AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಗಳ ಮುಖ್ಯ ಆರ್ಥಿಕ ಸಲಹೆಗಾರ ಹಾಗೂ ಧೀಮಂತ ಆರ್ಥಿಕ ತಜ್ಞ ವಿವೇಕ್ ದೇಬರಾಯ್ ವಿಧಿವಶ

Bibek Debroy passes away: ಪ್ರಧಾನಿಗಳ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದ ವಿವೇಕ್ ದೇವ್ರಾಯ್ (69) ನವೆಂಬರ್ 1, ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ. ನೀತಿ ಆಯೋಗ್​ನ ಆರಂಭಿಕ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು 2019ರವರೆಗೂ ಅದರಲ್ಲಿದ್ದರು. 2017ರಿಂದ ಅವರು ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿದ್ದರು.

ಪ್ರಧಾನಿಗಳ ಮುಖ್ಯ ಆರ್ಥಿಕ ಸಲಹೆಗಾರ ಹಾಗೂ ಧೀಮಂತ ಆರ್ಥಿಕ ತಜ್ಞ ವಿವೇಕ್ ದೇಬರಾಯ್ ವಿಧಿವಶ
ವಿವೇಕ್ ದೇವರಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 01, 2024 | 12:21 PM

Share

ನವದೆಹಲಿ, ನವೆಂಬರ್ 1: ಹೆಸರಾಂತ ಆರ್ಥಿಕ ತಜ್ಞರಾಗಿದ್ದ, ಹಾಗೂ ಪ್ರಧಾನಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿಬೇಕ್ ದೇಬರಾಯ್ (Bibek Debroy) ಅವರು ಇಂದು ಶುಕ್ರವಾರ (ನ. 1) ಬೆಳಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. 1955ರಲ್ಲಿ ಮೇಘಾಲಯದಲ್ಲಿ ಜನರಿಸಿದ ವಿವೇಕ್ ದೇವರಾಯ್ ಅವರು ಪತ್ನಿಯನ್ನು ಅಗಲಿದ್ದಾರೆ. ಕೆಲ ವರ್ಷಗಳ ಹಿಂದೆ ಅವರಿಗೆ ಹೃದಯಾಘಾತವಾಗಿತ್ತು.

ವಿವೇಕ್ ದೇಬ್ರಾಯ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಡಾ. ಬಿಬೇಕ್ ದೇಬ್ರಾಯ್ ಅವರು ಆರ್ಥಿಕತೆ, ಇತಿಹಾಸ, ಸಂಸ್ಕೃತಿ, ರಾಜಕೀಯ, ಆದ್ಯಾತ್ಮ ಮತ್ತಿತರ ವಿಚಾರಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಭಾರತದ ಬೌದ್ಧಿಕ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿ ಹೋಗಿದ್ದಾರೆ. ಸಾರ್ವಜನಿಕ ನೀತಿಗೆ ಕೊಡುಗೆ ನೀಡುವುದರ ಜೊತೆಗೆ, ನಮ್ಮ ಪ್ರಾಚೀನ ಪಠ್ಯಗಳೊಂದಿಗೆ ಕೆಲಸ ಮಾಡಲು ಖುಷಿ ಪಡುತ್ತಿದ್ದರು,’ ಎಂದು ನರೇಂದ್ರ ಮೋದಿ ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬಿಪಿಎಲ್ ಗ್ರೂಪ್ ಸಂಸ್ಥಾಪಕ ಗೋಪಾಲನ್ ನಂಬಿಯಾರ್ ನಿಧನ; ರಾಜೀವ್ ಚಂದ್ರಶೇಖರ್​ಗೆ ಮಾವ ವಿಯೋಗ

ಪದ್ಮಶ್ರೀ ಮೊದಲಾದ ಹಲವು ಪ್ರಶಸ್ತಿ, ಸನ್ಮಾನಗಳನ್ನು ಪಡೆದಿರುವ ವಿವೇಕ್ ದೇಬ್ರಾಯ್ ಅವರು ಮೇಘಾಲಯದಲ್ಲಿ ಜನಿಸಿದರೂ, ಮುಖ್ಯವಾಗಿ ಓದಿದ್ದು ಕೋಲ್ಕತಾದಲ್ಲಿ. ಲಂಡನ್​ನ ಕೇಂಬ್ರಿಡ್​ನಲ್ಲಿ ಅರ್ಥಶಾಸ್ತ್ರದ ಉನ್ನತ ಶಿಕ್ಷಣ ಪಡೆದಿದ್ದರು.

ಆರ್ಥಿಕ ಅಸಮಾನತೆ ಮೊದಲಾದ ಅರ್ಥ ವಿಚಾರಗಳಲ್ಲಿ ಅವರಿಗೆ ಆಸಕ್ತಿ ಇತ್ತು. ಬಡತನಕ್ಕೆ ಹೊಸ ಮಾನದಂಡ ನಿಗದಿ ಮಾಡಬೇಕು ಎಂದು ಬಯಸಿದ್ದರು.

ನೀತಿ ಆಯೋಗ್ ಸ್ಥಾಪನೆಯಾದಾಗ ಆರಂಭಿಕ ಸದಸ್ಯರಲ್ಲಿ ವಿವೇಕ್ ದೇವ್ರಾಯ್ ಕೂಡ ಒಬ್ಬರು. 2019ರ ಜೂನ್ 5ರವರೆಗೂ ಅವರು ನೀತಿ ಆಯೋಗ್ ಸದಸ್ಯರಾಗಿದ್ದರು. 2017ರ ಸೆಪ್ಟೆಂಬರ್​ನಿಂದ ಅವರು ಪ್ರಧಾನಿಗಳಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯ (ಇಎಸಿ ಪಿಎಂ) ಅಧ್ಯಕ್ಷರಾಗಿದ್ದರು. 2024ರ ಜುಲೈ ತಿಂಗಳಲ್ಲಿ ಪುಣೆಯ ಗೋಖಲೆ ಇನ್ಸ್​ಟಿಟ್ಯೂಟ್ ಆಫ್ ಪೊಲಿಟಿಕ್ಸ್ ಅಂಡ್ ಎಕನಾಮಿಕ್ಸ್ ಸಂಸ್ಥೆಯ ಚಾನ್ಸಲರ್ ಆಗಿ ನೇಮಕವಾಗಿದ್ದರು. ಆದರೆ, ವೈಸ್ ಚಾನ್ಸಲರ್ ಡಾ. ಅಜಿತ್ ರಾಣಡೆ ವಜಾಗೊಂಡ ವಿವಾದಗಳ ನಡುವೆ ದೇವ್ರಾಯ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಪಿಎಂ ಸೂರ್ಯಘರ್ ಯೋಜನೆ ಸೂಪರ್ ಹಿಟ್; 6 ತಿಂಗಳಲ್ಲಿ 50 ಪರ್ಸೆಂಟ್ ಹೆಚ್ಚಾದ ಗೃಹ ಸೋಲಾರ್ ವಿದ್ಯುತ್; ಸ್ಕೀಮ್ ಪಡೆಯುವುದು ಹೇಗೆ?

ಭಾಷಾಂತರಕಾರರಾಗಿಯೂ ಸಾಧಕರಾಗಿದ್ದ ವಿವೇಕ್ ದೇವರಾಯ್

ವಿವೇಕ್ ದೇಬ್ರಾಯ್ ಅವರು ಅರ್ಥಶಾಸ್ತ್ರದಲ್ಲಷ್ಟೇ ಅಲ್ಲ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಗಮನೀಯವೆನಿಸುವ ಕೊಡುಗೆ ನೀಡಿದ್ದಾರೆ. ಆರ್ಥಿಕತೆಗೆ ಸಂಬಂಧಿಸಿದ ಹಲವು ಪುಸ್ತಕ ಹಾಗೂ ಲೇಖನಗಳನ್ನು ಬರೆದಿದ್ದಾರೆ. ಪ್ರಾಚೀನ ಭಾರತೀಯ ಶಾಸ್ತ್ರಗಳ ಪಠ್ಯಗಳನ್ನು ಆಂಗ್ಲ ಭಾಷೆಗೆ ತರ್ಜಿಮೆ ಮಾಡಿದ್ದಾರೆ. ರಾಮಾಯಣ, ಮಹಾಭಾರತ, ಪುರಾಣಗಳನ್ನು ಅವರು ಇಂಗ್ಲೀಷ್​ಗೆ ಭಾಷಾಂತರಿಸಿದ್ದಾರೆ. ಇದರಲ್ಲಿ ಅವರ ಹೆಸರು ಲಿಮ್ಕಾ ಬುಕ್ ಆಫ್ ರೆಕಾರ್ಡ್​​ನಲ್ಲಿ ಸೇರ್ಪಡೆಯಾಗಿದೆ.

ಬಿಬೇಕ್ ದೇಬ್ರಾಯ್ ಅವರು 50 ವರ್ಷ ವಯಸ್ಸಿನಲ್ಲಿ ಸಂಸ್ಕೃತ ಕಲಿತು, ಪ್ರಾಚೀನ ಪಠ್ಯಗಳನ್ನು ಇಂಗ್ಲೀಷ್​ಗೆ ತರ್ಜಿಮೆ ಮಾಡಿದ್ದರು. ಎಲ್ಲಾ ಮಹಾಪುರಾಣಗಳನ್ನು ಭಾಷಾಂತರಿಸುವ ಇರಾದೆಯಲ್ಲಿ ಅವರಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Fri, 1 November 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!