AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM- KISAN eKYC: ಪಿಎಂ-ಕಿಸಾನ್ ಇಕೆವೈಸಿಗೆ ಮೇ 31 ಕೊನೆ ದಿನ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಇಕೆವೈಸಿಗೆ ಮೇ 31, 2022 ಅಂತಿಮ ಗಡುವಿನ ದಿನವಾಗಿದೆ. ಇ-ಕೆವೈಸಿ ಹೇಗೆ ಎಂಬುದರ ವಿವರ ಇಲ್ಲಿದೆ.

PM- KISAN eKYC: ಪಿಎಂ-ಕಿಸಾನ್ ಇಕೆವೈಸಿಗೆ ಮೇ 31 ಕೊನೆ ದಿನ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:May 28, 2022 | 6:52 PM

Share

ಪಿಎಂ ಕಿಸಾನ್ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೋಂದಣಿ ಮಾಡಲಾದ ರೈತರಿಗೆ ವಾರ್ಷಿಕ 6,000 ರೂಪಾಯಿ ಆದಾಯದ ಸಹಾಯವನ್ನು ಮೂರು ಸಮಾನ ಕಂತುಗಳಲ್ಲಿ ಒದಗಿಸುತ್ತದೆ. ಮತ್ತೊಂದೆಡೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಿಎಂ ಕಿಸಾನ್ ಯೋಜನೆಯ (PM-KISAN) ಹಣಕಾಸಿನ ಪ್ರಯೋಜನವನ್ನು ಪಡೆಯಲು ರೈತರು ತಮ್ಮ ಕೆವೈಸಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಕೇಂದ್ರ ಸರ್ಕಾರವು ಕಡ್ಡಾಯ eKYC ಅನ್ನು ಪೂರ್ಣಗೊಳಿಸುವ ಗಡುವನ್ನು ಮೇ 31, 2022ಕ್ಕೆ ವಿಸ್ತರಿಸಿದ್ದು, ಈ ಹಿಂದಿನ ನಿಗದಿತ ಗಡುವು ಮಾರ್ಚ್ 22, 2022 ಆಗಿತ್ತು. ಇದು ರೈತರಿಗೆ ಉತ್ತಮ ಸುದ್ದಿಯಾಗಿದೆ. ಪಿಎಂ-ಕಿಸಾನ್ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ eKYCಗಾಗಿ ಹತ್ತಿರದ CSC ಕೇಂದ್ರಗಳನ್ನು ಸಂಪರ್ಕಿಸಬಹುದು. ಎಲ್ಲ ಪಿಎಂ-ಕಿಸಾನ್ ಫಲಾನುಭವಿಗಳಿಗೆ eKYCಯ ಗಡುವನ್ನು 31 ಮೇ, 2022ರ ವರೆಗೆ ವಿಸ್ತರಿಸಲಾಗಿದೆಎಂದು ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ ಹೇಳುತ್ತದೆ.

ಕಡ್ಡಾಯವಾದ eKYC ಕೆಲಸವನ್ನು ಪೂರ್ಣಗೊಳಿಸಿದ ನಂತರ ಎಲ್ಲ ಭೂಹಿಡುವಳಿ ರೈತರ ಕುಟುಂಬಗಳು ಪ್ರತಿ ಕುಟುಂಬಕ್ಕೆ ವರ್ಷಕ್ಕೆ ರೂ.6000 ಆರ್ಥಿಕ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. ನಾಲ್ಕು ತಿಂಗಳಿಗೆ ಒಮ್ಮೆ ತಲಾ ರೂ. 2000 ರಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ. ಈ ಯೋಜನೆಯು ತಮ್ಮ ಹೆಸರಿನಲ್ಲಿ ಕೃಷಿಯೋಗ್ಯ ಭೂಮಿ ಹೊಂದಿರುವ ಮತ್ತು ಅಗತ್ಯವಿರುವ ಕೆವೈಸಿ ಕೆಲಸವನ್ನು ಪೂರ್ಣಗೊಳಿಸಿದ ಎಲ್ಲ ಭೂಹಿಡುವಳಿ ರೈತರ ಕುಟುಂಬಗಳಿಗೆ ಮುಕ್ತವಾಗಿದೆ. ಅಗತ್ಯವಾದ eKYC ಜೋಡಣೆ ಅನ್ನು ಪೂರ್ಣಗೊಳಿಸಲು ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರಗಳ ಅಗತ್ಯವಿದೆ.

ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ ತಿಳಿಸಿರುವಂತೆ, “ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ತಮ್ಮ ಆಧಾರ್ ಸಂಖ್ಯೆಯೊಂದಿಗೆ ಒದಗಿಸುವ ಅಗತ್ಯವಿದೆ, ಇದರಿಂದಾಗಿ ಯೋಜನೆಯಡಿ ಆರ್ಥಿಕ ಪ್ರಯೋಜನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಅಗತ್ಯವಿದೆ. ಬ್ಯಾಂಕ್ ಖಾತೆ ವಿವರಗಳನ್ನು ನೀಡದಿದ್ದರೆ ಯಾವುದೇ ಪ್ರಯೋಜನವನ್ನು ನೀಡಲಾಗುವುದಿಲ್ಲ.”

“ಯೋಜನೆ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಡ್ಡಾಯವಾಗಿದೆ. ಆದರೆ ಪ್ರಸ್ತುತ ಫಲಾನುಭವಿಗಳು ಆಧಾರ್ ಅಥವಾ ಆಧಾರ್ ನೋಂದಣಿ ಸಂಖ್ಯೆಯನ್ನು ಹೊಂದಿರದ ಸಂದರ್ಭಗಳಲ್ಲಿ, ಗುರುತಿನ ಪರಿಶೀಲನೆಗಾಗಿ ಮತ್ತು 1ನೇ ಕಂತಿನ ವರ್ಗಾವಣೆಗಾಗಿ ಅಂತಹ ರೈತ ಕುಟುಂಬಗಳಿಗೆ ಪ್ರಯೋಜನವನ್ನು ವರ್ಗಾಯಿಸಲು ಪರ್ಯಾಯ ನಿಗದಿತ ದಾಖಲೆಗಳನ್ನು ಸಂಗ್ರಹಿಸಬಹುದು. ಆಧಾರ್ ಕಾರ್ಡ್ ಹೊಂದಿರದ ಎಲ್ಲ ಫಲಾನುಭವಿಗಳು ಆಧಾರ್ ಅಡಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಏಕೆಂದರೆ ನಂತರದ ಕಂತುಗಳ ವರ್ಗಾವಣೆಯನ್ನು ಆಧಾರ್ ಜೋಡಿಸಿದ ಡೇಟಾ ಬೇಸ್ ಆಧಾರದ ಮೇಲೆ ಮಾತ್ರ ಮಾಡಲಾಗುತ್ತದೆ,” ಎಂದು ಅಧಿಕೃತ ವೆಬ್‌ಸೈಟ್ ತಿಳಿಸಿದೆ.

ಪಿಎಂ ಕಿಸಾನ್ ಇ-ಕೆವೈಸಿ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸುವುದು?

1. pmkisan.nic.inಗೆ ಭೇಟಿ ನೀಡಿ ಮತ್ತು ‘farmers corner’ ವಿಭಾಗದ ಅಡಿಯಲ್ಲಿ ‘eKYC’ ಕ್ಲಿಕ್ ಮಾಡಿ.

2. ‘OTP ಆಧಾರಿತ Ekyc’ ವಿಭಾಗದ ಅಡಿಯಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ‘search’ ಕ್ಲಿಕ್ ಮಾಡಿ.

3. ಈಗ ನಿಮ್ಮ ಆಧಾರ್-ಜೋಡಣೆ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ‘Get OTP’ ಕ್ಲಿಕ್ ಮಾಡಿ.

4. OTP ಅನ್ನು ನಮೂದಿಸಿ ಮತ್ತು ನಮೂದಿಸಿದ ವಿವರಗಳ ಯಶಸ್ವಿ ಪರಿಶೀಲನೆಯ ನಂತರ eKYC ಪೂರ್ಣಗೊಳ್ಳುತ್ತದೆ.

ಫಲಾನುಭವಿಗಳು ಯಾವುದೇ ಸಹಾಯಕ್ಕಾಗಿ ಪಿಎಂ-ಕಿಸಾನ್ ಸಹಾಯವಾಣಿ ಸಂಖ್ಯೆ: 011-24300606,155261 ಅನ್ನು ಸಂಪರ್ಕಿಸಬಹುದು ಮತ್ತು ಆಧಾರ್ ಒಟಿಪಿ ಸಂಬಂಧಿತ ಸಮಸ್ಯೆಗಳಿಗೆ aead@nic.in ಅನ್ನು ಸಂಪರ್ಕಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ವಿವರಣೆ

Published On - 6:52 pm, Sat, 28 May 22

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್