AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ.

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ
ರೈತImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 24, 2026 | 11:35 AM

Share

ನವದೆಹಲಿ, ಮೇ 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ.

ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ಅನ್ನು ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇಲ್ಲಿಯವರೆಗೆ 22 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. 2026ರ ಮಾರ್ಚ್ 13ರಂದು ಕೊನೆಯ ಕಂತು ಬಿಡುಗಡೆಯಾಗಿದ್ದು. 23ನೇ ಕಂತು 2026ರ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ?

ಕರ್ನಾಟಕದಲ್ಲಿ 44 ಲಕ್ಷ ಮಂದಿ ಫಲಾನುಭವಿಗಳು

ಪಿಎಂ ಕಿಸಾನ್ ಸ್ಕೀಮ್​ನಲ್ಲಿ ದೇಶಾದ್ಯಂತ ಸದ್ಯ 9.46 ಕೋಟಿ ಫಲಾನುಭವಿಗಳಿದ್ದು, ಇದರಲ್ಲಿ ಕರ್ನಾಟಕದ 44-45 ಲಕ್ಷ ಮಂದಿ ರೈತರು ನೊಂದಾಯಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜ್ಯದಲ್ಲಿ ಎರಡು ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಯುಪಿ ನಂಬರ್ ಒನ್. ಕೇರಳದಲ್ಲಿ ತಮಿಳುನಾಡಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಿಎಂ ಕಿಸಾನ್ ಪ್ರಯೋಜನ ಪಡೆಯುತ್ತಿದ್ದಾರೆ. ಈ ಸ್ಕೀಮ್​ನಲ್ಲಿ ಅತಿಹೆಚ್ಚು ಫಲಾನುಭವಿಗಳನ್ನು ಹೊಂದಿರುವ ರಾಜ್ಯಗಳಿವು:

  1. ಉತ್ತರಪ್ರದೇಶ: 2.18 ಕೋಟಿ
  2. ಮಹಾರಾಷ್ಟ್ರ: 90 ಲಕ್ಷ
  3. ಮಧ್ಯಪ್ರದೇಶ: 82 ಲಕ್ಷ
  4. ಬಿಹಾರ: 73 ಲಕ್ಷ
  5. ರಾಜಸ್ಥಾನ: 66 ಲಕ್ಷ
  6. ಗುಜರಾತ್: 51 ಲಕ್ಷ
  7. ಪಶ್ಚಿಮ ಬಂಗಾಳ: 45 ಲಕ್ಷ
  8. ಕರ್ನಾಟಕ: 42 ಲಕ್ಷ
  9. ಆಂಧ್ರಪ್ರದೇಶ: 39 ಲಕ್ಷ
  10. ಒಡಿಶಾ: 34 ಲಕ್ಷ

ಇದನ್ನೂ ಓದಿ: ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು

ಪಿಎಂ ಕಿಸಾನ್ ಸ್ಕೀಮ್​ಗೆ ಯಾರು ನೊಂದಾಯಿಸಬಹುದು?

ಸ್ವಂತ ಕೃಷಿ ಜಮೀನು ಹೊಂದಿರುವ ಯಾವುದೇ ಭಾರತೀಯ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆದರೆ, ಕೆಲ ಷರತ್ತುಗಳಿವೆ. ಒಂದು ಕುಟುಂಬದಲ್ಲಿ ಒಬ್ಬರೇ ಫಲಾನುಭವಿ ಇರಲು ಸಾಧ್ಯ. ಕುಟುಂಬದಲ್ಲಿ ಇಬ್ಬರ ಹೆಸರಲ್ಲಿ ಜಮೀನು ಇದ್ದರೂ ಒಬ್ಬರಿಗೆ ಮಾತ್ರ ಸಿಗುತ್ತದೆ. ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರು, ಶಾಸಕರು, ಸಂಸದರು ಮೊದಲಾದವರು ಸ್ವಂತ ಕೃಷಿಭೂಮಿ ಹೊಂದಿದ್ದರೂ ಅವರು ಫಲಾನಭವಕ್ಕೆ ಅರ್ಹರಾಗಿರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sun, 24 May 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್