ಪಿಎಂ ಕಿಸಾನ್ ಯೋಜನೆ, ನೊಂದಾಯಿಸಿದ್ದರೂ 23ನೇ ಕಂತಿನ ಬಂದಿಲ್ಲವಾ? ಇವಿರಬಹುದು ಕಾರಣಗಳು

PM Kisan Samman Nidhi Yojana 23rd installment: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 23ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಜೂನ್ 20ರಂದು ಬಿಡುಗಡೆ ಮಾಡಿದೆ. 9.44 ಕೋಟಿ ರೈತರಿಗೆ ತಲಾ 2,000 ರೂ ಹಣ ಕ್ರೆಡಿಟ್ ಆಗಿದೆ. ಈ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತುಗಳಿಂದ ಒಟ್ಟು 6,000 ರೂ ಹಣವು ರೈತರಿಗೆ ಸಿಗುತ್ತದೆ. ಯೋಜನೆಗೆ ನೊಂದಾಯಿಸಿಯೂ ಕೆಲವರಿಗೆ ಬೇರೆ ಬೇರೆ ಕಾರಣಕ್ಕೆ ಹಣ ಬಂದಿಲ್ಲದೇ ಇರಬಹುದು.

ಪಿಎಂ ಕಿಸಾನ್ ಯೋಜನೆ, ನೊಂದಾಯಿಸಿದ್ದರೂ 23ನೇ ಕಂತಿನ ಬಂದಿಲ್ಲವಾ? ಇವಿರಬಹುದು ಕಾರಣಗಳು
ರೈತ
Image Credit source: Getty Images

Updated on: Jun 21, 2026 | 12:30 PM

ಕೋಲ್ಕತಾ, ಜೂನ್ 21: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi Scheme) 23ನೇ ಕಂತಿನ ಹಣವನ್ನು ಜೂನ್ 20, ಶನಿವಾರದಂದು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರ್​ನಲ್ಲಿ ಹೊಸ ಕಂತು ರಿಲೀಸ್ ಮಾಡಿದ್ದಾರೆ. 9.44 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಗಳಂತೆ ಒಟ್ಟು 18,800 ಕೋಟಿ ರೂ ಹಣವನ್ನು ಡಿಬಿಟಿ ಮೂಲಕ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2018ರ ಡಿಸೆಂಬರ್​ನಲ್ಲಿ ಆರಂಭಗೊಂಡ ಈ ಯೋಜನೆಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ಮಾಡಿರುವ ವೆಚ್ಚ 4.28 ಲಕ್ಷ ಕೋಟಿ ರೂಗಿಂತ ಹೆಚ್ಚಿದೆ.

ನಿಮಗೆ ಪಿಎಂ ಕಿಸಾನ್ 23ನೇ ಕಂತಿನ ಹಣ ಸಿಕ್ಕಿದೆಯಾ?

ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೊಂದಾಯಿಸಿದ್ದರೆ ಇಷ್ಟರಲ್ಲಿ ಹಣ ವರ್ಗಾವಣೆ ಆಗಿರುತ್ತದೆ, ಅಥವಾ ಸೋಮವಾರ ಕ್ರೆಡಿಟ್ ಆಗಬಹುದು. ಬ್ಯಾಂಕ್ ಅಕೌಂಟ್ ಅನ್ನು ಒಮ್ಮೆ ಪರಿಶೀಲಿಸಿ ನೋಡಿ. ಅಥವಾ ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್​ಗೆ ಹೋದರೆ ಅಲ್ಲಿ ‘ನೋ ಯುವರ್ ಸ್ಟೇಟಸ್’  (Know Your Status) ಟ್ಯಾಬ್ ಕಾಣುತ್ತದೆ. ಅದರಿಂದಲೂ ಹಣ ಟ್ರಾನ್ಸ್​ಫರ್ ಆಗಿದೆಯಾ ಇಲ್ಲವಾ ಎಂದು ತಿಳಿಯಬಹುದು.

ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ

ನೋ ಯುವರ್ ಸ್ಟೇಟಸ್ ಕ್ಲಿಕ್ ಮಾಡಿದಾಗ ನಿಮ್ಮ ನೊಂದಾಯಿತ ಸಂಖ್ಯೆ ಕೇಳುತ್ತದೆ. ಅದನ್ನು ನಮೂದಿಸಿದರೆ ಮಾಹಿತಿ ಸಿಗುತ್ತದೆ.

ಬೆನಿಫಿಶಿಯರಿ ಲಿಸ್ಟ್ ನೋಡಿ

ಪಿಎಂ ಕಿಸಾನ್ ವೆಬ್​ಸೈಟ್​ನಲ್ಲೇ ನೀವು ಫಲಾನುಭವಿಗಳ ಪಟ್ಟಿಯಲ್ಲಿದ್ದೀರೋ ಇಲ್ಲವೋ ಎಂಬುದನ್ನು ತಿಳಿಯಬಹುದು. ವೆಬ್​ಸೈಟ್​ನಲ್ಲಿರುವ ಬೆನಿಫಿಶಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ, ಆ ಬಳಿಕ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ದುಕೊಂಡರೆ, ಆ ಗ್ರಾಮದಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ನೋಡಬಹುದು. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಿಎಂ ಕಿಸಾನ್ ಹಣ ಬಂದಿಲ್ಲವೆಂದರೆ ಇವಿರಬಹುದು ಕಾರಣಗಳು

ಪಿಎಂ ಕಿಸಾನ್ ಯೋಜನೆಯಲ್ಲಿ ನೀವು ನೊಂದಾಯಿಸಿಕೊಂಡಿದ್ದೂ, ಬೆನಿಫಿಶಿಯರಿ ಲಿಸ್ಟ್​ನಲ್ಲಿ ಹೆಸರಿದ್ದೂ ಹಣ ಬಂದಿಲ್ಲದಿರುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಾರಣಗಳು ಇಲ್ಲದಿಲ್ಲ.

  • ನೀವು ಇಕೆವೈಸಿ ಅಪ್​ಡೇಟ್ ಮಾಡಿಲ್ಲದಿದ್ದರೆ ಹಣ ಬರುವುದಿಲ್ಲ.
  • ಬ್ಯಾಂಕ್ ಅಕೌಂಟ್ ನಂಬರ್, ಐಎಫ್​ಎಸ್​ಸಿ ಕೋಡ್ ತಪ್ಪಾಗಿ ನಮೂದಾಗಿದ್ದರೆ ಹಣ ಬರುವುದಿಲ್ಲ.
  • ಬ್ಯಾಂಕ್ ಅಕೌಂಟ್​ಗೆ ಆಧಾರ್ ಲಿಂಕ್ ಆಗಿಲ್ಲದಿದ್ದರೂ ಹಣ ಕ್ರೆಡಿಟ್ ಆಗುವುದಿಲ್ಲ.

ಇದನ್ನೂ ಓದಿ: ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್

ಹೆಚ್ಚಿನ ಮಾಹಿತಿಗೆ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಿ: pmkisan.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us