AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ

PM Kisan Scheme, 23rd installment release date: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 9 ಕೋಟಿಗೂ ಅಧಿಕ ರೈತರು 23ನೇ ಕಂತಿನ ಹಣದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 23ನೆಯದು ಜೂನ್​ನಲ್ಲಿ ಆಗುವ ಸಂಭವ ಇದೆ ಎನ್ನಲಾಗುತ್ತಿದೆ. ಇಕೆವೈಸಿ ಅಪ್​ಡೇಟ್ ಮಾಡದ ಫಲಾನುಭವಿಗಳಿಗೆ 23ನೇ ಕಂತಿನ ಹಣ ಸಿಕ್ಕದೇ ಹೋಗಬಹುದು.

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ
ರೈತImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 29, 2026 | 4:21 PM

Share

ನವದೆಹಲಿ, ಮೇ 29: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Scheme) 23ನೇ ಕಂತಿನ ಹಣ ಜೂನ್ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. 22ನೇ ಕಂತಿನ ಹಣ ಮಾರ್ಚ್ 13ರಂದು ರಿಲೀಸ್ ಆಗಿತ್ತು. 9 ಕೋಟಿಗೂ ಅಧಿಕ ಫಲಾನುಭವಿ ಸಂಖ್ಯೆ ಇರುವ ಈ ಯೋಜನೆಯಲ್ಲಿ ಸರ್ಕಾರ ಪ್ರತೀ ಕಂತಿನಲ್ಲಿ 2,000 ರೂ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ರವಾನೆ ಮಾಡುತ್ತದೆ. ಈ ಸ್ಕೀಮ್​ನಲ್ಲಿ ರೈತರಿಗೆ (Farmers) ಸರ್ಕಾರ ಪ್ರತೀ ವರ್ಷ 3 ಕಂತುಗಳಲ್ಲಿ ಒಟ್ಟು 6,000 ರೂ ನೀಡುತ್ತದೆ. ವ್ಯವಸಾಯಕ್ಕೆ ಅನುಕೂಲವಾಗಲೆಂದು ರೈತರಿಗೆ ನೀಡಲಾಗುವ ಸಹಾಯಧನ ಇದು.

2018-19ರಲ್ಲಿ ಶುರುವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದಲೇ ಹಣ ಪಾವತಿಯಾಗುತ್ತದೆ. ಈ ಯೋಜನೆಗೆ ಫಲಾನುಭವಿಗಳಾಗಬಯಸುವವರು ಸ್ವಂತ ಕೃಷಿಭೂಮಿ ಹೊಂದಿದವರಾಗಿರಬೇಕು. ಅಷ್ಟು ಮಾತ್ರವಲ್ಲ, ಎಂಜಿನಿಯರ್, ವೈದ್ಯ ಇತ್ಯಾದಿ ವೃತ್ತಿಪರರು, ಶಾಸಕರು, ಸಂಸದರು, ಸರ್ಕಾರಿ ನೌಕರರು, ಪಿಂಚಣಿದಾರರು ಕೃಷಿ ಭೂಮಿ ಹೊಂದಿದರೂ ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಪಿಎಂ ಕಿಸಾನ್ ಸ್ಕೀಮ್​ನ ಫಲಾನುಭವಿಗಳಾಗಲು ಬರುವುದಿಲ್ಲ. 2019ರ ನಂತರ ಕೃಷಿ ಭೂಮಿ ಮಾಲಕತ್ವ ಪಡೆದವರಿಗೂ ಹಣ ಸಿಗುವುದಿಲ್ಲ. ಹಾಗೆಯೇ, ತಂದೆ ಅಥವಾ ತಾಯಿ ಜೀವಂತ ಇರುವಾಗಲೇ ಅವರಿಂದ ವರ್ಗಾವಣೆಯಾದ ಕೃಷಿಭೂಮಿಯನ್ನು ಹೊಂದಿದವರಿಗೂ ಯೋಜನೆ ಹಣ ಸಿಗೋದಿಲ್ಲ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದೀರಾ? ಫಲಾನುಭವಿಗಳ ಪಟ್ಟಿ ಗಮನಿಸಿ

ನೀವು ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇರುತ್ತದೆ. ಅದನ್ನು ನೋಡಲು ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಬೇಕು. ಅದರ ವಿಳಾಸ:

ಇಲ್ಲಿ ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸಿಗುತ್ತದೆ. ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಒತ್ತಬೇಕು. ನಂತರ ರಾಜ್ಯ, ಜಿಲ್ಲೆ, ತಾಲೂಕು, ನಿಮ್ಮ ಊರನ್ನು ಆಯ್ದುಕೊಳ್ಳಬೇಕು. ಆಗ ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಬಹುದು.

ಇದನ್ನೂ ಓದಿ: ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ಯೋಜನೆಗೆ ನೊಂದಾಯಿಸಿದ್ದರೂ ಈ ಕಾರ್ಯ ಮಾಡದಿದ್ದರೆ ಬರೋದಿಲ್ಲ ದುಡ್ಡು

ನೀವು ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿ, ಈ ಹಿಂದೆ ಹಣವನ್ನು ಸ್ವೀಕರಿಸಿದ್ದರೂ 23ನೇ ಕಂತಿನ ಹಣ ಸಿಗುತ್ತದೆಂದು ಖಾತ್ರಿ ಇಲ್ಲ. ಇಕೆವೈಸಿ ವೆರಿಫಿಕೇಶನ್ ಮಾಡಿಸದಿದ್ದರೆ ಹಣ ಬರೋದಿಲ್ಲ. ಭೂದಾಖಲೆ ಪರಿಶೀಲನೆ ಆಗದಿದ್ದರೆ ಅಥವಾ ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಆಗದೇ ಇದ್ದರೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!