Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್: ಶೀಘ್ರದಲ್ಲೇ 14ನೇ ಕಂತಿನ ಹಣ ಬಿಡುಗಡೆ; ಸ್ವಯಂಪ್ರೇರಿತವಾಗಿ ಸ್ಕೀಮ್ ಬಿಟ್ಟುಕೊಡುವ ಅವಕಾಶ

Voluntary Surrender of PM Kisan Benefits: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಜುಲೈ 27ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಹಾಗೆಯೇ, ಯೋಜನೆಯ ಹಣ ತಮಗೆ ಬೇಡ ಎಂದನಿಸಿದವರು ಅದನ್ನು ಬಿಟ್ಟುಕೊಡುವ ಆಯ್ಕೆಯೂ ಇದೆ.

PM Kisan: ಪಿಎಂ ಕಿಸಾನ್: ಶೀಘ್ರದಲ್ಲೇ 14ನೇ ಕಂತಿನ ಹಣ ಬಿಡುಗಡೆ; ಸ್ವಯಂಪ್ರೇರಿತವಾಗಿ ಸ್ಕೀಮ್ ಬಿಟ್ಟುಕೊಡುವ ಅವಕಾಶ
ಪಿಎಂ ಕಿಸಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 26, 2023 | 12:37 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Scheme) ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಒಂದು ದಿನ ಬಾಕಿ ಇದೆ. ವರದಿಗಳ ಪ್ರಕಾರ ಜುಲೈ 27ಕ್ಕೆ 14ನೇ ಕಂತಿನ ಹಣ ರಿಲೀಸ್ ಆಗುವ ನಿರೀಕ್ಷೆ ಇದೆ. ಪಿಎಂ ಕಿಸಾನ್ ಯೋಜನೆಯ 8 ಕೋಟಿಗೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗುರುವಾರ 2,000 ರೂ ಹಣ ನೇರವಾಗಿ ವರ್ಗಾವಣೆ ಆಗಲಿದೆ. 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯು ಬಡ ಮತ್ತು ಮಧ್ಯಮ ರೈತರಿಗೆ ವ್ಯವಸಾಯಕ್ಕೆ ಧನಸಹಾಯ ಕೊಡುವ ಉದ್ದೇಶ ಒಳಗೊಂಡಿದೆ. ಕೇಂದ್ರ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಫಲಾನುಭವಿ ರೈತರಿಗೆ ಕೊಡುತ್ತದೆ. ಒಮ್ಮೆಗೇ 6,000 ರೂ ಕೊಡುವ ಬದಲು 2,000 ರೂಗಳ 3 ಕಂತುಗಳಲ್ಲಿ ಹಣ ವರ್ಗಾವಣೆ ಮಾಡುತ್ತದೆ.

ಸ್ವ ಇಚ್ಛೆಯಿಂದ ಯೋಜನೆ ಬಿಟ್ಟುಕೊಡುವ ಅವಕಾಶ

ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.

ಒಂದು ವೇಳೆ ಯೋಜನೆಯ ಲಾಭ ಪಡೆಯುತ್ತಿರುವ ರೈತರಲ್ಲಿ ಯಾರಿಗಾದರೂ ಈ ಯೋಜನೆ ತಮಗೆ ಬೇಡ ಎಂದು ಅನಿಸಿದಲ್ಲಿ ಸ್ವಯಂಪ್ರೇರಿತವಾಗಿ ಬಿಟ್ಟುಕೊಡುವ ಅವಕಾಶವನ್ನು ಇತ್ತೀಚೆಗೆ ಒದಗಿಸಲಾಗಿದೆ.

ಇದನ್ನೂ ಓದಿ: Arecanut Price 25 July: ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ಪಿಎಂ ಕಿಸಾನ್ ಲಾಭ ಬಿಟ್ಟುಕೊಡುವುದು ಹೇಗೆ?

  • ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ: pmkisan.gov.in
  • ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ‘ವಾಲಂಟರಿ ಸರೆಂಡರ್ ಆಫ್ ಪಿಎಂ ಕಿಸಾನ್ ಬೆನಿಫಿಟ್ಸ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ರಿಜಿಸ್ಟ್ರೇಶನ್ ನಂಬರ್, ಕ್ಯಾಪ್ಚಾ ಕೋಡ್ ಹಾಕಿ ಒಟಿಪಿ ಪಡೆಯಿರಿ.
  • ಒಟಿಪಿ ಹಾಕಿದ ಮೇಲೆ ನೀವು ಆವರೆಗೂ ಪಡೆದ ಒಟ್ಟು ಕಂತುಗಳ ಹಣದ ವಿವರ ಕಾಣುತ್ತದೆ
  • ಪಿಎಂ ಕಿಸಾನ್ ಬೆನಿಫಿಟ್ ಬಿಟ್ಟುಕೊಡಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಅದಕ್ಕೆ ಯೆಸ್ ಎಂದು ಕ್ಲಿಕ್ ಮಾಡಿ, ಒಟಿಪಿ ಹಾಕಿರಿ

ಇದಾದ ಬಳಿಕ ನಿಮಗೆ ಮುಂದಿನ ಕಂತುಗಳು ಸಿಗುವುದಿಲ್ಲ.

ಇದನ್ನೂ ಓದಿ: Indian Economy: ಮೂರ್ನಾಲ್ಕು ದಶಕದಲ್ಲಿ ಭಾರತವೇ ವಿಶ್ವದ ನಂಬರ್ ಒನ್: ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ

ಪಿಎಂ ಕಿಸಾನ್ ಯೋಜನೆಯಲ್ಲಿ ಹಿಂದೆ ಬಂದ ಹಣವನ್ನು ವಾಪಸ್ ಕೊಡಬೇಕಾ?

ನೀವು ಪಿಎಂ ಕಿಸಾನ್ ಯೋಜನೆಯ ಬೆನಿಫಿಟ್ ಅನ್ನು ಬಿಟ್ಟುಕೊಡುವಾಗ ನಿಮಗೆ ಹಿಂದೆ ಸಂದಾಯವಾದ ಹಣದ ವಿವರ ಕಾಣುತ್ತದೆ. ಅಷ್ಟು ಹಣವನ್ನು ನೀವು ಬಿಟ್ಟುಕೊಡಬೇಕು ಎಂದು ಅಲ್ಲ. ನಿಮಗೆ ಹಿಂದೆ ಬಂದ ಆ ಹಣವನ್ನು ವಾಪಸ್ ಮಾಡಬೇಕಾಗಿಲ್ಲ. ಮುಂದಿನ ಕಂತುಗಳಷ್ಟೇ ಬರುವುದು ನಿಲ್ಲುತ್ತವೆ.

ಅಷ್ಟೇ ಅಲ್ಲ, ನಿಮಗೆ ಸರ್ಕಾರದಿಂದ ಪ್ರಶಂಸಾ ಪತ್ರವೂ ಸಿಗುತ್ತದೆ. ಹಿಂದೆ ಗ್ಯಾಸ್ ಸಬ್ಸಿಡಿ ವಿಚಾರದಲ್ಲೂ ಸರ್ಕಾರ ಗಿವ್ ಅಪ್ ಕೆಂಪೇನ್ ಮಾಡಿತ್ತು. ಆಗಲೂ ಕೋಟ್ಯಂತರ ಜನರು ಸಬ್ಸಿಡಿ ಬೇಡವೆಂದು ನಿರ್ಧರಿಸಿದ್ದರು. ಪಿಎಂ ಕಿಸಾನ್ ಯೋಜನೆಯಲ್ಲೂ ಜನರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡುವ ಅವಕಾಶ ಕೊಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ