PM Kisan 16th installment: ಪಿಎಂ ಕಿಸಾನ್ ಹಣ ಈ ಬಾರಿ ಬಂದಿಲ್ಲವಾ? ಇಲ್ಲಿ ವಿಚಾರಿಸಿ

Register complaint if money not received: ಪಿಎಂ ಕಿಸಾನ್ ಯೋಜನೆಯಲ್ಲಿ ಇಲ್ಲಿಯವರೆಗೆ ಸರ್ಕಾರ 16 ಕಂತುಗಳಲ್ಲಿ ಹಣವನ್ನು ರೈತರ ಖಾತೆಗಳಿಗೆ ವರ್ಗಾಯಿಸಿದೆ. ಇಲ್ಲಿಯವರೆಗೆ ರೈತರಿಗೆ ನೀಡಲಾಗಿರುವ ಒಟ್ಟಾರೆ ಮೊತ್ತ 3 ಲಕ್ಷ ಕೋಟಿ ರೂಗೂ ಹೆಚ್ಚು. ಇಕೆವೈಸಿ ಅಪ್​ಡೇಟ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇಕೆವೈಸಿ ಮಾಡಿಸಿಯೂ ಹಣ ಬಂದಿಲ್ಲದೇ ಇದ್ದರೆ ದೂರು ಕೊಡಲು ಅವಕಾಶಗಳಿವೆ.

PM Kisan 16th installment: ಪಿಎಂ ಕಿಸಾನ್ ಹಣ ಈ ಬಾರಿ ಬಂದಿಲ್ಲವಾ? ಇಲ್ಲಿ ವಿಚಾರಿಸಿ
ರೈತ
Follow us
|

Updated on: Feb 29, 2024 | 11:46 AM

ಬೆಂಗಳೂರು, ಫೆಬ್ರುವರಿ 29: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬುಧವಾರ 16ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್​ನಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ಅವರು (PM Narendra Modi) 21,000 ರೂಗೂ ಹೆಚ್ಚು ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹೆಚ್ಚಿನ ಮಂದಿಗೆ ನಿನ್ನೆಯೇ 2,000 ರೂ ಹಣ ತಲುಪಿರಬಹುದು. ಕೆಲವರಿಗೆ ತುಸು ವಿಳಂಬವಾಗಬಹುದು. ಒಂದು ವೇಳೆ ನೀವು ಯೋಜನೆಯಲ್ಲಿ ನೊಂದಾಯಿಸಿದ್ದರೂ ಹಣ ಬರುತ್ತಿಲ್ಲ ಎಂದಲ್ಲಿ ಅದಕ್ಕೆ ಬೇರೆ ಬೇರೆ ಕಾರಣಗಳಿರಬಹುದು. ಇಕೆವೈಸಿ ಅಪ್​ಡೇಟ್ ಆಗಿರದಿದ್ದರೆ, ಅಥವಾ ಕೆವೈಸಿ ದಾಖಲೆ ಸರಿಯಾಗಿ ಹೊಂದಾಣಿಕೆ ಆಗಿಲ್ಲದೇ ಇದ್ದರೆ ಹಣ ಬಂದಿಲ್ಲದೇ ಇರಬಹುದು.

ಒಂದು ವೇಳೆ ನೀವು ಯೋಜನೆಯ ಫಲಾನುಭವಿಯಾಗಿ ಇಕೆವೈಸಿ ಮಾಡಿದ್ದರೂ ಹಣ ಬಂದಿಲ್ಲದಿದ್ದರೆ ದೂರು ಸಲ್ಲಿಸಲು ಅವಕಾಶ ಇದೆ. ಹೆಲ್ಪ್ ಡೆಸ್ಕ್ ತೆರೆದಿರುತ್ತದೆ, ಸಹಾಯವಾಣಿ ನಂಬರ್​ಗಳಿವೆ. ಪಿಎಂ ಕಿಸಾನ್ ಪೋರ್ಟಲ್​ಗೆ ಹೋಗಿ (pmkisan.gov.in/) ನೇರವಾಗಿ ದೂರು ಸಲ್ಲಿಸುವ ಅವಕಾಶ ಇದೆ.

ಇದನ್ನೂ ಓದಿ: ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ; 9 ಕೋಟಿಗೂ ಹೆಚ್ಚು ರೈತರ ಖಾತೆಗೆ 21,000 ಕೋಟಿ ರೂ ವರ್ಗಾವಣೆ

ದೂರು ಸಲ್ಲಿಸುವ ಕ್ರಮಗಳು

  • ಇಮೇಲ್ ಐಡಿ: pmkisan-ict@gov.in ಮತ್ತು pmkisan-funds@gov.in
  • ಪಿಎಂ ಕಿಸಾನ್ ಹೆಲ್ಪ್​ಲೈನ್ ನಂಬರ್: 155261 / 011-24300606
  • ಪಿಎಂ ಕಿಸಾನ್ ಟೋಲ್ ಫ್ರೀ ನಂಬರ್: 1800-115-526
  • ಪೋರ್ಟಲ್​ನಲ್ಲಿ ನೇರ ಲಿಂಕ್: pmkisan.gov.in/Grievance.aspx

ಇಲ್ಲಿ ಪೋರ್ಟಲ್​ನಲ್ಲಿ ನೀವು ಮೇಲಿನ ದೂರು ಪುಟ ತೆರೆದರೆ, ಅದರಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ಅಕೌಂಟ್ ನಂಬರ್, ಅಥವಾ ಮೊಬೈಲ್ ನಂಬರ್ ಅನ್ನು ನಮೂದಿಸಿ, ‘ಗೆಟ್ ಡೀಟೇಲ್ಸ್’ ಕ್ಲಿಕ್ ಮಾಡಿ.

ಪಿಎಂ ಕಿಸಾನ್ ಹಣ ಬರದೇ ಇರುವುದಕ್ಕೆ ಸಂಭಾವ್ಯ ಕಾರಣಗಳೇನು?

  • ಬ್ಯಾಂಕ್ ಖಾತೆ ಸ್ಥಗಿತಗೊಂಡಿರಬಹುದು
  • ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರಬಹುದು
  • ಖಾತೆದಾರ ಮೃತಪಟ್ಟಿರಬಹುದು
  • ಆಧಾರ್ ನಿಷ್ಕ್ರಿಯಗೊಂಡಿರಬಹುದು
  • ಬ್ಯಾಂಕ್ ಖಾತೆ ತಪ್ಪಾಗಿ ನಮೂದಿಸಿರಬಹುದು
  • ಬ್ಯಾಂಕ್ ಖಾತೆಯ ಐಎಫ್​ಎಸ್​ಸಿ ಕೋಡ್ ತಪ್ಪಾಗಿರಬಹುದು

ಇದನ್ನೂ ಓದಿ: ಮೋದಿ 3.0 ಸರ್ಕಾರದ ಅವಧಿಯಲ್ಲಿ ಮುಂದುವರಿದ ದೇಶವನ್ನಾಗಿ ಮಾಡುವಂತಹ ಸುಧಾರಣೆಗಳನ್ನು ನಿರೀಕ್ಷಿಸಿ: ನಿರ್ಮಲಾ ಸೀತಾರಾಮನ್

ಇಕೆವೈಸಿ ಮಾಡುವುದು ಕಡ್ಡಾಯ

ನೀವು ಪಿಎಂ ಕಿಸಾನ್ ಯೋಜನೆಯಲ್ಲಿ ಇಕೆವೈಸಿ ಅಪ್​ಡೇಟ್ ಮಾಡಿಲ್ಲದೇ ಇದ್ದರೆ 14, 15 ಮತ್ತು 16ನೇ ಕಂತಿನ ಹಣ ಸಿಕ್ಕಿರುವುದಿಲ್ಲ. ಸರ್ಕಾರ ಈ ಹಿಂದೆಯೇ ಸಾಕಷ್ಟು ಗಡುವು ಕೊಟ್ಟಿತ್ತು. ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಸುಲಭವಾಗಿ ಇಕೆವೈಸಿ ಸಲ್ಲಿಸಬಹುದು. ರೈತ ಸಂಪರ್ಕ ಕೇಂದ್ರಕ್ಕೆ ಹೋಗಿಯೂ ಆಧಾರ್ ದಾಖಲೆ ಕೊಟ್ಟು ಕೆವೈಸಿ ಅಪ್​ಡೇಟ್ ಮಾಡಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು