AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Status: ಪಿಎಂ ಕಿಸಾನ್: ಹಣ ಬಂದಿಲ್ಲವಾ? ಫಲಾನುಭವಿ ಸ್ಟೇಟಸ್ ಏನಿದೆ ತಿಳಿಯಿರಿ

How To Check Beneficiary Status in PM Kisan Scheme: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಯೋಜನೆಯಲ್ಲಿ 8.5 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ. ನೀವು ಯೋಜನೆಗೆ ನೊಂದಾಯಿಸಿದ್ದರೆ ಬೆನಿಫಿಷಿಯರಿ ಸ್ಟೇಟಸ್ ಏನಿದೆ ತಿಳಿಯುವ ಕ್ರಮ ಇಲ್ಲಿದೆ...

PM Kisan Status: ಪಿಎಂ ಕಿಸಾನ್: ಹಣ ಬಂದಿಲ್ಲವಾ? ಫಲಾನುಭವಿ ಸ್ಟೇಟಸ್ ಏನಿದೆ ತಿಳಿಯಿರಿ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 27, 2023 | 12:49 PM

Share

ಬೆಂಗಳೂರು, ಜುಲೈ 27: ಕೇಂದ್ರ ಸರ್ಕಾರ 2019ರಲ್ಲಿ ಆರಂಭಿಸಿರುವ ಪಿಎಂ ಕಿಸಾನ್ ಯೋಜನೆಯ (PM Kisan Scheme) 14ನೇ ಕಂತಿನ ಹಣ ಇಂದು ಜುಲೈ 27ರಂದು ಬಿಡುಗಡೆ ಆಗಿದೆ. ರಾಜಸ್ಥಾನದ ಸೀಕರ್​ನಲ್ಲಿ ಪಿಎಂ ನರೇಂದ್ರ ಮೋದಿ 14ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಇಂದು 8.5 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಹಣ ನೇರವಾಗಿ ವರ್ಗಾವಣೆ ಆಗಲಿದೆ. ಯೋಜನೆಗೆ ನೊಂದಾಯಿಸಿದ್ದರೂ ಇಕೆವೈಸಿ ಮಾಡಿಸದಿದ್ದರೆ ಹಣ ಸಿಗುವುದಿಲ್ಲ. ಇದೇ ಕಾರಣಕ್ಕೆ ಬಹಳ ಮಂದಿಗೆ 12 ಮತ್ತು 13ನೇ ಕಂತಿನ ಹಣ ಕೈತಪ್ಪಿತ್ತು. ಈಗಲೂ ಅನೇಕರಿಗೆ 14ನೇ ಕಂತಿನ ಹಣ ಲಭ್ಯ ಇಲ್ಲ.

ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ ನೊಂದಾಯಿಸಿದಿದ್ದವರಿಗೂ ಹೊಸದಾಗಿ ಪ್ರವೇಶ ಮಾಡಲು ಅವಕಾಶ ಇದೆ. ಇತ್ತೀಚೆಗೆ ಹೊಸದಾಗಿ ನೊಂದಾಯಿಸಿಕೊಂಡವರಿಗೆ ಹಣ ಬಂದಿಲ್ಲದೇ ಇದ್ದರೆ ಅಂಥವರು ತಮ್ಮ ಬೆನಿಫಿಷಿಯರಿ ಸ್ಟೇಟಸ್ ಅನ್ನು ಪರಿಶೀಲಿಸಬಹುದು.

ಇದನ್ನೂ ಓದಿ: PM Kisan: ಪಿಎಂ ಕಿಸಾನ್ ಯೋಜನೆ; ಒಂದೇ ಕುಟುಂಬದ ಇಬ್ಬರು ವರ್ಷಕ್ಕೆ 6,000 ರೂ ಪಡೆಯಬಹುದಾ?

ಪಿಎಂ ಕಿಸಾನ್ ಯೋಜನೆಯ ಬೆನಿಫಿಷಿಯರಿ ಸ್ಟೇಟಸ್ ಪರಿಶೀಲಿಸಿ

ಒಂದು ವೇಳೆ ಅರ್ಹ ಫಲಾನುಭವಿಗಳು ಸ್ವಯಂ ಆಗಿ ಯೋಜನೆಗೆ ನೊಂದಾಯಿಸಿದ್ದರೆ ಅವರು ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ‘ಸ್ಟೇಟಸ್ ಆಫ್ ಸೆಲ್ಫ್ ರಿಜಿಸ್ಟರ್ಡ್ ಫಾರ್ಮರ್’ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಆಧಾರ್ ನಂಬರ್ ಹಾಕಿ ಸರ್ಚ್ ಮಾಡಿದರೆ ಸ್ಟೇಟಸ್ ವಿವರ ಲಭ್ಯ ಆಗುತ್ತದೆ.

ಹಾಗೆಯೇ, ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ಅದೇ ಫಾರ್ಮರ್ಸ್ ಕಾರ್ನರ್ ಸೆಕ್ಷನ್​ನಲ್ಲಿ ‘ನೋ ಯುವರ್ ಸ್ಟೇಟಸ್’ ಮೇಲೆ ಕ್ಲಿಕ್ ಮಾಡಿ, ಆ ಮೂಲಕ ನಿಮ್ಮ ಹಣದ ಸ್ಥಿತಿಗತಿ ತಿಳಿಯಬಹುದು. ಇಲ್ಲಿ ಯೋಜನೆಯ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಹಾಕಿ ಸರ್ಚ್ ಮಾಡಬಹುದು. ರಿಜಿಸ್ಟ್ರೇಶನ್ ನಂಬರ್ ಮರೆತುಹೋಗಿದ್ದರೆ ‘ನೋ ಯುವರ್ ರಿಜಿಸ್ಟ್ರೇಶನ್ ನಂಬರ್’ ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಿ ಆಧಾರ್ ನಂಬರ್ ಹಾಕಿ ಶೋಧಿಸಿದರೆ ರಿಜಿಸ್ಟ್ರೇಶನ್ ನಂಬರ್ ವಿವರ ಸಿಗುತ್ತದೆ.

ಇದನ್ನೂ ಓದಿ: PM Kisan 14th Instalment Release: ಪಿಎಂ ಕಿಸಾನ್: 14ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ಫಲಾನುಭವಿಗಳ ಪಟ್ಟಿ

ಪಿಎಂ ಕಿಸಾನ್ ವೆಬ್​ಸೈಟ್​ನಲ್ಲಿ ಫಲಾನುಭವಿಗಳ ಪಟ್ಟಿಯನ್ನೂ ನೋಡಬಹುದು. ಬೆನಿಫಿಷಿಯರಿ ಲಿಸ್ಟ್ ಅನ್ನು ಕ್ಲಿಕ್ ಮಾಡಿ, ರಾಜ್ಯ, ಜಿಲ್ಲೆ, ತಾಲೂಕು, ಊರು ಇತ್ಯಾದಿ ಆಯ್ದುಕೊಂಡರೆ ಆ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಪರಿಶೀಲಿಸಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?