AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಇಂಟರ್ನ್​ಶಿಪ್ ಸ್ಕೀಮ್​ಗೆ ಭರ್ಜರಿ ಸ್ಪಂದನೆ; ಒಂದೇ ದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ನೊಂದಣಿ

PM Internship scheme gets great response: ಪ್ರಧಾನಮಂತ್ರಿ ಇಂಟರ್ನ್​ಶಿಪ್ ಯೋಜನೆಯಲ್ಲಿ ಒಂದೇ ದಿನದಲ್ಲಿ 1.55 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. 193 ಕಂಪನಿಗಳು ಇಂಟರ್ನ್​ಶಿಪ್ ಅವಕಾಶ ನೀಡಿವೆ. ಒಂದು ಕೋಟಿ ಯುವಕ ಮತ್ತು ಯುವತಿಯರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಸಲುವಾಗಿ ಆರಂಭವಾದ ಈ ಯೋಜನೆ ನಿರೀಕ್ಷಿತ ರೀತಿಯಲ್ಲಿ ಒಳ್ಳೆಯ ಸ್ಪಂದನೆ ಪಡೆದಿದೆ.

ಪಿಎಂ ಇಂಟರ್ನ್​ಶಿಪ್ ಸ್ಕೀಮ್​ಗೆ ಭರ್ಜರಿ ಸ್ಪಂದನೆ; ಒಂದೇ ದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ನೊಂದಣಿ
ಯುವಜನರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 14, 2024 | 11:08 AM

Share

ನವದೆಹಲಿ, ಅಕ್ಟೋಬರ್ 14: ಒಂದು ಕೋಟಿ ಯುವಕ ಮತ್ತು ಯುವತಿಯರಿಗೆ ನೈಜ ಉದ್ಯೋಗ ತರಬೇತಿ ಕಲ್ಪಿಸುವ ಉದ್ದೇಶದಿಂದ ಆರಂಭಿಸಲಾದ ಪಿಎಂ ಇಂಟರ್ನ್​ಶಿಪ್ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಸ್ಕೀಮ್​ನ ಪೋರ್ಟಲ್ ಆರಂಭವಾದ ಒಂದೇ ದಿನಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಸರ್ಕಾರ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ಮಾಡಿರುವ ವರದಿ ಪ್ರಕಾರ ಪೋರ್ಟಲ್​ನಲ್ಲಿ ಒಂದು ದಿನದಲ್ಲಿ ನೊಂದಾಯಿಸಿಕೊಂಡವರ ಸಂಖ್ಯೆ 1,55,109 ಇದೆ. ಎಲ್ ಅಂಡ್ ಟಿ, ರಿಲಾಯನ್ಸ್ ಸೇರಿದಂತೆ 193 ಕಂಪನಿಗಳು ಇದೇ ಪ್ಲಾಟ್​ಫಾರ್ಮ್​ನಲ್ಲಿ ಇಂಟರ್ನ್​ಶಿಪ್ ಅವಕಾಶವನ್ನು ಒದಗಿಸಿವೆ.

ಮಾರುತಿ ಸುಜುಕಿ, ಎಲ್ ಅಂಡ್ ಟಿ, ರಿಲಾಯನ್ಸ್ ಇಂಡಸ್ಟ್ರೀಸ್, ಮುತ್ತೂಟ್ ಫೈನಾನ್ಸ್, ಜುಬಿಲೆಂಟ್ ಫೂಡ್​ವರ್ಕ್ಸ್ ಇತ್ಯಾದಿ ಪ್ರಮುಖ ಖಾಸಗಿ ಸಂಸ್ಥೆಗಳು ಈ ಪಟ್ಟಿಯಲ್ಲಿವೆ. ತೈಲ ಅನಿಲ, ಹೋಟೆಲ್, ವಾಹನ, ಬ್ಯಾಂಕಿಂಗ್ ಮೊದಲಾದ ವಿವಿಧ ವಲಯಗಳ ಕಂಪನಿಗಳು ಈ ಯೋಜನೆಯಲ್ಲಿ ಕೈಜೋಡಿಸಿವೆ.

ಇದನ್ನೂ ಓದಿ: ಭಾರತದ ‘ಮಹಾರತ್ನ’ ಪಟ್ಟ ಗಿಟ್ಟಿಸಿದ ಎಚ್​ಎಎಲ್; ಈ ಗೌರವ ಸಿಗಲು ಮಾನದಂಡಗಳೇನು..?

ಇಂಟರ್ನ್​ಶಿಪ್ ಸ್ಕೀಮ್​ನಿಂದ ಏನು ಉಪಯೋಗ?

ವಿದ್ಯಾಭ್ಯಾಸ ಮುಗಿಸಿ ಇನ್ನೂ ಕೆಲಸಕ್ಕೆ ಸೇರದ, ಮತ್ತು ಕೌಶಲ್ಯ ಕೊರತೆಯಿಂದ ಕೆಲಸ ದೊರಕದ ಯುವಕ ಮತ್ತು ಯುವತಿಯರಿಗೆ ಉದ್ಯೋಗಾವಕಾಶ ಹೆಚ್ಚಿಸಲು ಸರ್ಕಾರ ಇಂಟರ್ನ್​ಶಿಪ್ ಯೋಜನೆ ಜಾರಿಗೊಳಿಸಿದೆ. ಇಂಟರ್ನ್​ಗಳಾಗುವ ಮೂಲಕ ಒಂದು ವರ್ಷ ಕೆಲಸದ ಅನುಭವ ಗಿಟ್ಟಿಸಿ, ಉದ್ಯೋಗಾವಕಾಶ ಹೆಚ್ಚಿಸಿಕೊಳ್ಳಬಹುದು. ಟಾಪ್ 500 ಕಂಪನಿಗಳಲ್ಲಿ ಸಿಕ್ಕ ಕೆಲಸ ಅನುಭವವು ಅಭ್ಯರ್ಥಿಗಳಿಗೆ ಅಗತ್ಯ ಕೌಶಲ್ಯ ಮತ್ತು ಆತ್ಮವಿಶ್ವಾಸ ತಂದುಕೊಡುವ ನಿರೀಕ್ಷೆ ಇದೆ. ಇದೇ ಉದ್ದೇಶದಿಂದ ಸರ್ಕಾರ ಪಿಎಂ ಇಂಟರ್ನ್​ಶಿಪ್ ಸ್ಕೀಮ್ ಆರಂಭಿಸಿದೆ.

ಇದರಲ್ಲಿ ಅಭ್ಯರ್ಥಿಗಳಿಗೆ ಆರಂಭದಲ್ಲಿ ಲಂಪ್ಸಮ್ ಆಗಿ 6,000 ರೂ ನೀಡಲಾಗುತ್ತದೆ. ಆ ಬಳಿಕ ಸರ್ಕಾರ ಪ್ರತೀ ತಿಂಗಳು 4,500 ರೂ ಸಹಾಯಧನ ಒದಗಿಸುತ್ತದೆ. ಕಂಪನಿ ವತಿಯಿಂದ ಮಾಸಿಕ 500 ರೂವರೆಗೆ ಹಣವನ್ನು ನೀಡಬಹುದು. ಈ ತರಬೇತಿ ಸ್ಕೀಮ್ ಒಂದು ವರ್ಷದ ಅವಧಿ ಇರಲಿದ್ದು, ಒಬ್ಬ ಅಭ್ಯರ್ಥಿಗೆ 66,000 ರೂ ಧನಸಹಾಯ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಟಾಪ್ ಕಂಪನಿಗಳಲ್ಲಿ ತರಬೇತಿ, ಜೊತೆಗೆ ವರ್ಷಕ್ಕೆ 66,000 ರೂ ಕೊಡುಗೆ; ಶಿಕ್ಷಣ, ವಯಸ್ಸು ಇತ್ಯಾದಿ ಅರ್ಹತೆಗಳ ವಿವರ

ಈ ಯೋಜನೆಗೆಂದು ನಿರ್ದಿಷ್ಟವಾದ ಪೋರ್ಟಲ್ ಅನ್ನು ಆರಂಭಿಸಲಾಗಿದೆ. ಇದರಲ್ಲಿ ಆಸಕ್ತ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಬಹುದು. ತಮ್ಮ ವಿದ್ಯಾಭ್ಯಾಸ ಹಾಗೂ ಕೆಲಸ ಮಾಡಲು ಇಚ್ಛಿಸುವ ಕ್ಷೇತ್ರಗಳನ್ನು ಆಯ್ದುಕೊಳ್ಳಬಹುದು. ಅದೇ ವೇಳೆ ಪ್ರಮುಖ ಕಂಪನಿಗಳು ತಮ್ಮಲ್ಲಿ ಇಂಟರ್ನ್​ಶಿಪ್ ಅವಕಾಶ ಇದ್ದರೆ ಅದನ್ನು ನಮೂದಿಸಬಹುದು. ಯಾವ ಇಂಟರ್ನ್​ಶಿಪ್ ಹುದ್ದೆಗಳಿಗೆ ಯಾವ ಅಭ್ಯರ್ಥಿಗಳು ಸೂಕ್ತ ಎಂಬುದನ್ನು ಪೋರ್ಟಲ್​ನಲ್ಲೇ ನಿರ್ಧರಿಸಿ, ಶಾರ್ಟ್​ಲಿಸ್ಟ್ ಮಾಡಲಾಗುತ್ತದೆ. ಕಂಪನಿಗಳು ತಮಗೆ ಬೇಕಾದ ಅಭ್ಯರ್ಥಿಗಳನ್ನು ಆಯ್ದುಕೊಳ್ಳಬಹುದು.

ದೇಶಾದ್ಯಂತ 737 ಜಿಲ್ಲೆಗಳಲ್ಲಿ ಇಂಟರ್ನ್​ಶಿಪ್ ಸ್ಕೀಮ್ ಅಡಿಯಲ್ಲಿ ತರಬೇತಿ ಅವಕಾಶ ಇರಲಿದೆ. ಈ ಸ್ಕೀಮ್​ಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 21ರಿಂದ 24 ವರ್ಷದೊಳಗಿರಬೇಕು. ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಇದೆ. ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಪದವೀಧರರೂ ಅರ್ಜಿ ಸಲ್ಲಿಸಬಹುದು. ಯಾವುದೇ ಕಂಪನಿಯಲ್ಲಿ ಪೂರ್ಣಾವಧಿ ಕೆಲಸ ಮಾಡಿರಕೂಡದು. ಇವೇ ಮುಂತಾದ ಕೆಲ ಷರತ್ತುಗಳಿವೆ. ಈ ಸ್ಕೀಮ್​ನ ಪೋರ್ಟಲ್​ನ ವಿಳಾಸ ಇಂತಿದೆ: pminternship.mca.gov.in

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!