PM Kisan 14th Installment: ಕೃಷಿಕರಿಗೆ ನೀಡುವ ಪಿಎಂ ಕಿಸಾನ್ 14ನೇ ಕಂತಿನ ಹಣ ಮುಂದಿನ ವಾರ ಬಿಡುಗಡೆ? ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ

2023 June 3rd Week Release Date: ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಪ್ರಕಾರ ಜೂನ್ 3ನೇ ವಾರದಲ್ಲಿ ಕೇಂದ್ರದಿಂದ 14ನೇ ಕಂತಿನ ಹಣ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಕೆಲ ವರದಿಗಳು ಜೂನ್ 19ರ ದಿನದತ್ತ ಬೊಟ್ಟು ಮಾಡಿವೆ.

PM Kisan 14th Installment: ಕೃಷಿಕರಿಗೆ ನೀಡುವ ಪಿಎಂ ಕಿಸಾನ್ 14ನೇ ಕಂತಿನ ಹಣ ಮುಂದಿನ ವಾರ ಬಿಡುಗಡೆ? ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ
ಪಿಎಂ ಕಿಸಾನ್ ಯೋಜನೆ
Follow us
|

Updated on: Jun 12, 2023 | 1:25 PM

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Samman Nidhi Yojana) ರೈತರಿಗೆ ಕೇಂದ್ರ ಸರ್ಕಾರ ಒದಗಿಸುವ ಸಹಾಯಧನದಲ್ಲಿ 14ನೇ ಕಂತಿನ 2,000 ರೂ ಹಣ (PM Kisan 14th Installment) ಯಾವಾಗ ಬೇಕಾದರೂ ಬಿಡುಗಡೆ ಆಗುವ ಸಾಧ್ಯತೆ ಇದೆ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಪ್ರಕಾರ ಜೂನ್ 3ನೇ ವಾರದಲ್ಲಿ ಕೇಂದ್ರದಿಂದ ಹಣ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ಬಿಡುಗಡೆ ಯಾವಾಗ ಎಂದು ಮುಂಚಿತವಾಗಿ ಹೇಳುವುದು ಅಪರೂಪ. ಆದರೆ ಕೆಲ ವರದಿಗಳು ಜೂನ್ 19ರಂದು ಪಿಎಂ ಕಿಸಾನ್ ಹಣ ಬರಬಹುದು ಎಂದು ನಿರೀಕ್ಷಿಸಿವೆ.

2019ರ ಫೆಬ್ರುವರಿಯಲ್ಲಿ ಆರಂಭಗೊಂಡ ಪಿಎಂ ಕಿಸಾನ್ ಯೋಜನೆಯಲ್ಲಿ ಸರ್ಕಾರ ಕೃಷಿ ಜಮೀನು ಮಾಲೀಕರಿಗೆ ಪ್ರತೀ ವರ್ಷ 6,000 ರೂ ನೀಡುತ್ತದೆ. ಪ್ರತೀ ವರ್ಷ ಮೂರು ಕಂತುಗಳಲ್ಲಿ ತಲಾ 2,000 ರೂನಂತೆ ಈ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುತ್ತದೆ. ಈವರೆಗೂ 13 ಕಂತುಗಳ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. 2023ರ ಮಾರ್ಚ್ ತಿಂಗಳಲ್ಲಿ 13ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಬೆಳಗಾವಿಯ ಸಾರ್ವಜನಿಕ ಸಮಾವೇಸದಲ್ಲಿ ಪ್ರಧಾನಿ ನರೇಂದ್ರ ಮೋದಿ 13ನೇ ಕಂತಿನ ಪಿಎಂ ಕಿಸಾನ್ ಹಣ ಬಿಡುಗಡೆ ಆಗಿರುವುದಾಗಿ ಘೋಷಣೆ ಮಾಡಿದ್ದರು.

ಇದನ್ನೂ ಓದಿPM Kisan: ಪಿಎಂ ಕಿಸಾನ್ ಯೋಜನೆ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ತಿಳಿಯುವುದು ಹೇಗೆ? ನೊಂದಣಿ ಹೇಗೆ? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರದಿಂದ 6 ಸಾವಿರ ರೂ ಜೊತೆಗೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ 4,000 ರೂ, ಒಟ್ಟು 10,000 ರೂ ಹಣವು ಒಂದು ವರ್ಷಕ್ಕೆ ಸಿಗುತ್ತದೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಈ ಹೆಚ್ಚುವರಿ ಹಣವನ್ನು ರಾಜ್ಯ ಸರ್ಕಾರ ನೀಡುತ್ತದಾ ಎಂಬುದು ಗೊತ್ತಿಲ್ಲ.

ಈವರೆಗೂ ಕಂತು ಬಿಡುಗಡೆ ಆದ ದಿನ ಗಣನೆಗೆ ತೆಗೆದುಕೊಂಡರೆ ಈ ಬಾರಿ ಏಪ್ರಿಲ್​ನಿಂದ ಜುಲೈವರೆಗಿನ ಅವಧಿಯಲ್ಲಿ ಹಣ ಬಿಡುಗಡೆ ಆಗಬಹುದು. ಆಗಸ್ಟ್​ನಿಂದ ನವೆಂಬರ್, ಹಾಗು ಡಿಸೆಂಬರ್​ನಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಹಣ ಬಿಡುಗಡೆ ಆಗುವುದು ವಾಡಿಕೆ. ಈ ಲೆಕ್ಕಾಚಾರದಲ್ಲಿ 14ನೇ ಕಂತಿನ ಹಣ ಬಿಡುಗಡೆಗೆ ಜುಲೈವರೆಗೂ ಸಮಯ ಇದೆ. ಆದರೆ, ವರದಿಗಳ ಪ್ರಕಾರ ಜೂನ್ 3ನೇ ವಾರದಲ್ಲೇ 2,000 ರೂ ಹಣ ಬಿಡುಗಡೆ ಆಗಬಹುದು.

ಇದನ್ನೂ ಓದಿPoor and Inflation: ಬಡವರು ಇನ್ನಷ್ಟು ಬಡವರಾಗಲು, ಸಿರಿವಂತರು ಇನ್ನಷ್ಟು ಸಿರಿವಂತರಾಗಲು ಏನು ಕಾರಣ? ವಿಷ ವರ್ತುಲವಾ ಹಣದುಬ್ಬರ? ಕುತೂಹಲದ ಉದಾಹರಣೆ

ಪಿಎಂ ಕಿಸಾನ್ ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ

ಪಿಎಂ ಕಿಸಾನ್ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.in. ಇಲ್ಲಿ ಬಹಳಷ್ಟು ಅಗತ್ಯ ಮಾಹಿತಿ ಮತ್ತು ಸೇವೆ ಪಡೆಯಬಹುದು.

ಈ ಪೋರ್ಟಲ್​ಗೆ ಭೇಟಿ ನೀಡಿದರೆ ಮುಖ್ಯಪುಟದಲ್ಲಿ ಫಾರ್ಮರ್ ಕಾರ್ನರ್ ಸೆಕ್ಷನ್​ನಲ್ಲಿ ಪಿಎಂ ಕಿಸಾನ್ ಬೆನಿಫಿಶಿಯರಿ ಲಿಸ್ಟ್ ಕಾಣಬಹುದು.

ಅಲ್ಲಿ ರಾಜ್ಯ, ಜಿಲ್ಲೆ, ತಾಲೂಕು, ಊರು ಆಯ್ಕೆ ಮಾಡಿಕೊಂಡರೆ ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣಬಹುದು.

ಇನ್ನು, ನೀವು ಇಕೆವೈಸಿ ಮಾಡಿರದೇ ಹೋದರೆ ಯೋಜನೆಯ ಹಣ ಬರುವುದಿಲ್ಲ. ಮೊದಲು ಇಕೆವೈಸಿ ಸಲ್ಲಿಸಿ. ಇದೇ ಮೊದಲ ಬಾರಿಗೆ ಪಿಎಂ ಕಿಸಾನ್ ಯೋಜನೆಯಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಳ್ಳುವುದಿದ್ದರೆ ಅದಕ್ಕೆ ಈ ಪೋರ್ಟಲ್​ನಲ್ಲಿ ಅವಕಾಶ ಇದೆ. ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಕ್ಲಿಕ್ ಮಾಡಿ ಆ ಮೂಲಕ ಅರ್ಜಿ ತುಂಬಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು