AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್ ಯೋಜನೆ; ಒಂದೇ ಕುಟುಂಬದ ಇಬ್ಬರು ವರ್ಷಕ್ಕೆ 6,000 ರೂ ಪಡೆಯಬಹುದಾ?

Can 2 Persons From 1 Family Get Benefit?: ಪಿಎಂ ಕಿಸಾನ್ ಯೋಜನೆಯ ನಿಯಮದ ಪ್ರಕಾರ ಜಮೀನು ಮಾಲಿಕತ್ವ ಹೊಂದಿದ ವ್ಯಕ್ತಿಗಳಿಗೆ ಮಾತ್ರ ಯೋಜನೆ ಅನ್ವಯ ಆಗುತ್ತದೆ. ಒಂದು ಕುಟುಂಬದಲ್ಲಿ ಯಾರ ಹೆಸರಲ್ಲಿ ಜಮೀನು ಇದೆಯೋ ಅವರು ಮಾತ್ರ 2,000 ರೂ ಕಂತು ಹಣ ಪಡೆಯಬಹುದು.

PM Kisan: ಪಿಎಂ ಕಿಸಾನ್ ಯೋಜನೆ; ಒಂದೇ ಕುಟುಂಬದ ಇಬ್ಬರು ವರ್ಷಕ್ಕೆ 6,000 ರೂ ಪಡೆಯಬಹುದಾ?
ಪಿಎಂ ಕಿಸಾನ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2023 | 4:34 PM

Share

ಮುಖ್ಯಾಂಶಗಳು

  • ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಮೇ ಕೊನೆಯ ವಾರದಲ್ಲಿ ಅಗುತ್ತದೆ.
  • ಜಮೀನು ಮಾಲೀಕತ್ವ ಹೊಂದಿದ ವ್ಯಕ್ತಿಗಳಿಗೆ ಮಾತ್ರ ಪಿಎಂ ಕಿಸಾನ್ ಯೋಜನೆ ಹಣ ಸಿಗುತ್ತದೆ
  • ಪಿಎಂ ಕಿಸಾನ್ ಯೋಜನೆಯ ಪೋರ್ಟಲ್​ನಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಪರಿಶೀಲಿಸಬಹುದು.

ನವದೆಹಲಿ: ಕೇಂದ್ರ ಸರ್ಕಾರ ಕಳೆದ ಮೂರ್ನಾಲ್ಕು ವರ್ಷಗಳಿಂದ ಜಾರಿ ಮಾಡಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಕೋಟ್ಯಂತರ ರೈತ ಕುಟುಂಬಗಳಿಗೆ ಉಪಯುಕ್ತ ಎನಿಸಿದೆ. ಕೇಂದ್ರ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು 3 ಕಂತುಗಳಲ್ಲಿ ನೀಡುತ್ತದೆ. 2019ರಿಂದ ಈಚೆಗೆ ಕೇಂದ್ರ ಸರ್ಕಾರ 2,000 ರೂಗಳ 13 ಕಂತುಗಳನ್ನು ರೈತರಿಗೆ ನೀಡಿದೆ. ಈಗ 14ನೇ ಕಂತಿನ ಹಣಕ್ಕೆ ಜನರು ಕಾಯುತ್ತಿದ್ದಾರೆ. ಈ ತಿಂಗಳು ಮುಗಿಯುವುದರೊಳಗೆ 2,000 ರೂಗಳ 14ನೇ ಕಂತು ಫಲಾನುಭವಿ ರೈತರ ಖಾತೆಗಳಿಗೆ ಬಂದು ಬೀಳುವ ನಿರೀಕ್ಷೆ ಇದೆ. ಇನ್ನು, ಕರ್ನಾಟಕ ಸರ್ಕಾರ ವರ್ಷಕ್ಕೆ ಕೇಂದ್ರ ನೀಡುವ 3 ಕಂತುಗಳ ಜೊತೆ ತಾನೂ ಇನ್ನೆರಡು ಕಂತುಗಳನ್ನು ಸೇರಿಸಿಕೊಡುತ್ತಿತ್ತು. ಈಗ ಸರ್ಕಾರ ಬದಲಾಗಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರ ಈ ಕ್ರಮ ಮುಂದುವರಿಸುತ್ತದಾ ಇಲ್ಲವಾ ಎಂಬುದು ಗೊತ್ತಿಲ್ಲ.

ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಬಹುದಾ?

ಪಿಎಂ ಕಿಸಾನ್ ಯೋಜನೆಯ ನಿಯಮದ ಪ್ರಕಾರ ಜಮೀನು ಮಾಲಿಕತ್ವ ಹೊಂದಿದ ವ್ಯಕ್ತಿಗಳಿಗೆ ಮಾತ್ರ ಯೋಜನೆ ಅನ್ವಯ ಆಗುತ್ತದೆ. ಒಂದು ಕುಟುಂಬದಲ್ಲಿ ಯಾರ ಹೆಸರಲ್ಲಿ ಜಮೀನು ಇದೆಯೋ ಅವರು ಮಾತ್ರ 2,000 ರೂ ಕಂತು ಹಣ ಪಡೆಯಬಹುದು. ಗಂಡ ಹೆಂಡತಿ ಅಥವಾ ಬೇರೆಯವರ ಜೊತೆ ಜಂಟಿ ಮಾಲಿಕತ್ವ ಇದ್ದು ಇಬ್ಬರೂ ಕೂಡ ಯೋಜನೆಗೆ ನೊಂದಾಯಿಸಿಕೊಂಡಿದ್ದರೆ ಹೇಗೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ರೀತಿ ಇದ್ದರೆ ಒಬ್ಬರಿಗೆ ಮಾತ್ರವೇ ಯೋಜನೆ ಲಾಭ ಸಿಗುವುದು. ಹಾಗೊಂದು ವೇಳೆ ಇಬ್ಬರೂ ಇದರ ಲಾಭ ಪಡೆಯುತ್ತಿದ್ದರೆ ಒಬ್ಬರು ಅದನ್ನು ವಾಪಸ್ ಮಾಡಬೇಕಾಗಬಹುದು.

ಇನ್ನೂ ಕೆಲ ವರದಿ ಪ್ರಕಾರ, ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ವ್ಯಕ್ತಿಗಳು ಯೋಜನೆಗೆ ನೊಂದಾಯಿಸಿಕೊಳ್ಳುವಂತಿಲ್ಲ. ಒಂದು ಕುಟುಂಬ ಎಂದರೆ ಇಲ್ಲಿ ಗಂಡ, ಹೆಂಡತಿ ಮತ್ತು ಅವರ ಮಕ್ಕಳು.

ಇದನ್ನೂ ಓದಿELSS: ತಿಂಗಳಿಗೆ 5,000 ರೂ ಕಟ್ಟಿ, 10 ವರ್ಷದಲ್ಲಿ 22 ಲಕ್ಷದವರೆಗೆ ರಿಟರ್ನ್; ತೆರಿಗೆ ಮತ್ತು ಲಾಭ ಎರಡೂ ಕೊಡುವ ಇಎಲ್​ಎಸ್​ಎಸ್ ಫಂಡ್​ಗಳು

ಹಾಗೆಯೇ, ಒಂದು ಕುಟುಂಬದಲ್ಲಿ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ಜಮೀನು ಮಾಲಿಕತ್ವದ ಹೊಂದಿದ್ದರೆ ಅವರು ಯೋಜನೆಯ ಲಾಭ ಪಡೆಯಬಹುದಾ ಎಂಬ ಪ್ರಶ್ನೆಗೆ ಉತ್ತರ ನೀಡಲಾಗಿಲ್ಲ. ಆದರೆ, ಯೋಜನೆ ನಿಯಮ ಗಮನಿಸಿದಾಗ ಅದು ಸಾಧ್ಯ.

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ನಿಮಗೆ ಸಿಗುತ್ತಾ? ಫಲಾನುಭವಿಗಳ ಪಟ್ಟಿ ಒಮ್ಮೆ ನೋಡಿ

ಪಿಎಂ ಕಿಸಾನ್ ಯೋಜನೆಯಲ್ಲಿ ಕೆಲವೊಮ್ಮೆ ನಮ್ಮ ಹೆಸರು ಕೈಬಿಟ್ಟು ಹೋಗಿರಬಹುದು ಎಂಬ ಭಯ ಯಾರಿಗಾದರೂ ಕಾಡಬಹುದು. ನಿಮಗೆ ಹಾಗನಿಸಿದಲ್ಲಿ ಆನ್​ಲೈನ್​ನಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂದು ಖಚಿತಪಡಿಸಿಕೊಳ್ಳಬಹುದು.

ಇದನ್ನೂ ಓದಿTips: ನಿಮ್ಮ ವಯಸ್ಸಿನ್ನೂ 30 ದಾಟಿಲ್ಲವೇ? ಹಣ ಸಂಪಾದನೆ, ಹಣಭದ್ರತೆಗೆ ತಪ್ಪದೇ ಈ ಕ್ರಮ ಅನುಸರಿಸಿ

  • ಪಿಎಂ ಕಿಸಾನ್ ಯೋಜನೆಯ ಅಧಿಕೃತ ಪೋರ್ಟಲ್ pmkisan.gov.inಗೆ ಹೋಗಿ
  • ಅಲ್ಲಿ ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ಬೆನಿಫಿಶಿಯರಿ ಲಿಸ್ಟ್ ಇತ್ಯಾದಿಯನ್ನು ಕಾಣಬಹುದು.
  • ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆದುಕೊಳ್ಳುತ್ತದೆ.
  • ಅದರಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಊರನ್ನು ಆರಿಸಿಕೊಳ್ಳಿ.
  • ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣುತ್ತದೆ.

ಹಾಗೆಯೇ, ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿದರೆ, ಅಲ್ಲಿ ನೀವು ಹೊಸದಾಗಿ ಯೋಜನೆಗೆ ನೊಂದಾಯಿಸಿಕೊಳ್ಳಬಹುದು. ಈಗ ಮಾಡಿದರೆ ಈ ವಾರ ಬಿಡುಗಡೆ ಆಗುವ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಮುಂದಿನ ಕಂತಿನ ಹಣ ಪಡೆಯಲು ಸಾಧ್ಯವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್