Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?

Farmers Corner: 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ. ಈಗ ನವೆಂಬರ್ 30ರೊಳಗೆ 15ನೇ ಕಂತಿನ ಹಣ ಬಿಡುಗಡೆ ಆಗಬೇಕಿದೆ.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಪಿಎಂ ಕಿಸಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 10, 2023 | 12:00 PM

ನವದೆಹಲಿ, ಅಕ್ಟೋಬರ್ 10: ರೈತರ ವ್ಯವಸಾಯ ಕಾರ್ಯಗಳಿಗೆ ಧನಸಹಾಯ ಒದಗಿಸಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Yojana 15th Installment) 15ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಯೋಜನೆಯ 14ನೇ ಕಂತಿನ ಹಣ ಜುಲೈ 27ರಂದು ಬಿಡುಗಡೆ ಆಗಿತ್ತು. ಈಗ 15ನೇ ಕಂತಿನ ಹಣ ನವೆಂಬರ್ 30ರೊಳಗೆ ರಿಲೀಸ್ ಆಗಲಿದೆ. ಕೆಲ ವರದಿಗಳ ಪ್ರಕಾರ ನವೆಂಬರ್ 27 ಅಥವಾ 30ರಂದು ರೈತರ ಖಾತೆಗಳಿಗೆ 2,000 ರೂ ಹಣ ಬಿಡುಗಡೆ ಆಗಬಹುದು ಎನ್ನಲಾಗಿದೆ. ಆದರೆ, ಸರ್ಕಾರದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಒದಗಿಸಲಾಗಿಲ್ಲ. ಪಿಎಂ ಕಿಸಾನ್ ಪೋರ್ಟಲ್​ನಲ್ಲೂ ಮಾಹಿತಿ ನೀಡಲಾಗಿಲ್ಲ.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಠೇವಣಿ ದರ ಹೆಚ್ಚಳ; ಬೇರೆ ಬ್ಯಾಂಕುಗಳಲ್ಲಿ ಎಷ್ಟಿವೆ ಎಫ್​ಡಿ ಬಡ್ಡಿದರಗಳು?

ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹರು ಯಾರು?

ವ್ಯವಸಾಯ ಮಾಡುವ ರೈತರಿಗೆಂದು ಮಾಡಲಾದ ಸ್ಕೀಮ್ ಇದು. ಅಂದರೆ ಜಮೀನು ಹೊಂದಿರುವ ರೈತರು ಇದರ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ವೃತ್ತಿಪರರು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಇತ್ಯಾದಿಯವರು ಫಲಾನುಭವಿಗಳ ಕುಟುಂಬದಲ್ಲಿ ಇರಬಾರದು ಎಂಬಿತ್ಯಾದಿ ಕೆಲ ನಿರ್ಬಂಧಗಳಿವೆ.

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಪಟ್ಟಿ ನೋಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ ವಿಳಾಸ ಇಂತಿದೆ: pmkisan.gov.in

ಇದರ ಮುಖ್ಯಪುಟದಲ್ಲಿ ಫಾರ್ಮರ್ಸ್ ಕಾರ್ನರ್ (Farmers Corner) ಎಂಬ ಸೆಕ್ಷನ್ ಕಾಣಬಹುದು. ಇಲ್ಲಿ ಇ ಕೆವೈಸಿ, ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್, ನೋ ಯುವರ್ ಸ್ಟೇಟಸ್ ಇತ್ಯಾದಿ ನಾನಾ ಫೀಚರ್​ಗಳನ್ನು ನೀವು ನೋಡಬಹುದು. ಇದರಲ್ಲೇ ಇರುವ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.

ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಅನ್ನು ಆಯ್ದುಕೊಂಡು ನಿಮ್ಮ ಗ್ರಾಮವನ್ನೂ ಆರಿಸಿ. ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಗ್ರಾಮದಲ್ಲಿ ಯಾರಾರು ಈ ಸ್ಕೀಮ್ ಹೊಂದಿದ್ದಾರೋ ಅವರೆಲ್ಲರ ಹೆಸರಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಇದನ್ನೂ ಓದಿ: ಸ್ವಿಸ್ ಬ್ಯಾಂಕ್​ನಲ್ಲಿ ಖಾತೆ ತೆರೆಯೋದು ಹೇಗೆ? ಎಷ್ಟು ಗೌಪ್ಯತೆ ಕಾಯ್ದುಕೊಳ್ಳಲಾಗುತ್ತದೆ? ಇಲ್ಲಿದೆ ಡೀಟೇಲ್ಸ್

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಇ ಕೆವೈಸಿ ಮಾಡಿಸಿ

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಇ ಕೆವೈಸಿ ಮಾಡದೇ ಹೋಗಿರುವ ಸಾಧ್ಯತೆ ಇರುತ್ತದೆ. ಅದನ್ನೂ ಆದಷ್ಟೂ ಬೇಗ ಮಾಡಿ.

ಫಾರ್ಮರ್ಸ್ ಕಾರ್ನರ್​ನಲ್ಲಿ ಇ ಕೆವೈಸಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ ಸರ್ಚ್ ಮಾಡಿ. ಆಧಾರ್​ಗೆ ಜೋಡಿತವಾದ ಮೊಬೈನ್ ನಂಬರ್​ಗೆ ಬರುವ ಒಟಿಪಿಯನ್ನು ಹಾಕಿ ಕೆವೈಸಿ ಪೂರ್ಣಗೊಳಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:49 am, Tue, 10 October 23

ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್