AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 17th installment: ಪಿಎಂ ಕಿಸಾನ್ 17ನೇ ಕಂತು ಬಂತು; 20,000 ಕೋಟಿ ರೂ ಹಣ ಬಿಡುಗಡೆ

PM Kisan Scheme 17th Installment Released: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 17ನೇ ಕಂತಿನ ಹಣ ಬಿಡುಗಡೆ ಆಗಿದೆ. ಪ್ರಧಾನಿಗಳು ಇಂದು ಸೋಮವಾರ (ಜೂನ್ 10) ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಮಾಡಲು ಕಡತಕ್ಕೆ ಸಹಿಹಾಕಿದ್ದಾರೆ. ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ತೆಗೆದುಕೊಂಡ ಮೊದಲ ಕ್ರಮ ಇದು. ಒಂಬತ್ತು ಕೋಟಿಗೂ ಹೆಚ್ಚು ಸಂಖ್ಯೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2,000 ರೂ ಹಣ ಜಮೆ ಆಗಲಿದೆ.

PM Kisan 17th installment: ಪಿಎಂ ಕಿಸಾನ್ 17ನೇ ಕಂತು ಬಂತು; 20,000 ಕೋಟಿ ರೂ ಹಣ ಬಿಡುಗಡೆ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 10, 2024 | 12:47 PM

Share

ನವದೆಹಲಿ, ಜೂನ್ 10: ರೈತರಿಗೆ ವ್ಯವಸಾಯಕ್ಕೆ ಧನಸಹಾಯವಾಗುವ ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Samman Nidhi Yojana) 17ನೇ ಕಂತಿನ ಹಣ ಬಿಡುಗಡೆ ಆಗಿದೆ. ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಕೈಗೊಂಡ ಮೊದಲ ಕ್ರಮ ಇದು ಎಂಬುದು ವಿಶೇಷ. ಇಂದು ಪ್ರಧಾನಿಗಳು ಪಿಎಂ ಕಿಸಾನ್ ನಿಧಿಯ ಹಣ ವಿಲೇವಾರಿ ಕಡತಕ್ಕೆ ಸಹಿಹಾಕಿದ್ದಾರೆ. ಇದರೊಂದಿಗೆ 9.3 ಕೋಟಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ 17ನೇ ಕಂತಿನ ಹಣವಾದ 2,000 ಕೋಟಿ ರೂ ಜಮೆಯಾಗಲಿದೆ. ಸರ್ಕಾರ ಒಟ್ಟು 20,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಿದೆ.

ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯಾ ಎಂದು ಖಾತ್ರಿಪಡಿಸಿಕೊಳ್ಳಿ. ಕೆಲವೊಮ್ಮೆ ಖಾತೆಗೆ ಹಣ ಜಮೆ ಆಗಲು ಒಂದು ವಾರದವರೆಗೂ ಸಮಯ ಆಗಬಹುದು. ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನೀವಿದ್ದೀರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ಕ್ರಮ ಅನುಸರಿಸಿ:

  • ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್​ಗೆ ಹೋಗಿ: pmkisan.gov.in/
  • ಇಲ್ಲಿ ಕೆಳಗೆ ತುಸು ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣಬಹುದು. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ
  • ಇದರಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಊರನ್ನು ಆಯ್ದುಕೊಳ್ಳಿ.
  • ನಿಮ್ಮ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣುತ್ತದೆ. ಇದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಇದನ್ನೂ ಓದಿ: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ತೆಗೆದುಕೊಂಡ ಮೊದಲ ನಿರ್ಧಾರ ಇದು

ಹಣ ಬಂದಿಲ್ಲದಿದ್ದರೆ ಅಥವಾ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಹೇಗೆ?

ಒಂದು ವೇಳೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೇ ಇದ್ದರೆ ಅದಕ್ಕೆ ಬೇರೆ ಬೇರೆ ಕಾರಣಗಳಿರಬಹುದು. ಒಂದು, ನೀವು ಇಕೆವೈಸಿ ಪೂರ್ಣಗೊಳಿಸದೇ ಇರಬಹುದು, ಅಥವಾ ಮಾಡಿಲ್ಲದೇ ಇರಬಹುದು. ಇನ್ನೊಂದು, ನೀವು ಈ ಯೋಜನೆಯ ಫಲಾನುಭವಿಯಾಗಲು ಇರುವ ಅರ್ಹತೆಯ ಅಂಶಗಳು ನಿಮಗೆ ಅನ್ವಯ ಆಗದೇ ಇರಬಹುದು.

ಪಿಎಂ ಕಿಸಾನ್ ಫಲಾನುಭವಿಗಳೆಲ್ಲರೂ ಇಕೆವೈಸಿ ಮಾಡುವುದು ಕಡ್ಡಾಯ. ಕಳೆದ ಒಂದು ವರ್ಷದಲ್ಲಿ ನೀವು ಒಮ್ಮೆ ಇಕೆವೈಸಿ ಮಾಡಿಸಿದ್ದರೆ ಸಾಕು. ಇನ್ನೂ ನೀವು ಕೆವೈಸಿ ಅಪ್​ಡೇಟ್ ಮಾಡದೇ ಹೋಗಿದ್ದರೆ ಕೂಡಲೇ ಮಾಡಿರಿ. ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಅಲ್ಲಿಂದಲೇ ಇಕೆವೈಸಿ ಅಪ್​ಡೇಟ್ ಮಾಡಬಹುದು. ಇದಕ್ಕೆ ನಿಮ್ಮ ಆಧಾರ್ ಕಾರ್ಡ್ ಇದ್ದರೆ ಸಾಕು. ಈ ಆಧಾರ್​ಗೆ ಮೊಬೈಲ್ ನಂಬರ್ ಜೋಡಿತವಾಗಿರಬೇಕು. ಒಟಿಪಿ ಮೂಲಕ ಇಕೆವೈಸಿ ಅಪ್​ಡೇಟ್ ಮಾಡಬಹುದು.

ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿಂದಲೂ ನೀವು ಇಕೆವೈಸಿ ಅಪ್​ಡೇಟ್ ಮಾಡಲು ಸಾಧ್ಯ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ