AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM-KISAN 11th installment: ಪಿಎಂ ಕಿಸಾನ್​ 11ನೇ ಕಂತಿನ 21 ಸಾವಿರ ಕೋಟಿ ರೂ. ಬಿಡುಗಡೆ; ಸ್ಥಿತಿ ಪರಿಶೀಲನೆ ಹೇಗೆ?

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತು ಮೇ 31ನೇ ತಾರೀಕಿನಂದು ಪ್ರಧಾನಿ ನರೇಂದ್ರ ಮೋದಿ ಹಿಮಾಚಲ ಪ್ರದೇಶದಲ್ಲಿ ಬಿಡುಗಡೆ ಮಾಡಲಿದ್ದಾರೆ. ಫಲಾನುಭವಿ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ ಎಂಬುದರ ವಿವರ ಇಲ್ಲಿದೆ.

PM-KISAN 11th installment: ಪಿಎಂ ಕಿಸಾನ್​ 11ನೇ ಕಂತಿನ 21 ಸಾವಿರ ಕೋಟಿ ರೂ. ಬಿಡುಗಡೆ; ಸ್ಥಿತಿ ಪರಿಶೀಲನೆ ಹೇಗೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: May 31, 2022 | 10:17 AM

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 21,000 ಕೋಟಿ ರೂಪಾಯಿಗಳ ನಗದು ಪ್ರಯೋಜನಗಳ 11ನೇ ಕಂತನ್ನು 2022 ರ ಮೇ 31ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಮೇ 29, 2022 ರಂದು ಹೇಳಿಕೆ ಮೂಲಕ ಕೃಷಿ ಸಚಿವಾಲಯವು ಈ ಪ್ರಕಟಣೆ ಮಾಡಿದೆ. “ಶಿಮ್ಲಾದಲ್ಲಿ (ಹಿಮಾಚಲ ಪ್ರದೇಶ) “ಗರೀಬ್ ಕಲ್ಯಾಣ್ ಸಮ್ಮೇಳನ” ಎಂಬ ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ, ಮೋದಿ ಅವರು 9 ಕೇಂದ್ರ ಸಚಿವಾಲಯಗಳು/ಇಲಾಖೆಗಳು ನಡೆಸುತ್ತಿರುವ 16 ಯೋಜನೆಗಳು/ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. 10 ಕೋಟಿಗೂ ಹೆಚ್ಚು ರೈತರಿಗೆ ಇದು ರೂ. 20,000 ಕೋಟಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಅವರು ಬಿಡುಗಡೆ ಮಾಡಲಿದ್ದಾರೆ,”ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಹೇಳಿಕೆ ತಿಳಿಸಿದೆ.

ಜನವರಿ 1, 2022ರಂದು ಭಾರತೀಯ ಕಾಲಮಾನ ಮಧ್ಯಾಹ್ನ 12.30ಕ್ಕೆ ಪಿಎಂ-ಕಿಸಾನ್ ಕಾರ್ಯಕ್ರಮದ 10ನೇ ಕಂತು ಬಿಡುಗಡೆಯಾಗಿದ್ದು, ಜತೆಗೆ ರೈತ ಉತ್ಪಾದಕ ಸಂಸ್ಥೆ ಯೋಜನೆಗೆ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಪಿಎಂ ಕಿಸಾನ್ ಫಲಾನುಭವಿಯು ಕಂತನ್ನು ಸ್ವೀಕರಿಸಲು ಅರ್ಹರಾಗಬೇಕಾದಲ್ಲಿ eKYC ಕಡ್ಡಾಯವಾಗಿ ಮಾಡಬೇಕಾಗಿದೆ. ಇದನ್ನು ಆಧಾರ್ ಆಧಾರಿತ OTP ಮೂಲಕ ಮಾಡಬಹುದು ಅಥವಾ ಬಯೋಮೆಟ್ರಿಕ್ ಆಧಾರಿತ eKYCಗಾಗಿ ಹತ್ತಿರದ ಸಿಎಸ್​ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಎಲ್ಲಾ PM-KISAN ಫಲಾನುಭವಿಗಳಿಗೆ eKYC ಗಡುವನ್ನು ಮೇ 31, 2022ರ ವರೆಗೆ ವಿಸ್ತರಿಸಲಾಗಿದೆ.

ಪಿಎಂ ಕಿಸಾನ್ 11ನೇ ಕಂತು ಆನ್‌ಲೈನ್‌ನಲ್ಲಿ ಕ್ರೆಡಿಟ್ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ?:

ಹಂತ 1: ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – https://pmkisan.gov.in/

ಹಂತ 2: ಪುಟದ ಬಲ ಮೂಲೆಯಲ್ಲಿರುವ ‘Beneficiaries Status’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 3: ಆಧಾರ್ ಸಂಖ್ಯೆ ಅಥವಾ ಖಾತೆ ಸಂಖ್ಯೆಯನ್ನು ನಮೂದಿಸಿ

ಹಂತ 4: ‘Get Data’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಫಲಾನುಭವಿಯನ್ನು ಅವಲಂಬಿಸಿ ಸ್ಥಿತಿಯ ವಿವರ ಪ್ರದರ್ಶಿಸಲಾಗುತ್ತದೆ. ಅಲ್ಲದೆ, ಮೊತ್ತವನ್ನು ಸ್ವೀಕರಿಸಲು, ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇರಬೇಕು.

ಪಿಎಂ ಕಿಸಾನ್​ನಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೇಗೆ ಪರಿಶೀಲಿಸುವುದು?

ಹಂತ 1: ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – https://pmkisan.gov.in/

ಹಂತ 2: ಪುಟದ ಬಲ ಮೂಲೆಯಲ್ಲಿರುವ ‘Beneficiaries List’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 3: ಆಯ್ದ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮದಂತಹ ಡ್ರಾಪ್‌ಡೌನ್‌ನಿಂದ ವಿವರಗಳನ್ನು ಆಯ್ಕೆ ಮಾಡಿ

ಹಂತ 4: ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಫಲಾನುಭವಿಗಳ ಪಟ್ಟಿಯ ವಿವರಗಳನ್ನು ಪ್ರದರ್ಶಿಸಲಾಗುತ್ತದೆ.

ನೀವು ಈ ಪಿಎಂ-ಕಿಸಾನ್ ಸಹಾಯವಾಣಿ ಸಂಖ್ಯೆ. 155261 / 011-24300606 ಗೆ ಕರೆ ಮಾಡಬಹುದು.

ಪಿಎಂ ಕಿಸಾನ್ ವಿವರಗಳು:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PIV-KISAN) ಕೇಂದ್ರ ವಲಯದ ಒಂದು ಹೊಸ ಯೋಜನೆಯಾಗಿದ್ದು, ಇದು ದೇಶದ ಎಲ್ಲ ಭೂಹಿಡುವಳಿ ರೈತ ಕುಟುಂಬಗಳಿಗೆ ಕೃಷಿ ಮತ್ತು ಸಂಬಂಧಿತ ಒಳಹರಿವು ಮತ್ತು ಮನೆ ಅಗತ್ಯಗಳಿಗಾಗಿ ಅವರ ಹಣಕಾಸಿನ ಬೇಡಿಕೆಗಳನ್ನು ಪೂರೈಸಲು ಸಹಾಯ ಮಾಡಲು ಆದಾಯ ಬೆಂಬಲವನ್ನು ನೀಡುತ್ತದೆ. ಯೋಜನೆಯಡಿ ನಿರ್ದಿಷ್ಟ ಸ್ವೀಕೃತದಾರರಿಗೆ ಪ್ರಯೋಜನಗಳನ್ನು ವರ್ಗಾಯಿಸುವ ಸಂಪೂರ್ಣ ಹಣಕಾಸಿನ ಜವಾಬ್ದಾರಿಯನ್ನು ಭಾರತ ಸರ್ಕಾರವು ಭರಿಸುತ್ತದೆ. ಪಿಎಂ-ಕಿಸಾನ್ ಕಾರ್ಯಕ್ರಮವು ಅರ್ಹ ರೈತ ಕುಟುಂಬಗಳನ್ನು ನೀಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Kisan Samman Nidhi: ಒಂದು ಕುಟುಂಬದಲ್ಲಿ ಎಷ್ಟು ಮಂದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪ್ರಯೋಜನ ಪಡೆಯಬಹುದು?

VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ