AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?

Farmers Corner: 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ. ಈಗ ನವೆಂಬರ್ 30ರೊಳಗೆ 15ನೇ ಕಂತಿನ ಹಣ ಬಿಡುಗಡೆ ಆಗಬೇಕಿದೆ.

PM Kisan 15th Installment: ರೈತರಿಗೆ ಖುಷಿ ಸುದ್ದಿ; ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಪಿಎಂ ಕಿಸಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 10, 2023 | 12:00 PM

Share

ನವದೆಹಲಿ, ಅಕ್ಟೋಬರ್ 10: ರೈತರ ವ್ಯವಸಾಯ ಕಾರ್ಯಗಳಿಗೆ ಧನಸಹಾಯ ಒದಗಿಸಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Yojana 15th Installment) 15ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಯೋಜನೆಯ 14ನೇ ಕಂತಿನ ಹಣ ಜುಲೈ 27ರಂದು ಬಿಡುಗಡೆ ಆಗಿತ್ತು. ಈಗ 15ನೇ ಕಂತಿನ ಹಣ ನವೆಂಬರ್ 30ರೊಳಗೆ ರಿಲೀಸ್ ಆಗಲಿದೆ. ಕೆಲ ವರದಿಗಳ ಪ್ರಕಾರ ನವೆಂಬರ್ 27 ಅಥವಾ 30ರಂದು ರೈತರ ಖಾತೆಗಳಿಗೆ 2,000 ರೂ ಹಣ ಬಿಡುಗಡೆ ಆಗಬಹುದು ಎನ್ನಲಾಗಿದೆ. ಆದರೆ, ಸರ್ಕಾರದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಒದಗಿಸಲಾಗಿಲ್ಲ. ಪಿಎಂ ಕಿಸಾನ್ ಪೋರ್ಟಲ್​ನಲ್ಲೂ ಮಾಹಿತಿ ನೀಡಲಾಗಿಲ್ಲ.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 14 ಕಂತುಗಳನ್ನು ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಒಂದು ವರ್ಷದಲ್ಲಿ ತಲಾ 2,000 ರೂಗಳ ಮೂರು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್​ನಿಂದ ಜುಲೈ; ಆಗಸ್ಟ್​ನಿಂದ ನವೆಂಬರ್; ಹಾಗು ಡಿಸೆಂಬರ್​ನಿಂದ ಮಾರ್ಚ್ ಹೀಗೆ ಪ್ರತೀ ನಾಲ್ಕು ತಿಂಗಳ ಅವಧಿಗೆ ಒಂದು ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಠೇವಣಿ ದರ ಹೆಚ್ಚಳ; ಬೇರೆ ಬ್ಯಾಂಕುಗಳಲ್ಲಿ ಎಷ್ಟಿವೆ ಎಫ್​ಡಿ ಬಡ್ಡಿದರಗಳು?

ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹರು ಯಾರು?

ವ್ಯವಸಾಯ ಮಾಡುವ ರೈತರಿಗೆಂದು ಮಾಡಲಾದ ಸ್ಕೀಮ್ ಇದು. ಅಂದರೆ ಜಮೀನು ಹೊಂದಿರುವ ರೈತರು ಇದರ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ವೃತ್ತಿಪರರು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಇತ್ಯಾದಿಯವರು ಫಲಾನುಭವಿಗಳ ಕುಟುಂಬದಲ್ಲಿ ಇರಬಾರದು ಎಂಬಿತ್ಯಾದಿ ಕೆಲ ನಿರ್ಬಂಧಗಳಿವೆ.

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳ ಪಟ್ಟಿ ನೋಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ ವಿಳಾಸ ಇಂತಿದೆ: pmkisan.gov.in

ಇದರ ಮುಖ್ಯಪುಟದಲ್ಲಿ ಫಾರ್ಮರ್ಸ್ ಕಾರ್ನರ್ (Farmers Corner) ಎಂಬ ಸೆಕ್ಷನ್ ಕಾಣಬಹುದು. ಇಲ್ಲಿ ಇ ಕೆವೈಸಿ, ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್, ನೋ ಯುವರ್ ಸ್ಟೇಟಸ್ ಇತ್ಯಾದಿ ನಾನಾ ಫೀಚರ್​ಗಳನ್ನು ನೀವು ನೋಡಬಹುದು. ಇದರಲ್ಲೇ ಇರುವ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.

ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಅನ್ನು ಆಯ್ದುಕೊಂಡು ನಿಮ್ಮ ಗ್ರಾಮವನ್ನೂ ಆರಿಸಿ. ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಗ್ರಾಮದಲ್ಲಿ ಯಾರಾರು ಈ ಸ್ಕೀಮ್ ಹೊಂದಿದ್ದಾರೋ ಅವರೆಲ್ಲರ ಹೆಸರಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಇದನ್ನೂ ಓದಿ: ಸ್ವಿಸ್ ಬ್ಯಾಂಕ್​ನಲ್ಲಿ ಖಾತೆ ತೆರೆಯೋದು ಹೇಗೆ? ಎಷ್ಟು ಗೌಪ್ಯತೆ ಕಾಯ್ದುಕೊಳ್ಳಲಾಗುತ್ತದೆ? ಇಲ್ಲಿದೆ ಡೀಟೇಲ್ಸ್

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಇ ಕೆವೈಸಿ ಮಾಡಿಸಿ

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಇ ಕೆವೈಸಿ ಮಾಡದೇ ಹೋಗಿರುವ ಸಾಧ್ಯತೆ ಇರುತ್ತದೆ. ಅದನ್ನೂ ಆದಷ್ಟೂ ಬೇಗ ಮಾಡಿ.

ಫಾರ್ಮರ್ಸ್ ಕಾರ್ನರ್​ನಲ್ಲಿ ಇ ಕೆವೈಸಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ ಸರ್ಚ್ ಮಾಡಿ. ಆಧಾರ್​ಗೆ ಜೋಡಿತವಾದ ಮೊಬೈನ್ ನಂಬರ್​ಗೆ ಬರುವ ಒಟಿಪಿಯನ್ನು ಹಾಕಿ ಕೆವೈಸಿ ಪೂರ್ಣಗೊಳಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:49 am, Tue, 10 October 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?