AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rural Housing: ಪಿಎಂ ಗ್ರಾಮೀಣ ಆವಾಸ್ ಯೋಜನೆ ಅಡಿ ಈವರೆಗೆ 40 ಲಕ್ಷ ಮನೆಗಳು ಮಂಜೂರು

PM Awas Yojana Gramin scheme: ಪಿಎಂ ಗ್ರಾಮೀಣ ವಸತಿ ಯೋಜನೆ ಅಡಿ ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ 46 ಲಕ್ಷ ಮನೆಗಳ ನಿರ್ಮಾಣಕ್ಕೆ ಇಡಲಾಗಿದ್ದ ಗುರಿಯಲ್ಲಿ 39 ಲಕ್ಷ ಮನೆಗಳಿಗೆ ಈವರೆಗೆ ಮಂಜೂರಾತಿ ಆಗಿದೆ. 2024-25ರ ಹಣಕಾಸು ವರ್ಷಕ್ಕೆ 18 ರಾಜ್ಯಗಳಲ್ಲಿ 84 ಲಕ್ಷ ಮನೆಗಳಿಗೆ ಗುರಿ ಮಾಡಲಾಗಿತ್ತು. ಆ ಗುರಿ ಸಾಧನೆ ಬಹುತೇಕ ಆಗಿದೆ. ಪಿಎಂ ಗ್ರಾಮೀಣ ಆವಾಸ್ ಯೋಜನೆಯಲ್ಲಿ ಈವರೆಗೆ ಮೂರು ಕೋಟಿಗೂ ಅಧಿಕ ಮನೆಗಳು ಮಂಜೂರು ಆಗಿವೆ.

Rural Housing: ಪಿಎಂ ಗ್ರಾಮೀಣ ಆವಾಸ್ ಯೋಜನೆ ಅಡಿ ಈವರೆಗೆ 40 ಲಕ್ಷ ಮನೆಗಳು ಮಂಜೂರು
ಪ್ರಧಾನ ಮಂತ್ರಿ ಆವಾಸ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 09, 2025 | 6:16 PM

Share

ನವದೆಹಲಿ, ಫೆಬ್ರುವರಿ 9: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ (ಪಿಎಂಎವೈ-ಜಿ) ಅಡಿ ಒಂಬತ್ತು ರಾಜ್ಯಗಳಲ್ಲಿ ಎರಡು ತಿಂಗಳಲ್ಲಿ ಸುಮಾರು 40 ಲಕ್ಷದಷ್ಟು ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 2024-25ರ ಹಣಕಾಸು ವರ್ಷಕ್ಕೆ ಒಟ್ಟು 84.37 ಲಕ್ಷ ಮನೆಗಳಿಗೆ ಗುರಿ ಇಡಲಾಗಿತ್ತು. ಈ ಪೈಕಿ ಈವರೆಗೆ 39.82 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.

2024-25ರ ಆರ್ಥಿಕ ವರ್ಷಕ್ಕೆ ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ ಗ್ರಾಮೀಣ ಆವಾಸ್ ಯೋಜನೆ ಅಡಿ 84,37,139 ಮನೆಗಳನ್ನು ನಿರ್ಮಿಸಲು ಗುರಿ ನಿಗದಿ ಮಾಡಲಾಗಿತ್ತು. ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಪಂಜಾಬ್, ರಾಜಸ್ಥಾನ, ಒಡಿಶಾ, ಮಣಿಪುರ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಜಾರ್ಖಂಡ್, ಹಿಮಾಚಲಪ್ರದೇಶ, ಹರ್ಯಾಣ, ಗುಜರಾತ್, ಅಸ್ಸಾಂ, ಬಿಹಾರ್ ಮತ್ತು ಛತ್ತೀಸ್​ಗಡ ರಾಜ್ಯಗಳ ಗ್ರಾಮೀಣ ಭಾಗಗಳಲ್ಲಿ ಈ ಯೋಜನೆಗೆ ಗುರಿ ಇಡಲಾಗಿತ್ತು.

ಇದನ್ನೂ ಓದಿ: ಭಾರತದಿಂದ ಹೊಸ ರಫ್ತು ಮೈಲಿಗಲ್ಲು; ಆಮದು ಹೆಚ್ಚಳವೂ ಶುಭಸೂಚಕವಾ? ಸಚಿವರು ಬಿಚ್ಚಿಟ್ಟ ಸತ್ಯ ಇದು

ಇದೇ ಡಿಸೆಂಬರ್ (2024) ಮತ್ತು ಜನವರಿ (2025) ಈ ಎರಡು ತಿಂಗಳಲ್ಲಿ ಒಂಬತ್ತು ರಾಜ್ಯಗಳಲ್ಲಿ 46,56,765 ಮನೆಗಳಿಗೆ ಗುರಿ ಮಾಡಲಾಗಿತ್ತು. ಕರ್ನಾಟಕ, ತಮಿಳುನಾಡು, ಅಸ್ಸಾಂ, ಬಿಹಾರ, ಛತ್ತೀಸ್​ಗಡ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನ್ ಈ 9 ರಾಜ್ಯಗಳಲ್ಲಿ 46.57 ಲಕ್ಷ ಮನೆಗಳ ಗುರಿಗೆ ಪ್ರತಿಯಾಗಿ 39,82,764 ಮನೆಗಳಿಗೆ ಸ್ಯಾಂಕ್ಷನ್ ಆಗಿದೆ.

ಏನಿದು ಪಿಎಂ ಆವಾಸ್ ಯೋಜನೆ?

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಬಡವರಿಗೆ ಸೂರು ಕಲ್ಪಿಸಲು ಸಹಾಯವಾಗಲು ಸರ್ಕಾರ ಕೈಗೊಂಡಿರುವ ಯೋಜನೆಯಾಗಿದೆ. 2015ರಲ್ಲಿ ಈ ಯೋಜನೆ ಮೊದಲುಗೊಳ್ಳಲಾಯಿತು. ನಗರಗಳಲ್ಲಿರುವ ಬಡವರಿಗೆ ಮನೆಗಳನ್ನು ನಿರ್ಮಿಸುವ ಯೋಜನೆ ಇದು. ಹಾಗೆಯೇ, ಗ್ರಾಮೀಣ ಭಾಗದಲ್ಲೂ ಪ್ರತ್ಯೇಕ ಪಿಎಂ ಆವಾಸ್ ಯೋಜನೆ ಇದೆ. ಇಲ್ಲೂ ಕೂಡ ಬಡವರನ್ನು ಈ ಸ್ಕೀಮ್​ನಲ್ಲಿ ಗುರಿ ಮಾಡಲಾಗಿದೆ. ಸರ್ಕಾರವು ಫಲಾಭವಿಗಳಿಗೆ ಮನೆ ನಿರ್ಮಾಣದಲ್ಲಿ ಸಹಾಯಧನ ನೀಡುತ್ತದೆ.

ಇದನ್ನೂ ಓದಿ: ಇನ್ನೈದು ವರ್ಷದಲ್ಲಿ ಭಾರತೀಯ ಸೆಮಿಕಂಡಕ್ಟರ್ ಮಾರುಕಟ್ಟೆಯ ಗಾತ್ರ 9 ಲಕ್ಷ ಕೋಟಿ ರೂ ದಾಟುವ ಸಾಧ್ಯತೆ

ನಗರ ಭಾಗದಲ್ಲಿ ಈವರೆಗೆ 1.18 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 90 ಲಕ್ಷಕ್ಕೂ ಅಧಿಕ ಮನೆಗಳ ನಿರ್ಮಾಣ ಪೂರ್ಣವಾಗಿದೆ. ಕೇಂದ್ರದಿಂದ 1.67 ಲಕ್ಷ ಕೋಟಿ ರೂ ಅನುದಾನ ಈವರೆಗೆ ಸಿಕ್ಕಿದೆ.

ಇನ್ನು, ಗ್ರಾಮೀಣ ಆವಾಸ್ ಯೋಜನೆ ಅಡಿ ಈವರೆಗೆ 3.37 ಕೋಟಿ ಮನೆಗಳಿಗೆ ಮಂಜೂರಾತಿ ಆಗಿದೆ. ಇದರಲ್ಲಿ 2.69 ಕೋಟಿ ಮನೆಗಳ ನಿರ್ಮಾಣ ಮುಗಿದಿದೆ. 3.49 ಲಕ್ಷ ಕೋಟಿ ಕೋಟಿ ರೂ ಸಹಾಯಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ