಾಗುತ್ತಿದೆ. ಚಂದಾದಾರರು ಹಣಕಾಸು ತುರ್ತಿಗಾಗಿ ತಮ್ಮ ಖಾತೆಯಿಂದ ವಿಥ್​ಡ್ರಾ ಮಾಡಬಹುದು. ಈ ಹಿಂದೆಲ್ಲ ಅನಾರೋಗ್ಯ, ಮನೆ ಖರೀದಿ ಮುಂತಾದ ಪ್ರಕರಣಗಳಿಗೆ ಮರುಪಾವತಿಸುವ ಅಗತ್ಯ ಇಲ್ಲದೆ ಹಣ ಪಡೆಯವ ಸವಲತ್ತು ಒದಗಿಸಿತ್ತು. ಆದರೆ 2020ರಲ್ಲಿ ಕಾರ್ಮಿಕ ಭವಿಷ್ಯ ನಿಧಿ ಯೋಜನೆ, 1952ಕ್ಕೆ ತಿದ್ದುಪಡಿ ತಂದು, ಕೋವಿಡ್- 19 ತುರ್ತಿಗಾಗಿಯೂ ಮರುಪಾವತಿಸುವ ಅಗತ್ಯ ಇಲ್ಲದಂತೆ ಹಣ ವಿಥ್​ ಡ್ರಾ ಮಾಡುವ ಅವಕಾಶ ನೀಡಲಾಯಿತು. ಅಂಥ ಸಂದರ್ಭದಲ್ಲಿ ಖಾತೆದಾರರು ಮೂರು ತಿಂಗಳ ಮೂಲವೇತನ ಮತ್ತು ಡಿಎ ಅಥವಾ ಪಿಎಫ್​ನಲ್ಲಿ ಇರುವ ಬಾಕಿ ಮೊತ್ತದ ಶೇ 75ರಷ್ಟು ಇವೆರಡರಲ್ಲಿ ಯಾವುದು ಕಡಿಮೆಯೋ ಅಷ್ಟನ್ನು ವಿಥ್​ ಡ್ರಾ ಮಾಡಬಹದು. ಅಂದ ಹಾಗೆ ಕಳೆದ ವರ್ಷ ಯಾರು ಮುಂಗಡ ತೆಗೆದುಕೊಂಡಿದ್ದರೋ ಅವರು ಈಗ ಸಹ ಅರ್ಜಿ ಹಾಕಿಕೊಳ್ಳಬಹುದು.

ಮರುಪಾವತಿಸುವ ಅಗತ್ಯ ಇಲ್ಲದ ಮುಂಗಡ ಪಡೆಯುವುದಕ್ಕೆ ಈ ಮೂರು ಅಂಶಗಳು ಅಗತ್ಯ. 1) ಯುಎಎನ್ ಸಂಖ್ಯೆ ಆ್ಯಕ್ಟಿವೇಟ್ ಆಗಿರಬೇಕು 2) ಯುಎಎನ್​ ಸಂಖ್ಯೆಯು ಆಧಾರ್, ಪ್ಯಾನ್ ಮತ್ತು ಬ್ಯಾಂಕ್ ಖಾತೆ ಜತೆಗೆ ಜೋಡಣೆ ಆಗಿರಬೇಕು 3) ಯುಎಎನ್​ ಆ್ಯಕ್ಟಿವೇಟ್ ಆಗಲು ಬಳಸಿರುವ ಮೊಬೈಲ್ ನಂಬರ್​ಗೆ ಒಟಿಪಿ ಬರುವುದರಿಂದ ಮೊಬೈಲ್ ಸಂಖ್ಯೆ ಕಾರ್ಯ ನಿರ್ವಹಿಸುತ್ತಿರಬೇಕು

ಕೋವಿಡ್- 19 ಮುಂಗಡಕ್ಕೆ ಅರ್ಜಿ ಪಡೆದುಕೊಂಡ 3 ದಿನದೊಳಗೆ ಕ್ಲೇಮ್​ಗಳನ್ನು ವಿಲೇವಾರಿ ಮಾಡುವುದಕ್ಕೆ ಇಪಿಎಫ್​ಒ ಬದ್ಧವಾಗಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ತಿಳಿಸಿದೆ. ಇಪಿಎಫ್​ಒದಿಂದ ಆಟೋ- ಕ್ಲೇಮ್ ವಿಲೇವಾರಿಯನ್ನು ತರಲಾಗಿದೆ. ಎಲ್ಲ ಬಗ್ಗೆಯಲ್ಲೂ ಕೆವೈಸಿ (ನೋ ಯುವರ್ ಕಸ್ಟಮರ್) ಪೂರ್ಣಗೊಳಿಸಿದ ಸದಸ್ಯರಿಗೆ ಇದು ಅನ್ವಯ ಆಗುತ್ತದೆ. ಕಾನೂನು ಪ್ರಕಾರವಾಗಿ 20 ದಿನದೊಳಗೆ ಕ್ಲೇಮ್ ವಿಲೇವಾರಿ ಆಗುತ್ತಿದ್ದದ್ದು ಈಗ ಕೇವಲ 3 ದಿನಕ್ಕೆ ಇಳಿಕೆ ಆಗಿದೆ ಎಂದು ಸಚಿವಾಲಯ ತಿಳಿಸಿದೆ.

ಅರ್ಜಿ ಹಾಕಿಕೊಳ್ಳುವ ವಿಧಾನ ಹೀಗಿದೆ: ಹಂತ 1: https://unifiedportal-mem.epfindia.gov.in/memberinterface/ ಈ ವೆಬ್​ಸೈಟ್​ಗೆ ಲಾಗಿನ್ ಆಗಿ. ಹಂತ 2: ಲಾಗಿನ್ ಆದ ಮೇಲೆ UAN ಸಂಖ್ಯೆ ನಮೂದಿಸಿ, ಅದು ನಿಮ್ಮ ಪೇ ಸ್ಲಿಪ್​ನಲ್ಲಿ ಇರುತ್ತದೆ. ಒಂದು ವೇಳೆ ನೋಂದಣಿ ಆಗಿದ್ದಲ್ಲಿ ಪಾಸ್​ವರ್ಡ್ ಹಾಕಿ ಮತ್ತು Captchaವನ್ನು ಸಹ ನಮೂದಿಸಿ. ಹಂತ 3: ಮೇಲ್ಭಾಗದ ಟಾಪ್​ನಲ್ಲಿ “ಆನ್​ಲೈನ್ ಸರ್ವೀಸ್” ಎಂಬುದು ಇರುತ್ತದೆ. ONLINE CLAIM (FORM 31, 19, 10C ಮತ್ತು 10D). ಅದರ ಮೇಲೆ ಕ್ಲಿಕ್ ಮಾಡಿ. ಹಂತ 4: ಹೊಸ ವೆಬ್​ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ಹೆಸರು, ಜನ್ಮ ದಿನಾಂಕ, ಆಧಾರ್​ನ ಕೊನೆಯ ನಾಲ್ಕು ಸಂಖ್ಯೆ ಇರುತ್ತದೆ. ವೆಬ್​ ಪೇಜ್​ನಲ್ಲಿ ಬ್ಯಾಂಕ್ ಖಾತೆಯನ್ನು ನಮೂದಿಸಬೇಕು. ಒಂದು ಸಲ ಭರ್ತಿ ಮಾಡಿದ ಮೇಲೆ Verify ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ವೆರಿಫೈ ಆದ ಮೇಲೆ “Certificate Of Undertaking” ಕೇಳಿ ಪಾಪ್- ಅಪ್ ಒಂದು ತೆರೆಯ ಮೇಲೆ ಕಾಣಿಸಿಕೊಳ್ಳುತ್ತದೆ. ಹಂತ 5: ಆ ನಂತರ Proceed for online claim ಮೇಲೆ ಕ್ಲಿಕ್ ಮಾಡಿ. ಹಂತ 6: ಡ್ರಾಪ್ ಡೌನ್ ಮೆನುದಲ್ಲಿ EPF advance (Form 31) ಅಂತ ಇದ್ದು, ಅದರ ಮೇಲೆ ಕ್ಲಿಕ್ ಮಾಡಬೇಕು. ಹಂತ 7: ಹಣ ಡ್ರಾ ಮಾಡುವ ಉದ್ದೇಶ ತಿಳಿಸಬೇಕು ಮತ್ತು ಅಲ್ಲಿ ಕೋವಿಡ್-19 ಎಂಬುದನ್ನು ನಮೂದಿಸಬೇಕು. ಹಂತ 8: ವಿಥ್​ಡ್ರಾ ಮೊತ್ತವನ್ನು ನಮೂದಿಸಬೇಕು ಮತ್ತು ಚೆಕ್​ನ ಸ್ಕ್ಯಾನ್ಡ್​ ಕಾಪಿಯನ್ನು ಅಪ್​ಲೋಡ್ ಮಾಡಬೇಕು. ಹಂತ 9: ಒನ್​ ಟೈಮ್ ಪಾಸ್​ವರ್ಡ್ (ಒಟಿಪಿ) ಕಳುಹಿಸಲಾಗುತ್ತದೆ. ಅದನ್ನು ಭರ್ತಿ ಮಾಡಿ, ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಹಂತ 10: ಈ ಮನವಿಗೆ ಉದ್ಯೋಗದಾತರ ಅನುಮತಿ ಬೇಕು. ಅದು ಸಿಕ್ಕ ನಂತರ ಇಪಿಎಫ್ ಖಾತೆಯಿಂದ ಬ್ಯಾಂಕ್ ಖಾತೆಗೆ ಹಣವು ವರ್ಗಾವಣೆ ಆಗುತ್ತದೆ.

ಇದನ್ನೂ ಓದಿ: PF interest: ಈ ದಿನದೊಳಗೆ ಚಂದಾದಾರರ ಖಾತೆಗಳಿಗೆ ಜಮೆ ಆಗಲಿದೆ ಶೇ 8.5ರಷ್ಟು ಪಿಎಫ್​ ಬಡ್ಡಿ, ಪರಿಶೀಲನೆ ಮಾಡಿಕೊಳ್ಳಿ

ಇದನ್ನೂ ಓದಿ: How to Link Aadhaar Card with EPF Account: ಆಧಾರ್ ಜತೆಗೆ ಪಿಎಫ್​ ಖಾತೆ ಜೋಡಣೆ ಮಾಡುವುದು ಹೇಗೆ?

(PF withdraw request for covid-19 emergency will process quickly from EPFO and transfer money to account holders banks in 3 days)

Published On - 2:00 pm, Wed, 2 June 21

‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ