AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ 20ನೇ ಕಂತಿನ ಹಣ ಸಿಗಬೇಕೆಂದರೆ ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಬೇಕು

PM Kisan Samman Nidhi Yojana, how to ensure 20th installment getting credited: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 20ನೇ ಕಂತಿನ ಹಣಕ್ಕಾಗಿ ಒಂಬತ್ತು ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಆದರೆ, ಇಕೆವೈಸಿ ಆಗದ, ಭೂದಾಖಲೆ ತಪ್ಪಾಗಿರುವ, ಬ್ಯಾಂಕ್ ಖಾತೆ ತಪ್ಪಾಗಿರುವ ಫಲಾನುಭವಿಗಳಿಗೆ ಹಣ ಬರದೇ ಹೋಗಬಹುದು. ಕಂತಿನ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ಮೇಲಿನ ಕಾರ್ಯಗಳನ್ನು ಮಾಡಿರಬೇಕು.

ಪಿಎಂ ಕಿಸಾನ್ 20ನೇ ಕಂತಿನ ಹಣ ಸಿಗಬೇಕೆಂದರೆ ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಬೇಕು
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2025 | 6:54 PM

Share

ನವದೆಹಲಿ, ಜುಲೈ 11: ದೇಶಾದ್ಯಂತ ರೈತರ (farmer) ವ್ಯವಸಾಯಕ್ಕೆ ಸಹಾಯವಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan  Samman Nidhi Yojana) ಈವರೆಗೆ 19 ಕಂತುಗಳ ಹಣ ಬಿಡುಗಡೆ ಆಗಿದೆ. 20ನೇ ಕಂತಿನ ಹಣಕ್ಕೆ ಕಾಯಲಾಗುತ್ತಿದೆ. ಜೂನ್ ತಿಂಗಳಲ್ಲೇ 20ನೇ ಕಂತಿನ ಹಣ ಬರುವ ನಿರೀಕ್ಷೆ ಇತ್ತು. ಏಪ್ರಿಲ್​ನಿಂದ ಜುಲೈವರೆಗಿನ ಅವಧಿಯ ಈ ಹಣ ಇದೇ ತಿಂಗಳಿನೊಳಗೆಯೇ ಬರುವುದು ನಿಶ್ಚಿತ.

9 ಕೋಟಿಗೂ ಅಧಿಕ ನೊಂದಾಯಿತ ರೈತರ ಖಾತೆಗಳಿಗೆ 2,000 ರೂ ಹಣ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಯೋಜನೆಗೆ ನೊಂದಾಯಿಸಿದವರೆಲ್ಲರಿಗೂ ಕಂತಿನ ಹಣ ಸಿಗುತ್ತದೆಂದು ಖಾತ್ರಿ ಇಲ್ಲ. ಕೆಲ ನಿಯಮಗಳನ್ನು ಪೂರ್ಣಗೊಳಿಸಿದ್ದರೆ ಮಾತ್ರವೇ ಹಣ ಸಿಗುತ್ತದೆ.

ಇದನ್ನೂ ಓದಿ: ಭಾರತ-ಅಮೆರಿಕ ಟ್ರೇಡ್ ಡೀಲ್​​ಗೆ ‘ಡೈರಿ’ ತಡೆ; ಅಮೆರಿಕದ ಹಾಲು ಭಾರತಕ್ಕೆ ಬಂದರೆ ಹೇಗೆ?

ಪಿಎಂ ಕಿಸಾನ್ ಯೋಜನೆಯ ಸೋಷಿಯಲ್ ಮೀಡಿಯಾ ಅಕೌಂಟ್​​ನಲ್ಲಿ ಈ ಬಗ್ಗೆ ಒಂದು ಪೋಸ್ಟ್ ಹಾಕಲಾಗಿದೆ. ಕಂತಿನ ಹಣ ಸ್ವೀಕರಿಸಲು ಫಲಾನುಭವಿಗಳು ಖಾತ್ರಿಪಡಿಸಿಕೊಳ್ಳಬೇಕಾದ ಆರು ಸಂಗತಿಗಳನ್ನು ಅದರಲ್ಲಿ ತಿಳಿಸಲಾಗಿದೆ.

  1. ಇ-ಕೆವೈಸಿ ಪೂರ್ಣಗೊಳಿಸಿರಬೇಕು
  2. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಿತವಾಗಿರಬೇಕು.
  3. ಬ್ಯಾಂಕ್ ಅಕೌಂಟ್ ಸರಿಯಾಗಿದೆಯಾ ಎಂದು ಪರಿಶೀಲಿಸಬೇಕು.
  4. ಭೂದಾಖಲೆಗಳಲ್ಲಿ ಸಮಸ್ಯೆ ಇದ್ದರೆ ಪರಿಹರಿಸಿರಬೇಕು.
  5. ಪಿಎಂ ಕಿಸಾನ್ ವೆಬ್​ಸೈಟ್​​ನಲ್ಲಿ ಬೆನಿಫಿಶಿಯರಿ ಸ್ಟೇಟಸ್ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.
  6. ಮೊಬೈಲ್ ನಂಬರ್ ಅನ್ನು ಅಪ್​ಡೇಟ್ ಮಾಡಿಟ್ಟುಕೊಳ್ಳಬೇಕು.

ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್ ವಿಳಾಸ ಇಂತಿದೆ: pmkisan.gov.in/

ಅಲ್ಲಿ ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಕಾಣುವ ಫಾರ್ಮರ್ಸ್ ಕಾರ್ನರ್ ಸೆಕ್ಷನ್​​ನಲ್ಲಿ ‘ಬೆನಿಫಿಶಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಊರಿನಲ್ಲಿರುವ ಎಲ್ಲಾ ಪಿಎಂ ಕಿಸಾನ್ ಸ್ಕೀಮ್ ಫಲಾನುಭವಿಗಳ ಪಟ್ಟಿ ಕಾಣಬಹುದು.

ಇಕೆವೈಸಿ ಮಾಡುವ, ಮೊಬೈಲ್ ನಂಬರ್ ಅಪ್​ಡೇಟ್ ಮಾಡುವ ಅವಕಾಶವೂ ವೆಬ್​ಸೈಟ್​ನಲ್ಲಿ ಇರುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್: ಎಲ್ಲಾ ಅರ್ಹ ರೈತರನ್ನೂ ತಲುಪಲು ಸರ್ಕಾರ ಯತ್ನ; ನೀವು ಈ ಯೋಜನೆಗೆ ಅರ್ಹರಾ? ಇಲ್ಲಿದೆ ಡೀಟೇಲ್ಸ್

ಏನಿದು ಪಿಎಂ ಕಿಸಾನ್ ಯೋಜನೆ?

ರೈತರ ವ್ಯವಸಾಯಕ್ಕೆ ಸಹಾಯವಾಗಲೆಂದು ಕೇಂದ್ರ ನಡೆಸುತ್ತಿರುವ ಸ್ಕೀಮ್ ಇದು. ವರ್ಷದಲ್ಲಿ 6,000 ರೂ ನೀಡಲಾಗುತ್ತದೆ. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ, ಅಂದರೆ, 2,000 ರೂಗಳ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ ಈ ಹಣವು ರೈತರ ಖಾತೆಗಳಿಗೆ ನೇರವಾಗಿ ಕ್ರೆಡಿಟ್ ಆಗುತ್ತದೆ. 9 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡು ಫಲಾನುಭವಿಗಳಾಗಿದ್ದಾರೆ. ಈವರೆಗೆ 19 ಕಂತುಗಳ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ