AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMFBY- ಪಿಎಂ ಫಸಲ್ ಬಿಮಾ ಯೋಜನೆ: 30 ಲಕ್ಷ ರೈತರಿಗೆ ಕೇಂದ್ರದಿಂದ 3,200 ಕೋಟಿ ರೂ ಬಿಡುಗಡೆ

PM Fasal Bima Yojana: ಪಿಎಂ ಫಸಲ್ ಬಿಮಾ ಯೋಜನೆ ಅಡಿ ಕೇಂದ್ರ ಸರ್ಕಾರ 30 ಲಕ್ಷ ರೈತರಿಗೆ 3,200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ರಾಜಸ್ಥಾನದ ಝುಂಝುನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಣ ಬಿಡುಗಡೆ ಮಾಡಿದ್ದಾರೆ. 2016ರಲ್ಲಿ ಆರಂಭವಾದ ಈ ಯೋಜನೆಯು ರೈತರ ಬೆಳೆಗಳಿಗೆ ಇರುವ ವಿಮಾ ಸ್ಕೀಮ್ ಆಗಿದೆ.

PMFBY- ಪಿಎಂ ಫಸಲ್ ಬಿಮಾ ಯೋಜನೆ: 30 ಲಕ್ಷ ರೈತರಿಗೆ ಕೇಂದ್ರದಿಂದ 3,200 ಕೋಟಿ ರೂ ಬಿಡುಗಡೆ
ಕೃಷಿಕರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 11, 2025 | 2:15 PM

Share

ಝುಂಝುನು, ಆಗಸ್ಟ್ 11: ರೈತರ ಬೆಳೆಗಳಿಗೆ ವಿಮಾ ರಕ್ಷಣೆ ನೀಡುವ ಪಿಎಂ ಫಸಲ್ ಬಿಮಾ ಯೋಜನೆ (PM Fasal Bima Yojana) ಅಡಿ ರೈತರ ಇನ್ಷೂರೆನ್ಸ್ ಕ್ಲೇಮ್​ಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಸೋಮವಾರ 30 ಲಕ್ಷ ರೈತರ (farmers) ಖಾತೆಗಳಿಗೆ ಒಟ್ಟು 3,200 ಕೋಟಿ ರೂ ಹಣ ವರ್ಗಾವಣೆ ಮಾಡಿದ್ದಾರೆ. ರಾಜಸ್ಥಾನದ ಝುಂಝುನು ಜಿಲ್ಲೆಯಲ್ಲಿ ಫಸಲ್ ಬಿಮಾ ಯೋಜನೆ ಅಡಿ ನಡೆದ ಕಾರ್ಯಕ್ರಮದಲ್ಲಿ ಅವರು ರೈತರ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡಿದ್ದಾರೆ.

ಅಧಿಕೃತ ಮಾಹಿತಿ ಪ್ರಕಾರ ಮಧ್ಯಪ್ರದೇಶ ಮತ್ತು ರಾಜಸ್ಥಾನದ ರೈತರಿಗೆ ಅತಿಹೆಚ್ಚು ಹಣ ರವಾನೆಯಾಗಿದೆ. ಮಧ್ಯಪ್ರದೇಶದ ರೈತರಿಗೆ 1,156 ಕೋಟಿ ರೂ ಸಿಕ್ಕರೆ, ರಾಜಸ್ಥಾನದ ರೈತರಿಗೆ 1,121 ಕೋಟಿ ರೂ ಸಿಕ್ಕಿದೆ. ಸುಮಾರು 923 ಕೋಟಿ ರೂ ಹಣವು ಇತರ ರಾಜ್ಯಗಳ ರೈತರ ಖಾತೆಗಳಿಗೆ ಹೋಗುತ್ತಿದೆ.

ಇದನ್ನೂ ಓದಿ: ಮ್ಯುಚುವಲ್ ಫಂಡ್ ಕಂಪನಿಗಳು ಟ್ರಾನ್ಸಾಕ್ಷನ್ ಶುಲ್ಕ, ಕಮಿಷನ್ ಕೊಡಬೇಕಿಲ್ಲ: ಸೆಬಿ ಕ್ರಮ

ಪಿಎಂ ಫಸನ್ ಬಿಮಾ ಯೋಜನೆ: ಕ್ಲೇಮ್ ಸೆಟಲ್ಮೆಂಟ್ ಬೇಗ ಆಗುತ್ತೆ…

ಪಿಎಂ ಫಸಲ್ ಬಿಮಾ ಯೋಜನೆ ಅಡಿ ಹೊಸ ಮಾದರಿ ಕ್ಲೇಮ್ ಸೆಟಲ್ಮೆಂಟ್ ಸಿಸ್ಟಂ ಅನ್ನು ರೂಪಿಸಲಾಗಿದೆ. ರೈತರ ಬೆಳೆ ನಷ್ಟಕ್ಕೆ ಬೇಗ ಪರಿಹಾರ ಸಿಗುತ್ತದೆ.

2025ರ ಮುಂಗಾರು ಋತು ಬಳಿಕ ಕೇಂದ್ರ ಸರ್ಕಾರ ಒಂದಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸಬ್ಸಿಡಿ ಕೊಡುಗೆ ನೀಡಲು ವಿಳಂಬ ಮಾಡಿದರೆ ರಾಜ್ಯ ಸರ್ಕಾರಗಳಿಗೆ ಶೇ. 12ರಷ್ಟು ದಂಡ ವಿಧಿಸಲಾಗುತ್ತದೆ. ಇನ್ಷೂರೆನ್ಸ್ ಕಂಪನಿಗಳು ಕ್ಲೇಮ್ ಸೆಟಲ್ ಮಾಡಲು ವಿಳಂಬ ತೋರಿದರೆ, ಅವುಗಳಿಗೂ ಶೇ. 12ರಷ್ಟು ಪೆನಾಲ್ಟಿ ಹಾಕಲಾಗುತ್ತದೆ.

ಏನಿದು ಪಿಎಂ ಫಸಲ್ ಬಿಮಾ ಯೋಜನೆ?

ಇದು ರೈತರಿಗೆಂದು ಇರುವ ಬೆಳೆ ವಿಮಾ ಸ್ಕೀಮ್. 2016ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ರೈತರು ತಮ್ಮ ಬೆಳೆಗಳಿಗೆ ಇನ್ಷೂರೆನ್ಸ್ ಮಾಡಿಸಬಹುದು. ನಿಗದಿತ ಇನ್ಷೂರೆನ್ಸ್ ಕಂಪನಿಗಳಿಂದ ವಿಮೆ ಪಡೆಯಬಹುದು. ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಂದ ಸಬ್ಸಿಡಿ ಸಿಗುತ್ತದೆ. ಪ್ರೀಮಿಯಮ್ ಬಹಳ ಕಡಿಮೆ ಇರುತ್ತದೆ.

ಇದನ್ನೂ ಓದಿ: ರೈತರ ಹಿತರಕ್ಷಣೆಗೆ ಪ್ರಧಾನಿ ಮೋದಿಗಿರುವ ಬದ್ಧತೆಯನ್ನು ಮೆಚ್ಚಿದ ಮಾಜಿ ಡಬ್ಲ್ಯುಎಚ್​ಒ ಡಿಡಿಜಿ ಸೌಮ್ಯಾ ಸ್ವಾಮಿನಾಥನ್

ಪ್ರಕೃತಿ ವಿಕೋಪ, ಕೆಟ್ಟ ಹವಾಗುಣ ಇತ್ಯಾದಿಯಿಂದ ಬೆಳೆಗಳಿಗೆ ಹಾನಿಯಾಗಿದ್ದರೆ ರೈತರು ವಿಮಾ ಹಣಕ್ಕೆ ಕ್ಲೇಮ್ ಸಲ್ಲಿಸಬಹುದು. ಅಧಿಕಾರಿಗಳು ರೈತರ ಜಮೀನಿಗೆ ಬಂದು ಸಮೀಕ್ಷೆ ನಡೆಸಿ ಬೆಳೆಹಾನಿ ಅಂದಾಜು ಮಾಡುತ್ತಾರೆ. ಅವರ ಶಿಫಾರಸು ಪ್ರಕಾರ ಕ್ಲೇಮ್ ಹಣ ನಿರ್ಧಾರವಾಗುತ್ತದೆ.

ಹೆಚ್ಚಿನ ಮಾಹಿತಿಗೆಗೆ ಪಿಎಂ ಫಸಲ್ ಬಿಮಾ ಯೋಜನೆ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬಹುದು. ಅದರ ಲಿಂಕ್ ಇಲ್ಲಿದೆ: pmfby.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?