Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan 15th Installment: ಪಿಎಂ ಕಿಸಾನ್ ಸ್ಕೀಮ್; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

PM Kisan Scheme: ಪ್ರಧಾನಿ ನರೇಂದ್ರ ಮೋದಿ ಅವರು ಝಾರ್ಖಂಡ್​ನ ಖೂಂಟಿಯಲ್ಲಿ ನಿನ್ನೆ ಹೊಸ ಕಂತಿನ ಹಣ ಬಿಡುಗಡೆಯಾಗಿರುವುದನ್ನು ಪ್ರಕಟಿಸಿದರು. ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ. ಪಿಎಂ ಕಿಸಾನ್ ಸ್ಕೀಮ್​ನಲ್ಲಿ 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಕಾರಣಗಳಿರಬಹುದು ಎಂಬ ಡೀಟೇಲ್ಸ್ ಇಲ್ಲಿದೆ...

PM Kisan 15th Installment: ಪಿಎಂ ಕಿಸಾನ್ ಸ್ಕೀಮ್; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
ರೈತ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2023 | 11:00 AM

ನವದೆಹಲಿ, ನವೆಂಬರ್ 16: ಕೃಷಿಕರ ಬೇಸಾಯಕ್ಕೆ ಧನಸಹಾಯವಾಗಿ ಸರ್ಕಾರ ಆರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) 15ನೇ ಕಂತಿನ ಹಣ ನಿನ್ನೆ ನವೆಂಬರ್ 15ರಂದು ಬಿಡುಗಡೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಝಾರ್ಖಂಡ್​ನ ಖೂಂಟಿಯಲ್ಲಿ (Khunti, Jharkhand) ನಿನ್ನೆ ಹೊಸ ಕಂತಿನ ಹಣ ಬಿಡುಗಡೆಯಾಗಿರುವುದನ್ನು ಪ್ರಕಟಿಸಿದರು. ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ.

ಪಿಎಂ ಕಿಸಾನ್ ಸ್ಕೀಮ್ ರೈತರಿಗಾಗಿ ವಿಶ್ವದಲ್ಲೇ ಇರುವ ಅತಿದೊಡ್ಡ ಡಿಬಿಟಿ ಸ್ಕೀಮ್ (DBT- direct beneficiary transfer) ಆಗಿದೆ. 2019ರ ಫೆಬ್ರುವರಿಯಲ್ಲಿ ಆರಂಭವಾದ ಈ ಸ್ಕೀಮ್​ನಲ್ಲಿ ವರ್ಷಕ್ಕೆ ತಲಾ 2,000 ರೂಗಳ 3 ಕಂತುಗಳಂತೆ 6,000 ರೂ ಹಣವನ್ನು ಅರ್ಹ ರೈತರ ಖಾತೆಗಳಿಗೆ ಸರ್ಕಾರ ನೇರವಾಗಿ ವರ್ಗಾವಣೆ ಮಾಡುತ್ತದೆ. ಈ 15ನೇ ಕಂತಿನ ಹಣ ಇನ್ನೂ ಬಂದಿಲ್ಲ ಎಂದು ಬಹಳಷ್ಟು ಮಂದಿ ಹೇಳುತ್ತಿರುವುದುಂಟು.

ಇದನ್ನೂ ಓದಿ: ಪಿಎಂ ಕಿಸಾನ್: ಬಂತು 15ನೇ ಕಂತಿನ ಹಣ; ಪ್ರಧಾನಿ ನರೇಂದ್ರ ಮೋದಿಯಿಂದ 18,000 ಕೋಟಿ ರೂ ಬಿಡುಗಡೆ

ಪಿಎಂ ಕಿಸಾನ್ ಸ್ಕೀಮ್​ನಲ್ಲಿ 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು…

  • ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು.
  • ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು.
  • ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು

ನೀವು ಪಿಎಂ ಕಿಸಾನ್ ಸ್ಕೀಮ್​ನ ಅಧಿಕೃತ ಪೋರ್ಟಲ್​ಗೆ (ಲಿಂಕ್ ಇಲ್ಲಿದೆ: https://pmkisan.gov.in/) ಹೋದರೆ ಮುಖ್ಯಪುಟದಲ್ಲೇ ಆರಂಭದಲ್ಲಿ ಒಂದು ಪಾಪ್ ಅಪ್ ಬರುತ್ತದೆ. ಅದರಲ್ಲಿ ಇಕೆವೈಸಿ, ನಿಮ್ಮ ಸ್ಟೇಟಸ್ ತಿಳಿಯಲು ಹಾಗೂ ಪಿಎಂ ಕಿಸಾನ್ ಮೊಬೈಲ್ ಆ್ಯಪ್ ಡೌನ್​ಲೋಡ್ ಮಾಡಲು ಕ್ಯುಆರ್ ಕೋಡ್​ಗಳು ಕಾಣುತ್ತವೆ. ನಿಮಗೆ ಬೇಕಾದರೆ ಅದನ್ನು ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ಎಸ್​ಸಿಎಸ್​ಎಸ್​ನಿಂದ ನ್ಯಾಷನಲ್ ಸೇವಿಂಗ್ಸ್​ವರೆಗೂ; ಪೋಸ್ಟ್ ಆಫೀಸ್​ನಲ್ಲಿ ಅತ್ಯುತ್ತಮ ಉಳಿತಾಯ ಯೋಜನೆಗಳಿವು

ಹಾಗೆಯೇ, ಪಾಪ್ ಅಪ್ ಮುಚ್ಚಿ, ಪಿಎಂ ಕಿಸಾನ್ ವೆಬ್​ಸೈಟ್​ನ ಮುಖ್ಯಪುಟದಲ್ಲಿ ಸ್ವಲ್ಪ ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್​ನಲ್ಲಿ ವಿವಿಧ ಸೇವೆಗಳ ಟ್ಯಾಬ್​​ಗಳನ್ನು ನೋಡಬಹುದು. ಅದರಲ್ಲಿ ಇಕೆವೈಸಿ ಮಾಡುವುದು, ಫಲಾನುಭವಿಗಳ ಪಟ್ಟಿ ವೀಕ್ಷಿಸುವುದು, ನೊಂದಣಿ ಸ್ಟೇಟಸ್ ನೋಡುವುದು ಹೀಗೆ ಹಲವು ಆಯ್ಕೆಗಳಿವೆ.

ನಿಮಗೆ ಯಾವುದಾದರೂ ಅನುಮಾನ ಇದ್ದಲ್ಲಿ ಹೆಲ್ಪ್​ಡೆಸ್ಕ್ ಟ್ಯಾಬ್ ಕ್ಲಿಕ್ ಮಾಡಬಹುದು. ಅದರಲ್ಲಿ ನಿಮ್ಮ ನೊಂದಣಿ ನಂಬರ್ ಮೂಲಕ ನಿಮ್ಮ ದೂರು ಅಥವಾ ಅನುಮಾನವನ್ನು ವ್ಯಕ್ತಪಡಿಸಬಹುದು. ಅದಕ್ಕೆ ಸೂಕ್ತ ಸಮಜಾಯಿಷಿ ಅಥವಾ ಉತ್ತರ ಅಥವಾ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ