AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್: ಶೀಘ್ರದಲ್ಲೇ 14ನೇ ಕಂತಿನ ಹಣ ಬಿಡುಗಡೆ; ಸ್ವಯಂಪ್ರೇರಿತವಾಗಿ ಸ್ಕೀಮ್ ಬಿಟ್ಟುಕೊಡುವ ಅವಕಾಶ

Voluntary Surrender of PM Kisan Benefits: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಜುಲೈ 27ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಹಾಗೆಯೇ, ಯೋಜನೆಯ ಹಣ ತಮಗೆ ಬೇಡ ಎಂದನಿಸಿದವರು ಅದನ್ನು ಬಿಟ್ಟುಕೊಡುವ ಆಯ್ಕೆಯೂ ಇದೆ.

PM Kisan: ಪಿಎಂ ಕಿಸಾನ್: ಶೀಘ್ರದಲ್ಲೇ 14ನೇ ಕಂತಿನ ಹಣ ಬಿಡುಗಡೆ; ಸ್ವಯಂಪ್ರೇರಿತವಾಗಿ ಸ್ಕೀಮ್ ಬಿಟ್ಟುಕೊಡುವ ಅವಕಾಶ
ಪಿಎಂ ಕಿಸಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 26, 2023 | 12:37 PM

Share

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Scheme) ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಒಂದು ದಿನ ಬಾಕಿ ಇದೆ. ವರದಿಗಳ ಪ್ರಕಾರ ಜುಲೈ 27ಕ್ಕೆ 14ನೇ ಕಂತಿನ ಹಣ ರಿಲೀಸ್ ಆಗುವ ನಿರೀಕ್ಷೆ ಇದೆ. ಪಿಎಂ ಕಿಸಾನ್ ಯೋಜನೆಯ 8 ಕೋಟಿಗೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗುರುವಾರ 2,000 ರೂ ಹಣ ನೇರವಾಗಿ ವರ್ಗಾವಣೆ ಆಗಲಿದೆ. 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯು ಬಡ ಮತ್ತು ಮಧ್ಯಮ ರೈತರಿಗೆ ವ್ಯವಸಾಯಕ್ಕೆ ಧನಸಹಾಯ ಕೊಡುವ ಉದ್ದೇಶ ಒಳಗೊಂಡಿದೆ. ಕೇಂದ್ರ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಫಲಾನುಭವಿ ರೈತರಿಗೆ ಕೊಡುತ್ತದೆ. ಒಮ್ಮೆಗೇ 6,000 ರೂ ಕೊಡುವ ಬದಲು 2,000 ರೂಗಳ 3 ಕಂತುಗಳಲ್ಲಿ ಹಣ ವರ್ಗಾವಣೆ ಮಾಡುತ್ತದೆ.

ಸ್ವ ಇಚ್ಛೆಯಿಂದ ಯೋಜನೆ ಬಿಟ್ಟುಕೊಡುವ ಅವಕಾಶ

ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.

ಒಂದು ವೇಳೆ ಯೋಜನೆಯ ಲಾಭ ಪಡೆಯುತ್ತಿರುವ ರೈತರಲ್ಲಿ ಯಾರಿಗಾದರೂ ಈ ಯೋಜನೆ ತಮಗೆ ಬೇಡ ಎಂದು ಅನಿಸಿದಲ್ಲಿ ಸ್ವಯಂಪ್ರೇರಿತವಾಗಿ ಬಿಟ್ಟುಕೊಡುವ ಅವಕಾಶವನ್ನು ಇತ್ತೀಚೆಗೆ ಒದಗಿಸಲಾಗಿದೆ.

ಇದನ್ನೂ ಓದಿ: Arecanut Price 25 July: ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪಿಎಂ ಕಿಸಾನ್ ಲಾಭ ಬಿಟ್ಟುಕೊಡುವುದು ಹೇಗೆ?

  • ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ: pmkisan.gov.in
  • ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ‘ವಾಲಂಟರಿ ಸರೆಂಡರ್ ಆಫ್ ಪಿಎಂ ಕಿಸಾನ್ ಬೆನಿಫಿಟ್ಸ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ರಿಜಿಸ್ಟ್ರೇಶನ್ ನಂಬರ್, ಕ್ಯಾಪ್ಚಾ ಕೋಡ್ ಹಾಕಿ ಒಟಿಪಿ ಪಡೆಯಿರಿ.
  • ಒಟಿಪಿ ಹಾಕಿದ ಮೇಲೆ ನೀವು ಆವರೆಗೂ ಪಡೆದ ಒಟ್ಟು ಕಂತುಗಳ ಹಣದ ವಿವರ ಕಾಣುತ್ತದೆ
  • ಪಿಎಂ ಕಿಸಾನ್ ಬೆನಿಫಿಟ್ ಬಿಟ್ಟುಕೊಡಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಅದಕ್ಕೆ ಯೆಸ್ ಎಂದು ಕ್ಲಿಕ್ ಮಾಡಿ, ಒಟಿಪಿ ಹಾಕಿರಿ

ಇದಾದ ಬಳಿಕ ನಿಮಗೆ ಮುಂದಿನ ಕಂತುಗಳು ಸಿಗುವುದಿಲ್ಲ.

ಇದನ್ನೂ ಓದಿ: Indian Economy: ಮೂರ್ನಾಲ್ಕು ದಶಕದಲ್ಲಿ ಭಾರತವೇ ವಿಶ್ವದ ನಂಬರ್ ಒನ್: ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ

ಪಿಎಂ ಕಿಸಾನ್ ಯೋಜನೆಯಲ್ಲಿ ಹಿಂದೆ ಬಂದ ಹಣವನ್ನು ವಾಪಸ್ ಕೊಡಬೇಕಾ?

ನೀವು ಪಿಎಂ ಕಿಸಾನ್ ಯೋಜನೆಯ ಬೆನಿಫಿಟ್ ಅನ್ನು ಬಿಟ್ಟುಕೊಡುವಾಗ ನಿಮಗೆ ಹಿಂದೆ ಸಂದಾಯವಾದ ಹಣದ ವಿವರ ಕಾಣುತ್ತದೆ. ಅಷ್ಟು ಹಣವನ್ನು ನೀವು ಬಿಟ್ಟುಕೊಡಬೇಕು ಎಂದು ಅಲ್ಲ. ನಿಮಗೆ ಹಿಂದೆ ಬಂದ ಆ ಹಣವನ್ನು ವಾಪಸ್ ಮಾಡಬೇಕಾಗಿಲ್ಲ. ಮುಂದಿನ ಕಂತುಗಳಷ್ಟೇ ಬರುವುದು ನಿಲ್ಲುತ್ತವೆ.

ಅಷ್ಟೇ ಅಲ್ಲ, ನಿಮಗೆ ಸರ್ಕಾರದಿಂದ ಪ್ರಶಂಸಾ ಪತ್ರವೂ ಸಿಗುತ್ತದೆ. ಹಿಂದೆ ಗ್ಯಾಸ್ ಸಬ್ಸಿಡಿ ವಿಚಾರದಲ್ಲೂ ಸರ್ಕಾರ ಗಿವ್ ಅಪ್ ಕೆಂಪೇನ್ ಮಾಡಿತ್ತು. ಆಗಲೂ ಕೋಟ್ಯಂತರ ಜನರು ಸಬ್ಸಿಡಿ ಬೇಡವೆಂದು ನಿರ್ಧರಿಸಿದ್ದರು. ಪಿಎಂ ಕಿಸಾನ್ ಯೋಜನೆಯಲ್ಲೂ ಜನರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡುವ ಅವಕಾಶ ಕೊಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್