AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಅಪ್ಪನಿಂದ ಜಮೀನು ವರ್ಗಾವಣೆಯಾದರೆ ಪಿಎಂ ಕಿಸಾನ್ ಹಣ ನಿಂತುಹೋಗುತ್ತಾ? ಇಲ್ಲಿದೆ ಡೀಟೇಲ್ಸ್

PM Kisan samman nidhi yojana FAQ: Khata transfer from living father to son won't fetch benefit: ಪಿಎಂ ಕಿಸಾನ್ ಯೋಜನೆ ಅಡಿ ಕೇಂದ್ರ ಸರ್ಕಾರ ಪ್ರತೀ ವರ್ಷ ಮೂರು ಕಂತುಗಳಲ್ಲಿ ರೈತರಿಗೆ ಹಣ ಬಿಡುಗಡೆ ಮಾಡುತ್ತದೆ. ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆದರೆ, 2019ರ ಫೆಬ್ರುವರಿ 1ರ ಬಳಿಕ ಜಮೀನಿನ ಖಾತೆ ವರ್ಗಾವಣೆ ಮಾಡಿಕೊಂಡವರಿಗೆ ಹಣ ಸಿಕ್ಕದೇ ಹೋಗಬಹುದು. ನೋಡಿ ಈ ವರದಿ...

PM Kisan: ಅಪ್ಪನಿಂದ ಜಮೀನು ವರ್ಗಾವಣೆಯಾದರೆ ಪಿಎಂ ಕಿಸಾನ್ ಹಣ ನಿಂತುಹೋಗುತ್ತಾ? ಇಲ್ಲಿದೆ ಡೀಟೇಲ್ಸ್
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2025 | 2:13 PM

Share

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು (PM Kisan Samman Nidhi Yojana) ರೈತರಿಗೆ (Farmer) ಧನ ಸಹಾಯ ನೀಡುವುದರ ಜೊತೆಗೆ, ವಿಶ್ವದಲ್ಲೇ ಅತಿದೊಡ್ಡ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ ಸ್ಕೀಮ್ ಎಂದೆನಿಸಿದೆ. ವರ್ಷದಲ್ಲಿ ಸುಮಾರು 60,000 ಕೋಟಿ ರೂಗಿಂತ ಹೆಚ್ಚಿನ ಧನಸಹಾಯವನ್ನು ರೈತರಿಗೆ ನೀಡಲಾಗುತ್ತದೆ. 10 ಕೋಟಿಗೂ ಅಧಿಕ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಕೃಷಿ ಭೂಮಿ ಹೊಂದಿರುವ ರೈತರಿಗೆ ವರ್ಷದಲ್ಲಿ 6,000 ರೂ ಹಣವನ್ನು ಈ ಯೋಜನೆ ಅಡಿ ನೀಡಲಾಗುತ್ತದೆ. ಇ-ಕೆವೈಸಿ ಮಾಡಿಸದೇ ಇರುವುದು ಇತ್ಯಾದಿ ಕಾರಣಕ್ಕೆ ಕೆಲ ಲಕ್ಷಗಳಷ್ಟು ಫಲಾನುಭವಿಗಳಿಗೆ ಹಣ ಬರುತ್ತಿಲ್ಲ. ಈ ಮಧ್ಯೆ, ತಂದೆ ಅಥವಾ ತಾಯಿಯಿಂದ ಕೃಷಿ ಭೂಮಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಅನೇಕರು ತಮಗೆ ಪಿಎಂ ಕಿಸಾನ್ ಹಣ ಬರುತ್ತಿಲ್ಲ ಎನ್ನುತ್ತಿದ್ದಾರೆ. ಏನು ಕಾರಣ?

ಖಾತೆ ವರ್ಗಾವಣೆ ಆದರೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ವಾ?

ಪಿಎಂ ಕಿಸಾನ್ ಯೋಜನೆ ಶುರುವಾಗಿದ್ದು 2019ರಲ್ಲಿ. ಆಗ 2019ರ ಫೆಬ್ರುವರಿ 1 ಅನ್ನು ಕಟ್ ಆಫ್ ದಿನ ಎಂದು ನಿಗದಿ ಮಾಡಲಾಗಿದೆ. ಆ ಡೇಟ್ ಇನ್ನೂ ಹಾಗೇ ಇದೆ. ಈ ದಿನಕ್ಕೆ ಮುಂಚೆ ಕೃಷಿ ಭೂಮಿಯ ಖಾತೆ ಯಾರೆಲ್ಲರ ಹೆಸರಲ್ಲಿದೆಯೋ ಅವರೆಲ್ಲರೂ ಫಲಾನುಭವಿಗಳಾಗಲು ಅರ್ಹರು. 2019ರ ಫೆಬ್ರುವರಿ 1ರ ಬಳಿಕ ಅಪ್ಪ ಅಥವಾ ಅಮ್ಮನಿಂದ ಖಾತೆ ವರ್ಗಾವಣೆ ಮಾಡಿಸಿಕೊಂಡ ಮಕ್ಕಳು ಪಿಎಂ ಕಿಸಾನ್ ಯೋಜನೆಯ ಹಣ ಸ್ವೀಕರಿಸಲು ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಐಟಿ ರಿಟರ್ನ್ಸ್ ಸಲ್ಲಿಸುವ ಅವಶ್ಯಕತೆ ಇಲ್ಲದವರು ಯಾರ‍್ಯಾರು? ಇಲ್ಲಿದೆ ಪಟ್ಟಿ

ಇದನ್ನೂ ಓದಿ
Image
ಪಿಎಂ ಧನ್ ಧಾನ್ಯ ಕೃಷಿ ಯೋಜನೆಯಿಂದ ಏನು ಲಾಭ?
Image
ಕೃಷಿ ಉತ್ಪನ್ನಗಳಿಗೆ ಟ್ಯಾರಿಫ್ ಇಳಿಸುವಂತೆ ಭಾರತಕ್ಕೆ ಅಮೆರಿಕ ಒತ್ತಡ?
Image
ಭಾರತದ ಹಾಲಿನ ಉದ್ಯಮಕ್ಕೆ ಅಮೆರಿಕದಿಂದ ಎಷ್ಟು ಅಪಾಯ?
Image
ಸೌದಿಯಿಂದ ಭಾರತಕ್ಕೆ ರಸಗೊಬ್ಬರ ಪೂರೈಕೆ

ಅಪ್ಪ ಅಥವಾ ಅಮ್ಮ ನಿಧನರಾದ ಬಳಿಕ ಖಾತೆ ವರ್ಗಾವಣೆ ಮಕ್ಕಳಿಗೆ ಆಗಿದ್ದರೆ, ಆಗ ಮಕ್ಕಳು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಅರ್ಹರಾಗಿರುತ್ತಾರೆ.

ಭೂಮಿ ಖರೀದಿಸಿದ್ದರೆ ಪಿಎಂ ಕಿಸಾನ್ ಹಣ ಸಿಗುತ್ತಾ?

2019ರ ಫೆಬ್ರುವರಿ 1ರ ಬಳಿಕ ನೀವು ಕೃಷಿ ಭೂಮಿಯನ್ನು ಖರೀದಿಸಿದ್ದರೆ ಪಿಎಂ ಕಿಸಾನ್ ಹಣ ಸ್ವೀಕರಿಸಲು ಅರ್ಹರಾಗಿರುತ್ತೀರಾ? ಹೌದು, ನೀವು ಫಲಾನುಭವಿಯಾಗಬಹುದು. ಆದರೆ, ನೀವು ಖರೀದಿಸಿದ್ದು ಕೃಷಿಭೂಮಿಯಾಗಿರಬೇಕು, ಅದರಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿರಬೇಕು.

ಇದನ್ನೂ ಓದಿ: Post Office plans: ಪೋಸ್ಟ್ ಆಫೀಸ್​ನ SCSS ಸ್ಕೀಮ್; ತಿಂಗಳಿಗೆ 20,500 ರೂವರೆಗೆ ಆದಾಯ ಗಳಿಸಿ

ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ನೀವು ಕೃಷಿಭೂಮಿಯನ್ನು ಖರೀದಿಸಿದಾಕ್ಷಣ ಪಿಎಂ ಕಿಸಾನ್ ಯೋಜನೆಗೆ ಸೇರ್ಪಡೆಯಾಗುವುದಿಲ್ಲ. ಯೋಜನೆಗೆ ಅರ್ಜಿ ಸಲ್ಲಿಸಬೇಕು. ನಿಮ್ಮ ಕೃಷಿ ಭೂಮಿಯ ಪಹಣಿ, ಆಧಾರ್ ದಾಖಲೆಯೊಂದಿಗೆ ಯೋಜನೆಗೆ ನೊಂದಾಯಿಸಿಕೊಳ್ಳಬೇಕು. ನಿಮ್ಮ ಗ್ರಾಮದ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ನೊಂದಾಯಿಸಬಹುದು. ಅಥವಾ ಪಿಎಂ ಕಿಸಾನ್ ವೆಬ್​ಸೈಟ್​​ನಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಸೆಕ್ಷನ್​ಗೆ ಹೋಗಿಯೂ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!