AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ದಿನಾಂಕ ವಿಸ್ತರಣೆ ಆಗಿದ್ದರೂ ಆನ್​ಲೈನ್​ನಲ್ಲಿ ಅಪ್​ಡೇಟ್ ಆಗಲ್ಲ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ಇಕೆವೈಸಿ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಆದರೆ ಆಫ್​ಲೈನ್ ಮೂಲಕ ಮಾತ್ರ ಮಾಡಬಹುದು.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ದಿನಾಂಕ ವಿಸ್ತರಣೆ ಆಗಿದ್ದರೂ ಆನ್​ಲೈನ್​ನಲ್ಲಿ ಅಪ್​ಡೇಟ್ ಆಗಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 05, 2022 | 9:49 PM

Share

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Samman Nidhi Yojana) ಅಡಿಯಲ್ಲಿ ಅರ್ಹ ರೈತರಿಗೆ ಇಕೆವೈಸಿ ಗಡುವನ್ನು ಸರ್ಕಾರ ವಿಸ್ತರಣೆ ಮಾಡಿದೆ. ಈ ವರ್ಷದ ಮಾರ್ಚ್ 31ರಂದು ಗಡುವು ಕೊನೆ ಆಗಬೇಕಿತ್ತು. ಅದನ್ನು ಈಗ ಮೇ 22, 2022ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ. “ಪಿಎಂ ಕಿಸಾನ್ ಎಲ್ಲ ಫಲಾನುಭವಿಗಳ ಇಕೆವೈಸಿ ಗಡುವು 2022ರ ಮೇ 22ಕ್ಕೆ ವಿಸ್ತರಣೆ ಮಾಡಲಾಗಿದೆ” ಎಂದು ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ಹೇಳಲಾಗಿದೆ. ವಾರ್ಷಿಕವಾದ ಮೊತ್ತವು ಬರಬೇಕು ಅಂದರೆ ಎಲ್ಲ ಫಲಾನುಭವಿ ರೈತರು ಕಡ್ಡಾಯವಾಗಿ ಇಕೆವೈಸಿ ನೀಡಬೇಕು. ಅಂದಹಾಗೆ ಈ ಯೋಜನೆ ಕೇಂದ್ರದ್ದಾಗಿದ್ದು, ನೇರ ಅನುಕೂಲ ವರ್ಗಾವಣೆ (DBT) ಮೂಲಕ ವರ್ಷಕ್ಕೆ 6000 ರೂಪಾಯಿ ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸಲಾಗುವುದು.

ಪ್ರತಿ ವರ್ಷ ಮೂರು ಕಂತಿನಲ್ಲಿ ಹಣ ವರ್ಗಾವಣೆ ಮಾಡಲಾಗುವುದು. ಏಪ್ರಿಲ್​ನಿಂದ ಜುಲೈ, ಆಗಸ್ಟ್​ನಿಂದ ನವೆಂಬರ್ ಮತ್ತು ಮಾರ್ಚ್ ಈ ಮೂರು ಅವಧಿಯಲ್ಲಿ ನೀಡಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಆರಂಭವಾಗಿದ್ದು 2018ರ ಡಿಸೆಂಬರ್​ನಲ್ಲಿ. ಸಣ್ಣ ಪ್ರಮಾಣದ ಭೂ ಹಿಡುವಳಿ ಹೊಂದಿರುವ ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತಂದ ಯೋಜನೆಯು ಇದಾಗಿದೆ. ಈ ಕಂತುಗಳನ್ನು ಬಿಡುಗಡೆ ಮಾಡುವುದಕ್ಕೆ ಪಿಎಂ ಕಿಸಾನ್ ಪೋರ್ಟಲ್​ನಿಂದ ರೈತರ ಆಧಾರ್ ಡೇಟಾ ಬಳಸಿಕೊಳ್ಳಲಾಗುತ್ತದೆ. ಅದರ ಅಡಿಯಲ್ಲಿ ಇಕೆವೈಸಿ ಕಡ್ಡಾಯ ಆಗಿದೆ. ಆದರೆ ದಿನಾಂಕ ವಿಸ್ತರಣೆ ನಂತರ ಪಿಎಂ ಕಿಸಾನ್ ಪೋರ್ಟಲ್​ನಲ್ಲಿ ಇಕೆವೈಸಿ ಆಯ್ಕೆಗಳಿಲ್ಲ.

ಪಿಎಂ ಕಿಸಾನ್ ವೆಬ್​ಸೈಟ್​ ಪ್ರಕಾರ, ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇಕೆವೈಸಿ ಕಡ್ಡಾಯ. ದಯವಿಟ್ಟು ಹತ್ತಿರದ ಸಿಎಸ್​ಸಿ ಸೆಂಟರ್​ ಅನ್ನು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಭೇಟಿ ಮಾಡಿ. ಆಧಾರ್​ ಆಧಾರಿತ ಇಕೆವೈಸಿಯನ್ನು ಒಟಿಪಿ ದೃಢೀಕರಣದ ಮೂಲಕ ಮಾಡುವುದನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಇದರರ್ಥ ಎಲ್ಲ ಅರ್ಹ ರೈತರು ಆಧಾರ್​ ಜತೆಗೆ ಒಟಿಪಿ ದೃಢೀಕರಣದ ಬಳಸಿ ಇಕೆವೈಸಿ ಪೂರ್ಣಗೊಳಿಸಲು ಆಗಲ್ಲ. ಬಯೋಮೆಟ್ರಿಕ್ ದೃಢೀಕರಣದ ಮೂಲಕ ಮಾರದೆ ಪಿಎಂ ಕಿಸಾನ್ ಇಕೆವೈಸಿ ಪೂರ್ತಿ ಮಾಡಲು ಸಾಧ್ಯ. ಅದನ್ನು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್​ಗೆ ಭೇಟಿ ನೀಡುವ ಮೂಲಕ, ಬಯೋಮೆಟ್ರಿಕ್ ನಮಾಹಿತಿ ನೀಡುವ ಮೂಲಕ ಮಾತ್ರ ಸಾಧ್ಯ.

11ನೇ ಕಂತಿನ ಪಿಎಂ ಕಿಸಾಬ್ ಯೋಜನೆ ಹಣ ಪಡೆಯಲು ಇದು ಅಗತ್ಯ. ಆಫ್​ಲೈನ್ ಮೂಲಕ ಇಕೆವೈಸಿ ಮುಗಿಸಿದ ಮೇಲೆ ರೈತ ಫಲಾನುಭವಿಗಳ ಖಾತೆಗೆ ಎರಡು ಸಾವಿರ ರೂಪಾಯಿ ಜಮೆ ಆಗುತ್ತದೆ. ಒಂದು ವೇಳೆ ಫಲಾನುಭವಿ ರೈತರು ತಪ್ಪಾದ ಮಾಹಿತಿ ನೀಡಿದಲ್ಲಿ ಜಮೆಯಾದ ಹಣಕ್ಕೆ ಹೊಣೆ ಆಗಬೇಕಾಗುತ್ತದೆ ಮತ್ತು ದಂಡ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ವಿವರಣೆ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!