ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ

PM Kisan scheme, 18th installment date: ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ 2,000 ರೂ ಹಣ ಅಕ್ಟೋಬರ್ 5ಕ್ಕೆ ಬಿಡುಗಡೆ ಆಗಲಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 17 ಕಂತುಗಳ ಹಣವನ್ನು ಫಲಾನುಭವಿ ರೈತರು ಪಡೆದಿದ್ದಾರೆ. ವರ್ಷಕ್ಕೆ 6,000 ರೂ ನೀಡುವ ಈ ಸ್ಕೀಮ್​ಗೆ ರೈತರು ನೊಂದಾಯಿಸಿಕೊಳ್ಳುವುದು ಹೇಗೆ ಇತ್ಯಾದಿ ವಿವರ ಈ ಲೇಖನದಲ್ಲಿದೆ.

ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ
ರೈತ
Follow us
|

Updated on: Sep 26, 2024 | 11:30 AM

ನವದೆಹಲಿ, ಸೆಪ್ಟೆಂಬರ್ 26: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ರಿಲೀಸ್ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಯಾರು ಅರ್ಹರು?

ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್​ಗೆ ಅರ್ಹರಾಗಿರುತ್ತಾರೆ. ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಇಲ್ಲಿಯವರೆಗೆ ಸುಮಾರು 10 ಕೋಟಿ ರೈತರು ಸ್ಕೀಮ್​ಗೆ ನೊಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಮೇಕ್ ಇನ್ ಇಂಡಿಯಾ’ ಕೈಂಕರ್ಯಕ್ಕೆ 10 ವರ್ಷ; ನರೇಂದ್ರ ಮೋದಿ ಪಟ್ಟಿ ಮಾಡಿದ ಸಾಧನೆಗಳ ವಿವರ

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸುವುದು ಹೇಗೆ?

ಯೋಜನೆಗೆ ನೊಂದಾಯಿಸಲು ಆಫ್​ಲೈನ್ ಮತ್ತು ಆನ್​ಲೈನ್ ಎರಡೂ ಮಾರ್ಗಗಳಲ್ಲಿ ಅವಕಾಶ ಇದೆ. ನಿಮ್ಮ ಗ್ರಾಮದ ಸಮೀಪ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಖುದ್ದಾಗಿ ನೊಂದಾಯಿಸಿಕೊಳ್ಳಬಹುದು. ಆಧಾರ್ ಕಾರ್ಡ್, ವೋಟರ್ ಐಡಿ, ಪಹಣಿ ಸರ್ಟಿಫಿಕೇಟ್, ಬ್ಯಾಂಕ್ ಖಾತೆ ಪ್ರತಿ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕಾಗಬಹುದು.

ಆನ್​ಲೈನ್​ನಲ್ಲಿ ಮಾಡಬೇಕೆಂದರೆ ಪಿಎಂ ಕಿಸಾನ್ ಸ್ಕೀಮ್​ನ ವೆಬ್​ಸೈಟ್​ಗೆ ಹೋಗಬೇಕು. ಅದರ ವಿಳಾಸ: pmkisan.gov.in/

ಇಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕಾಣಬಹುದು. ಅಲ್ಲಿ ಕ್ರಮಾವಳಿಗಳನ್ನು ಅನುಸರಿಸಿ ಯೋಜನೆಗೆ ನೊಂದಾಯಿಸಿಕೊಳ್ಳಲು ಸಾಧ್ಯವಿದೆ.

ನೀವೀಗಾಗಲೇ ನೊಂದಾಯಿಸಿದ್ದರೆ ಫಲಾನುಭವಿ ಪಟ್ಟಿ ಪರಿಶೀಲಿಸಿ

ನೀವು ಈಗಾಗಲೇ ಸ್ಕೀಮ್​ಗೆ ನೊಂದಾಯಿಸಿದ್ದು ಇನ್ನೂ ಕೂಡ ಕಂತಿನ ಹಣ ಬಂದಿಲ್ಲ ಎಂದಿದ್ದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಅದನ್ನು ಆನ್​ಲೈನ್​ನಲ್ಲೇ ಮಾಡಬಹುದು.

ಇದನ್ನೂ ಓದಿ: ದಯವಿಟ್ಟು… ಭಾರತ ಮೂಲದ ವಿನೋದ್ ಖೋಸ್ಲಾ ಬಳಿ ಕ್ಷಮೆ ಯಾಚಿಸಿದ ಇಲಾನ್ ಮಸ್ಕ್; ಕ್ಯಾಲಿಫೋರ್ನಿಯಾ ಬೀಚ್​ವೊಂದರ ಕಥೆ ಇದು

ಮೇಲೆ ತಿಳಿಸಿದ ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್​ನಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮವನ್ನು ಆಯ್ದುಕೊಂಡು ಸರ್ಚ್ ಕೊಡಿ. ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ