AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Garib Kalyan Anna Yojana: ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ 2022ರ ಮಾರ್ಚ್ ತನಕ ವಿಸ್ತರಣೆ

ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆ 2022ರ ಮಾರ್ಚ್​ ತನಕ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

PM Garib Kalyan Anna Yojana: ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ 2022ರ ಮಾರ್ಚ್ ತನಕ ವಿಸ್ತರಣೆ
ಕೇಂದ್ರ ಸಚಿವ ಅನುರಾಗ್ ಠಾಕೂರ್
TV9 Web
| Edited By: |

Updated on: Nov 24, 2021 | 8:14 PM

Share

ಉಚಿತ ಪಡಿತರ ನೀಡಲು 2022ರ ಮಾರ್ಚ್​ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PM-GKY) ಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಳೆದ ವರ್ಷ ಕೊವಿಡ್ -19 ಬಿಕ್ಕಟ್ಟಿನಿಂದ ಏಕಾಏಕಿ ಉಂಟಾದ ಆರ್ಥಿಕ ಅಡೆತಡೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ವ್ಯಾಪ್ತಿಗೆ ಬರುವ ಎಲ್ಲ ಫಲಾನುಭವಿಗಳಿಗೆ ಪಿಎಂ-ಜಿಕೆವೈ ಅನ್ನು ಸರ್ಕಾರ ಘೋಷಿಸಿತ್ತು. ಈ ಯೋಜನೆಯು ನವೆಂಬರ್ 30ರಂದು ಕೊನೆಗೊಳ್ಳಲಿದೆ. ಈ ಯೋಜನೆಯಡಿ, ಸುಮಾರು 80 ಕೋಟಿ NFSA ಫಲಾನುಭವಿಗಳಿಗೆ ಸರ್ಕಾರವು 5 ಕೇಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ. ಐದನೇ ಹಂತದ ಆಹಾರ ಧಾನ್ಯಕ್ಕೆ ಅಂದಾಜು 53,344.52 ಕೋಟಿ ರೂಪಾಯಿ ಆಹಾರ ಸಬ್ಸಿಡಿ ದೊರೆಯಲಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ತಿಳಿಸಿದೆ. ಐದನೇ ಹಂತದಲ್ಲಿ ಆಹಾರ ಧಾನ್ಯಗಳ ಒಟ್ಟು ವಿತರಣೆ 163 ಲಕ್ಷ ಮೆಟ್ರಿಕ್ ಟನ್‌ಗಳ ನಿರೀಕ್ಷೆ ಇದೆ.

ಈ ಯೋಜನೆಯ ಹಂತ-I ಮತ್ತು ಹಂತ-II ಕ್ರಮವಾಗಿ ಏಪ್ರಿಲ್‌ನಿಂದ ಜೂನ್, 2020 ಮತ್ತು ಜುಲೈನಿಂದ ನವೆಂಬರ್, 2020ರ ವರೆಗೆ ಇತ್ತು. ಯೋಜನೆಯ ಹಂತ-III ಮೇನಿಂದ ಜೂನ್, 2021ರವರೆಗೆ ಇತ್ತು. ಯೋಜನೆಯ ಹಂತ-IV ಪ್ರಸ್ತುತ ಜುಲೈ-ನವೆಂಬರ್, 2021ರ ವರೆಗೆ ಇದೆ. PMGKAY-IV ಅಡಿಯಲ್ಲಿ ವಿತರಣೆಯು ಪ್ರಸ್ತುತ ನಡೆಯುತ್ತಿದೆ ಮತ್ತು ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಲಭ್ಯ ಇರುವ ವರದಿಗಳ ಪ್ರಕಾರ, ಶೇ 93.8ರಷ್ಟು ಆಹಾರ ಧಾನ್ಯಗಳನ್ನು ತೆಗೆಯಲಾಗಿದೆ ಮತ್ತು ಸುಮಾರು 37.32 LMT, 37.20 LMT, 36.87 LMT, 35.4 LMT ಮತ್ತು 17.9 LMT ಆಹಾರವನ್ನು ವಿತರಿಸಲಾಗಿದೆ. ಸುಮಾರು 74.64 ಕೋಟಿ, 74.4 ಕೋಟಿ, 73.75 ಕೋಟಿ, 70.8 ಕೋಟಿ ಮತ್ತು 35.8 ಕೋಟಿ ಫಲಾನುಭವಿಗಳು ಇದರ ಲಾಭ ಪಡೆದಿದ್ದಾರೆ.

ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆಯನ್ನು ಸುಧಾರಿಸಲು ಮತ್ತು ಬೆಲೆಗಳನ್ನು ಪರಿಶೀಲಿಸಲು OMSS ನೀತಿಯ ಅಡಿಯಲ್ಲಿ ಸರ್ಕಾರವು ದೊಡ್ಡ ಪ್ರಮಾಣದ ಗ್ರಾಹಕರಿಗೆ ಅಕ್ಕಿ ಮತ್ತು ಗೋಧಿಯನ್ನು ನೀಡುತ್ತಿದೆ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಔಪಚಾರಿಕತೆಯನ್ನು ಸಂಪುಟವು ಪೂರ್ಣಗೊಳಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಸಂಸತ್ತಿನ ಮುಂಬರುವ ಅಧಿವೇಶನದಲ್ಲಿ ಈ ಮೂರು ಕಾನೂನು ಹಿಂಪಡೆಯುವುದು ನಮ್ಮ ಆದ್ಯತೆಯಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್