AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಶೇ. 80ಕ್ಕೂ ಹೆಚ್ಚು ಭಾರತೀಯ ಕಂಪನಿಗಳಿಂದ ಬೆಂಬಲ

PM Internship scheme: ಟೀಮ್​ಲೀಸ್ ಎಜ್​ಟೆಕ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಯೋಜನೆಗೆ ಶೇ. 81ರಷ್ಟು ಕಾರ್ಪೊರೇಟ್ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸವೆ. ಇಂಟರ್ನ್​ಶಿಪ್ ಮಾಡಿದ ಶೇ. 10ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳನ್ನು ಪೂರ್ಣ ಉದ್ಯೋಗಕ್ಕೆ ಸೇರಿಸಿಕೊಳ್ಳಲು ಶೇ. 73ರಷ್ಟು ಕಂಪನಿಗಳು ಇಚ್ಛಿಸಿವೆ. ಪಿಎಂ ಇಂಟರ್ನ್​ಶಿಪ್ ಯೋಜನೆಯಲ್ಲಿ ಯುವಕ ಮತ್ತು ಯುವತಿಯರಿಗೆ ದೊಡ್ಡ ಕಂಪನಿಗಳಲ್ಲಿ ಒಂದು ವರ್ಷದ ನೈಜ ಕೆಲಸದ ತರಬೇತಿ ಸಿಗುತ್ತದೆ.

ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಶೇ. 80ಕ್ಕೂ ಹೆಚ್ಚು ಭಾರತೀಯ ಕಂಪನಿಗಳಿಂದ ಬೆಂಬಲ
ಉದ್ಯೋಗಿಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 17, 2025 | 2:43 PM

Share

ನವದೆಹಲಿ, ಜನವರಿ 17: ಕಳೆದ ವರ್ಷ ಆರಂಭವಾದ ಪಿಎಂ ಇಂಟರ್ನ್​ಶಿಪ್ ಸ್ಕೀಮ್​ಗೆ ಭಾರತೀಯ ಕಾರ್ಪೊರೇಟ್ ವಲಯದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಹೆಚ್ಚಿನ ಕಂಪನಿಗಳು ಈ ಮಹತ್ವದ ಯೋಜನೆಗೆ ಬೆಂಬಲ ನೀಡಿವೆ. ಟೀಮ್​ಲೀಸ್ ಎಜ್​​ಟೆಕ್ ಎನ್ನುವ ಕಂಪನಿಯ ವರದಿಯೊಂದರ ಪ್ರಕಾರ ಶೇ. 81ರಷ್ಟು ಭಾರತೀಯ ಕಂಪನಿಗಳು ಇಂಟರ್ನ್​ಶಿಪ್ ಯೋಜನೆಗೆ ಬೆಂಬಲ ನೀಡಿವೆ. 932 ಕಂಪನಿಗಳನ್ನು ಸಮೀಕ್ಷೆಗೆ ಒಳಪಡಿಸಿದ ಬಳಿಕ ಕೆಲ ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಕಂಪನಿಗಳಲ್ಲಿ ಶೇ. 73ರಷ್ಟು ಕಂಪನಿಗಳು ಇಂಟರ್ನ್​ಶಿಪ್ ಬಳಿಕ ಶೇ. 10ರಷ್ಟು ಅಭ್ಯರ್ಥಿಗಳನ್ನು ಪೂರ್ಣಪ್ರಮಾಣದ ಉದ್ಯೋಗಕ್ಕೆ ಸೇರಿಸಿಕೊಳ್ಳಲು ಇಚ್ಛಿಸಿವೆ. ಶೇ. 76ರಷ್ಟು ಕಂಪನಿಗಳು ಇಂಟರ್ನ್​ಶಿಪ್ ಅಭ್ಯರ್ಥಿಗಳನ್ನು ತಂತ್ರಜ್ಞಾನ ಕೆಲಸಗಳಲ್ಲಿ ನಿಯೋಜಿಸಲು ಆಸಕ್ತಿ ತೋರಿವೆ.

ಇದನ್ನೂ ಓದಿ: ಹತ್ತಿ ಬೆಳೆಗಾರರಿಗೆ ಡ್ರಿಪ್ ಇರಿಗೇಶನ್ ಸಿಸ್ಟಂ; ಬಜೆಟ್​ನಲ್ಲಿ 500 ಕೋಟಿ ರೂ ನೀಡಲು ಒತ್ತಾಯ

ಶೇ. 81ರಷ್ಟು ಕಂಪನಿಗಳು ಈ ಪಿಎಂ ಇಂಟರ್ನ್​ಶಿಪ್ ಸ್ಕೀಮ್ ಅನ್ನು ಪೂರ್ಣವಾಗಿ ಬೆಂಬಲಿಸಿದ್ದು, ಇದು ಎಲ್ಲಾ ಕಾರ್ಪೊರೇಟ್ ಕಂಪನಿಗಳಿಗೂ ವಿಸ್ತರಣೆ ಆಗಬೇಕು ಎಂದು ಅಭಿಪ್ರಾಯಪಟ್ಟಿವೆ. ಹಾಗೆಯೇ, ಒಂದು ವರ್ಷದ ಜೊತೆಗೆ ಕಡಿಮೆ ಅವಧಿಯ ಇಂಟರ್ನ್​ಶಿಪ್​ಗಳಿಗೂ ಈ ಸ್ಕೀಮ್ ಅಡಿಯಲ್ಲಿ ಅವಕಾಶ ನೀಡಬೇಕು ಎಂದು ಹಲವು ಕಂಪನಿಗಳು ವಾದಿಸಿವೆ ಎಂದು ಟೀಮ್​ಲೀಸ್ ಎಜ್​ಟೆಕ್ ವರದಿಯಲ್ಲಿ ತಿಳಿಸಲಾಗಿದೆ.

ಏನಿದು ಪಿಎಂ ಇಂಟರ್ನ್​ಶಿಪ್ ಯೋಜನೆ?

ಓದು ಮುಗಿಸಿರುವ ಯುವಕ ಮತ್ತು ಯುವತಿಯರಿಗೆ ದೊಡ್ಡ ಕಂಪನಿಗಳಲ್ಲಿ ಒಂದು ವರ್ಷದ ತರಬೇತಿ (ಇಂಟರ್ನ್​ಶಿಪ್) ನೀಡುವ ಕಾರ್ಯವೇ ಇಂಟರ್ನ್​ಶಿಪ್ ಸ್ಕೀಮ್. ಈ ಒಂದು ವರ್ಷದಲ್ಲಿ ಸರ್ಕಾರದಿಂದ ಇಂಟರ್ನೀಗಳಿಗೆ ಸ್ಟೈಪೆಂಡ್ ರೀತಿಯಲ್ಲಿ ಪ್ರತೀ ತಿಂಗಳು 5,000 ರೂ ನೀಡಲಾಗುತ್ತದೆ.

ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಅಥವಾ ಸಿಎಸ್​ಆರ್ ಫಂಡ್ ಅತಿ ಹೆಚ್ಚು ಹೊಂದಿರುವ ಟಾಪ್ 500 ಕಂಪನಿಗಳನ್ನು ಸದ್ಯ ಇಂಟರ್ನ್​ಶಿಪ್ ಸ್ಕೀಮ್​ಗೆ ಆಯ್ಕೆ ಮಾಡಲಾಗಿದೆ. ಇಂಟರ್ನ್ ಆಗಬಯಸುವ ಅಭ್ಯರ್ಥಿಗಳು ಹಾಗೂ ಕಂಪನಿಗಳಿಗೆ ಒಂದು ಪ್ರತ್ಯೇಕ ಪ್ಲಾಟ್​ಫಾರ್ಮ್ ರೂಪಿಸಲಾಗಿದ್ದು, ಅಲ್ಲಿ ಅಭ್ಯರ್ಥಿಗಳ ವಿದ್ಯಾಭ್ಯಾಸ ಮತ್ತು ಆಸಕ್ತಿ ಕ್ಷೇತ್ರಗಳ ಅನುಸಾರ ಪಟ್ಟಿ ಮಾಡಲಾಗುತ್ತದೆ. ಕಂಪನಿಗಳು ತಮಗೆ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಇಂಟರ್ನ್​ಶಿಪ್​ಗೆ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಸ್ಟಾರ್ಟಪ್​ಗಳ ಸಂಖ್ಯೆ 10 ವರ್ಷದಲ್ಲಿ 400 ಪಟ್ಟು ಹೆಚ್ಚಳ; ವಿಶ್ವದ ಸ್ಟಾರ್ಟಪ್ ಅಡ್ಡೆಯಾಗುತ್ತಿದೆ ಭಾರತ

ಕಂಪನಿಗಳು ತಮ್ಮ ಸಿಎಸ್​ಆರ್ ಫಂಡ್​ನಿಂದ ಹಣವನ್ನು ಈ ಇಂಟರ್ನೀಗಳ ತರಬೇತಿ ವೆಚ್ಚಕ್ಕೆ ಬಳಸಬಹುದು.

ಪಿಎಂ ಇಂಟರ್ನ್​ಶಿಪ್ ಯೋಜನೆಗೆ ಯುವಜನರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಮೊದಲ ವರ್ಷದ ಇಂಟರ್ನ್​ಶಿಪ್​ಗೆ ಆರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 1.27 ಲಕ್ಷ ಇಂಟರ್ನ್ ಅವಕಾಶಗಳಿವೆ. ಒಟ್ಟು ಒಂದು ಕೋಟಿಗೂ ಅಧಿಕ ಯುವಕ ಮತ್ತು ಯುವತಿಯರಿಗೆ ಈ ಯೋಜನೆಯಡಿ ತರಬೇತಿ ನೀಡುವ ಗುರಿ ಸರ್ಕಾರದ್ದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ