AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM KISAN: ಪಿಎಂ ಕಿಸಾನ್ ನಿಧಿಯ 9ನೇ ಕಂತು ಆಗಸ್ಟ್​ 9ರಂದು ರೈತರ ಖಾತೆಗೆ ಜಮೆ; ಹೀಗೆ ಪರಿಶೀಲನೆ ಮಾಡಿ

ಪಿಎಂ ಕಿಸಾನ್ ನಿಧಿಯ 9ನೇ ಕಂತು ರೈತರ ಖಾತೆಗಳಿಗೆ ಆಗಸ್ಟ್ 9ನೇ ತಾರೀಕಿನಂದು ಜಮೆ ಆಗಲಿದೆ. ಆ ಬಗ್ಗೆ ವಿವರ ಇಲ್ಲಿದೆ. ಖಾತೆಗೆ ಬಂದಿದೆಯೇ ಎಂಬುದನ್ನು ಪರಿಶೀಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ.

PM KISAN: ಪಿಎಂ ಕಿಸಾನ್ ನಿಧಿಯ 9ನೇ ಕಂತು ಆಗಸ್ಟ್​ 9ರಂದು ರೈತರ ಖಾತೆಗೆ ಜಮೆ; ಹೀಗೆ ಪರಿಶೀಲನೆ ಮಾಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 03, 2021 | 11:37 PM

Share

ಪಿಎಂ- ಕಿಸಾನ್ ಯೋಜನೆಯ 9ನೇ ಕಂತಿಗೆ ಕಾಯುತ್ತಿರುವ ರೈತರ ನಿರೀಕ್ಷೆ ಕೊನೆಯಾಗಿದೆ. ಅಂತಹ ಎಲ್ಲ ರೈತರಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ (ಆಗಸ್ಟ್ 3, 2021) ಶುಭ ಸುದ್ದಿ ನೀಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಪಿಎಂ- ಕಿಸಾನ್ ನಿಧಿಯನ್ನು ಆಗಸ್ಟ್ 9, 2021ರ ಬೆಳಗ್ಗೆ 11ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಎಂಬುದು ಸರ್ಕಾರದ ಯೋಜನೆ. ಇದಕ್ಕೆ ಶೇ 100ರಷ್ಟು ಹಣಕಾಸು ಅನುದಾನವನ್ನು ನೀಡುವುದು ಭಾರತ ಸರ್ಕಾರ. ಇದು ಆರಂಭವಾಗಿದ್ದು ಡಿಸೆಂಬರ್ 1, 2018ರಲ್ಲಿ. ಈ ಯೋಜನೆಯಡಿ 2 ಹೆಕ್ಟೇರ್​ ತನಕ ಒಟ್ಟಾರೆಯಾಗಿ ಭೂಮಿ ಇರುವ/ಮಾಲೀಕತ್ವ ಹೊಂದಿರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಮೊತ್ತವು ನೇರವಾಗಿ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ವರ್ಗಾವಣೆ ಆಗುತ್ತದೆ. ಈ ಯೋಜನೆಯಡಿ ಕೆಲವು ವರ್ಗವನ್ನು ಹೊರಗಿಡಲಾಗಿದೆ.

ಈಚಿನ ಕಂತು ಬಂದಿದೆಯೇ ಎಂಬುದನ್ನು ಪರಿಶೀಲಿಸಲು ಹಂತ ಹಂತವಾದ ವಿವರಣೆ ಹೀಗಿದೆ: 1. ಅಧಿಕೃತ ವೆಬ್​ಸೈಟ್​ www.pmkisan.gov.in ಭೇಟಿ ನೀಡಿ. 2. ಅಧಿಕೃತ ವೆಬ್​ಸೈಟ್​ನ ಹೋಮ್​ ಪೇಜ್​ನಲ್ಲಿ ಫಾರ್ಮರ್ಸ್​ ಕಾರ್ನರ್​ ಮೇಲೆ ಕ್ಲಿಕ್ ಮಾಡಬೇಕು. 3. ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿಗಳ ಪಟ್ಟಿ) ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. 4. ರಾಜ್ಯ, ಜಿಲ್ಲೆ/ಉಪಜಿಲ್ಲೆ, ಬ್ಲಾಕ್​ ಮತ್ತು ಹಳ್ಳಿ ಈ ಮಾಹಿತಿಯನ್ನು ಸರಿಯಾಗಿ ಆರಿಸಬೇಕು. 5. Get Report ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. 6. ಸ್ಕ್ರೀನ್ ಮೇಲೆ ಕಾಣುವ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿ ಪಟ್ಟಿ) ಮೇಲೆ ಕ್ಲಿಕ್ ಮಾಡಬೇಕು. 7. ಹೆಸರನ್ನು ಪರಿಶೀಲಿಸಿ, ಖಾತ್ರಿ ಪಡಿಸಬೇಕು. 8. pmskny ಹೋಮ್​ಪೇಜ್​ಗೆ ಮರಳಬೇಕು. 9. ಬೆನಿಫಿಷಿಯರಿ ಸ್ಟೇಟಸ್ ಬಟನ್ ಮೇಲೆ ಮತ್ತೆ ಕ್ಲಿಕ್ ಮಾಡಬೇಕು. 10. ಆಧಾರ್ ಕಾರ್ಡ್ ಮಾಹಿತಿ ಅಥವಾ ಮೊಬೈಲ್ ನಂಬರ್ ಅಥವಾ ಅಕೌಂಟ್ ನಂಬರ್ ನಮೂದಿಸಬೇಕು. 11. get date ಬಟನ್ ಮೇಲೆ ಕ್ಲಿಕ್ ಮಾಡಬೇಕು. 12. ಕಂತಿನ ಸ್ಥಿತಿ ಏನು ಎಂಬುದರ ಬಗ್ಗೆ ಮಾಹಿತಿ ಸ್ಕ್ರೀನ್​ ಮೇಲೆ ಕಾಣಿಸುತ್ತದೆ.

ಇದನ್ನೂ ಓದಿ: ವಾರ್ಷಿಕ 6 ಸಾವಿರ ಸಿಗುವ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ವಿವರ

(PM KISAN Fund 9Th Installment To Be Credited To Farmers Bank Account On August 9th)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ