AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Samman Nidhi Yojana: ಪಿಎಂ ಕಿಸಾನ್ 16ನೇ ಕಂತಿನ 2,000 ರೂ ಬರಲಿದೆ ಫೆ. 28ಕ್ಕೆ

16th Installment of PM Kisan On 2024 Feb 28th: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಫೆಬ್ರುವರಿ 28, ಬುಧವಾರದಂದು ಬಿಡುಗಡೆ ಆಗಲಿದೆ ಎಂದು ಅಧಿಕೃತ ಮಾಹಿತಿ ಇದೆ. 2019ರಲ್ಲಿ ಆರಂಭಗೊಂಡ ಈ ಯೋಜನೆಯು ಕೃಷಿಕ ಕುಟುಂಬಗಳಿಗೆ ವ್ಯವಸಾಯಕ್ಕೆ ಅನುಕೂಲವಾಗಲು ವರ್ಷಕ್ಕೆ 6,000 ರೂ ಧನಸಹಾಯ ನೀಡಲಾಗುತ್ತದೆ. ಇಲ್ಲಿಯವರೆಗೆ 15 ಕಂತುಗಳು ಬಿಡುಗಡೆ ಆಗಿದ್ದು, 15ನೇ ಕಂತಿನ ಹಣ ನವೆಂಬರ್​ನಲ್ಲಿ ಬಂದಿತ್ತು.

PM Kisan Samman Nidhi Yojana: ಪಿಎಂ ಕಿಸಾನ್ 16ನೇ ಕಂತಿನ 2,000 ರೂ ಬರಲಿದೆ ಫೆ. 28ಕ್ಕೆ
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 22, 2024 | 12:11 PM

ನವದೆಹಲಿ, ಫೆಬ್ರುವರಿ 22: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi Yojana) 16ನೇ ಕಂತಿನ ಹಣ ಇದೇ ಫೆಬ್ರುವರಿ 28ರಂದು ಸಿಗಲಿದೆ. ಪಿಎಂ ಕಿಸಾನ್​ನ ಅಧಿಕೃತ ವೆಬ್​ಸೈಟ್​ನಲ್ಲೇ ಈ ಮಾಹಿತಿ ಪ್ರಕಟಿಸಲಾಗಿದೆ. ಫೆ. 28, ಬುಧವಾರದಂದು ಫಲಾನುಭವಿ ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಲಿದೆ. 2023ರ ಡಿಸೆಂಬರ್​ನಿಂದ 2024 ಮಾರ್ಚ್​ವರೆಗಿನ ಅವಧಿಯ ಕಂತಿನ ಹಣ ಇದಾಗಿದೆ. 2023ರ ಆಗಸ್ಟ್​ನಿಂದ ನವೆಂಬರ್​ವರೆಗಿನ 15ನೇ ಕಂತಿನ ಹಣ ನವೆಂಬರ್​ನಲ್ಲಿ ಬಿಡುಗಡೆಯಾಗಿತ್ತು. ಒಟ್ಟು 9 ಕೋಟಿಗೂ ತುಸು ಹೆಚ್ಚು ಫಲಾನುಭವಿಗಳ ಖಾತೆಗಳಿಗೆ ಸರ್ಕಾರ 18,000 ಕೋಟಿ ರೂ ಬಿಡುಗಡೆ ಮಾಡಿತ್ತು.

ಫಲಾನುಭವಿ ಸ್ಥಿತಿ ಪರಿಶೀಲಿಸಿ…

ನೀವು ಯೋಜನೆಗೆ ನೊಂದಾಯಿಸಿದ್ದರೂ ಇಕೆವೈಸಿ ಮಾಡಿಸಿಲ್ಲದಿದ್ದರೆ ಹಣ ಸಿಗುವುದಿಲ್ಲ. ಇಕೆವೈಸಿ ಮಾಡಿಸಿದ್ದು, ಫಲಾನುಭವಿ ಸ್ಥಿತಿ (Beneficiary Status) ಏನಿದೆ ಎಂದು ಪರಿಶೀಲಿಸಲು ಅವಕಾಶ ಇದೆ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಬೇಕು. ಅದರ ಲಿಂಕ್ ಇಲ್ಲಿದೆ: pmkisan.gov.in

ಇಲ್ಲಿ ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಎಂಬ ಸೆಕ್ಷನ್ ಕಾಣಬಹುದು. ಅಲ್ಲಿರುವ ಹಲವು ಟ್ಯಾಬ್​ಗಳಲ್ಲಿ ಬೆನಿಫಿಶಿಯರಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

ನೀವು ಯೋಜನೆಗೆ ನೊಂದಾಯಿಸಿದಾಗ ಸಿಗುವ ರಿಜಿಸ್ಟ್ರೇಶನ್ ನಂಬರ್ ನಮೂದಿಸಿ, ಕ್ಯಾಪ್ಚಾ ಕೋಡ್ ಹಾಕಿ, ಗೆಟ್ ಒಟಿಪಿ ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೊಂದಾಯಿತ ಮೊಬೈಲ್ ನಂಬರ್​ಗೆ ಬರುವ ಒಟಿಪಿ ಹಾಕಿ ಸಲ್ಲಿಸಿದರೆ ಯೋಜನೆಯಲ್ಲಿ ನಿಮ್ಮ ಬೆನಿಫಿಶಿಯರಿ ಸ್ಟೇಟಸ್ ತಿಳಿಯಬಹುದು.

ಒಂದು ವೇಳೆ ನಿಮಗೆ ರಿಜಿಸ್ಟ್ರೇಶನ್ ನಂಬರ್ ಗೊತ್ತಿಲ್ಲದೇ ಇದ್ದಲ್ಲಿ ಚಿಂತೆ ಪಡಬೇಕಿಲ್ಲ. ಮೊಬೈಲ್ ನಂಬರ್ ಅಥವಾ ಅಧಾರ್ ನಂಬರ್ ಮೂಲಕ ರಿಜಿಸ್ಟ್ರೇಶನ್ ಸಂಖ್ಯೆ ಪಡೆಯಬಹುದು.

ಇದನ್ನೂ ಓದಿ: ಈರುಳ್ಳಿ ಬೆಲೆ ಈಗ ಕುಸಿತ; ಆದರೆ ಮಾರ್ಚ್​ನಲ್ಲಿ ಕಣ್ಣೀರು ಬರಿಸಲಿದೆಯಂತೆ ಬೆಲೆ ಏರಿಕೆ

ಫಲಾನುಭವಿಗಳ ಪಟ್ಟಿ ನೋಡಬಹುದು…

ನಿಮ್ಮ ಗ್ರಾಮದ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ನೋಡಲೂ ಅವಕಾಶ ಇದೆ. ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಫಾರ್ಮರ್ಸ್ ಕಾರ್ನರ್ ಸೆಕ್ಷನ್​ನಲ್ಲಿ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.

ಇದರಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ (ತಾಲೂಕು) ಮತ್ತು ಗ್ರಾಮವನ್ನು ಆಯ್ಕೆ ಮಾಡಿ. ಆಗ ಆ ಗ್ರಾಮದಲ್ಲಿರವ ಪಿಎಂ ಕಿಸಾನ್ ಫಲಾನುಭವಿಗಳೆಲ್ಲರ ಪಟ್ಟಿ ಸಿಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿಕೊಳ್ಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ