AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ಬಾರಿ ವಿಳಂಬವಾಗಿದ್ದ ಪಿಎಂ ಕಿಸಾನ್ ಹಣ ಈ ಬಾರಿ ಬೇಗ ಸಿಗುವ ನಿರೀಕ್ಷೆ; ಇಲ್ಲಿದೆ 21ನೇ ಕಂತಿನ ಬಿಡುಗಡೆ ದಿನಾಂಕ

PM Kisan scheme 21st installment release date: ಪಿಎಂ ಕಿಸಾನ್ ಯೋಜನೆಯಲ್ಲಿ ಇಲ್ಲಿಯವರೆಗೆ 20 ಕಂತುಗಳ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈಗ 21ನೇ ಕಂತಿನ ಬಿಡುಗಡೆಗೆ ನಿರೀಕ್ಷೆ ಮಾಡಲಾಗುತ್ತಿದೆ. ಆಗಸ್ಟ್​ನಲ್ಲಿ 20ನೇ ಕಂತು ಬಿಡುಗಡೆ ಆಗಿತ್ತು. ಈ ತಿಂಗಳೊಳಗೆಯೇ 21ನೇ ಕಂತು ಬಿಡುಗಡೆ ಆಗುವ ಸಾಧ್ಯತೆ ಇಲ್ಲದಿಲ್ಲ. 10 ಕೋಟಿ ರೈತರಿಗೆ ಈ ಬಾರಿ ಪಿಎಂ ಕಿಸಾನ್ ಹಣ ಸಿಗಬಹುದು.

ಕಳೆದ ಬಾರಿ ವಿಳಂಬವಾಗಿದ್ದ ಪಿಎಂ ಕಿಸಾನ್ ಹಣ ಈ ಬಾರಿ ಬೇಗ ಸಿಗುವ ನಿರೀಕ್ಷೆ; ಇಲ್ಲಿದೆ 21ನೇ ಕಂತಿನ ಬಿಡುಗಡೆ ದಿನಾಂಕ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 23, 2025 | 11:14 PM

Share

ನವದೆಹಲಿ, ಅಕ್ಟೋಬರ್ 23: ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan scheme) ಯೋಜನೆ ಅಡಿ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುತ್ತದೆ. ಪ್ರತೀ ಕಂತಿನಲ್ಲೂ 2,000 ರೂ ಹಣವನ್ನು ರೈತರ (Farmer) ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಈಗ 9 ಕೋಟಿಗೂ ಅಧಿಕ ಫಲಾನುಭವಿ ರೈತರು 21ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಬಾರಿಯ ಪಿಎಂ ಕಿಸಾನ್ ಕಂತಿನ ಹಣ (20ನೇ ಕಂತು) ತಡವಾಗಿ ಬಿಡುಗಡೆ ಆಗಿತ್ತು. ಜೂನ್​ನಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇತ್ತಾದರೂ ಬಂದಿದ್ದು ಆಗಸ್ಟ್ ತಿಂಗಳಲ್ಲಿ. 2.4 ಕೋಟಿ ಮಹಿಳಾ ರೈತರೂ ಒಳಗೊಂಡಂತೆ 9.8 ಕೋಟಿ ರೈತರಿಗೆ 2,000 ರೂ ಹಣ ಸಿಕ್ಕಿತ್ತು. ಈಗ 21ನೇ ಕಂತಿನ ಹಣ ಈ ತಿಂಗಳೇ ಬರುವ ಸಾಧ್ಯತೆ ಇದೆ. ಅಕಸ್ಮಾತ್ ಅಕ್ಟೋಬರ್​ನಲ್ಲಿ ಆಗಲಿಲ್ಲವೆಂದರೂ ಮುಂದಿನ ತಿಂಗಳಾದ ನವೆಂಬರ್​ನಲ್ಲಿ 21ನೇ ಕಂತು ಬಿಡುಗಡೆ ಆಗುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ: ಪೋಸ್ಟ್ ಆಫೀಸ್ ಪಿಪಿಎಫ್ ಸ್ಕೀಮ್ ಮೂಲಕ 15 ವರ್ಷದಲ್ಲಿ 40 ಲಕ್ಷ ರೂವರೆಗೆ ಆದಾಯ

ಪಿಎಂ ಕಿಸಾನ್ ಯೋಜನೆಯ ಲಾಭವೇನು?

ಪಿಎಂ ಕಿಸಾನ್ ಯೋಜನೆಯನ್ನು ರೈತರ ಕೃಷಿ ಕಾರ್ಯಗಳಿಗೆ ನೆರವಾಗಲೆಂದು ರೂಪಿಸಲಾಗಿದೆ. ವ್ಯವಸಾಯಕ್ಕೆ ಅನುಕೂಲವಾಗಲೆಂದು ಪ್ರತೀ ನಾಲ್ಕು ತಿಂಗಳಿಗೆ ಸರ್ಕಾರವು ರೈತರಿಗೆ 2,000 ರೂ ಸಹಾಯಧನವಾಗಿ ನೀಡುವುದೇ ಈ ಯೋಜನೆಯ ಉದ್ದೇಶ.

ವರ್ಷಕ್ಕೆ ಒಟ್ಟು 6,000 ರೂ ಹಣವು ರೈತರಿಗೆ ಸಿಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಮತ್ತು ಡಿಸೆಂಬರ್-ಮಾರ್ಚ್ ಈ ಅವಧಿಗಳಲ್ಲಿ ಕಂತಿನ ಹಣ ಬಿಡುಗಡೆ ಆಗುತ್ತದೆ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಅತಿಹೆಚ್ಚು ಫಿಕ್ಸೆಡ್ ಡೆಪಾಸಿಟ್ ರೇಟ್ ಕೊಡುವ ಬ್ಯಾಂಕುಗಳು

ಪಿಎಂ ಕಿಸಾನ್ ಯೋಜನೆಗೆ ಯಾರು ಅರ್ಹರು?

ಪಿಎಂ ಕಿಸಾನ್ ಯೋಜನೆಯಲ್ಲಿ ಯಾವ ರೈತರು ಬೇಕಾದರೂ ನೊಂದಾಯಿಸಿಕೊಳ್ಳಬಹುದು. ಆದರೆ, ಅವರ ಹೆಸರಿನಲ್ಲಿ ಕೃಷಿ ಜಮೀನು ಇರಬೇಕು. ಐಟಿಆರ್ ಸಲ್ಲಿಸುತ್ತಿರುವವರು, ವೈದ್ಯರು, ಎಂಜಿನಿಯರ್ ಇತ್ಯಾದಿ ವೃತ್ತಿಪರರು, ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರು, ಜನಪ್ರತಿನಿಧಿಗಳು ಇತ್ಯಾದಿ ಆಗಿರುವವರು ಕೃಷಿ ಭೂಮಿ ಹೊಂದಿದ್ದರೂ ಸಹ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುವುದಿಲ್ಲ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಇತ್ಯಾದಿ ಅಗತ್ಯ ಮಾಹಿತಿ ವೀಕ್ಷಿಸಲು ಈ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ