AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್: ಬಂತು 15ನೇ ಕಂತಿನ ಹಣ; ಪ್ರಧಾನಿ ನರೇಂದ್ರ ಮೋದಿಯಿಂದ 18,000 ಕೋಟಿ ರೂ ಬಿಡುಗಡೆ

PM Kisan Scheme 15th Installment Release: ಪಿಎಂ ಕಿಸಾನ್ ಸ್ಕೀಮ್​ನ 15ನೇ ಕಂತಿನ ಹಣ ಬಿಡುಗಡೆ ಅಗಿದೆ. ಆಗಸ್ಟ್​ನಿಂದ ನವೆಂಬರ್​ವರೆಗಿನ ಅವಧಿಗೆ ಒಟ್ಟು 18,000 ಕೋಟಿ ರೂ ಹಣವನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್​ನ ಖೂಂಟಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿಗಳಿಂದ 15ನೇ ಕಂತಿನ ಹಣ ರಿಲೀಸ್ ಆಗಿದೆ. ಒಟ್ಟು 8.5 ಕೋಟಿ ರೈತರ ಖಾತೆಗಳಿಗೆ ತಲಾ 2,000 ರೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ.

ಪಿಎಂ ಕಿಸಾನ್: ಬಂತು 15ನೇ ಕಂತಿನ ಹಣ; ಪ್ರಧಾನಿ ನರೇಂದ್ರ ಮೋದಿಯಿಂದ 18,000 ಕೋಟಿ ರೂ ಬಿಡುಗಡೆ
ಪಿಎಂ ಕಿಸಾನ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 15, 2023 | 2:34 PM

Share

ರಾಂಚಿ, ನವೆಂಬರ್ 15: ಪಿಎಂ ಕಿಸಾನ್ ಸ್ಕೀಮ್​ನ 15ನೇ ಕಂತಿನ ಹಣ (PM Kisan Scheme) ಬಿಡುಗಡೆ ಅಗಿದೆ. ಆಗಸ್ಟ್​ನಿಂದ ನವೆಂಬರ್​ವರೆಗಿನ ಅವಧಿಗೆ ಒಟ್ಟು 18,000 ಕೋಟಿ ರೂ ಹಣವನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಜಾರ್ಖಂಡ್​ನ ಖೂಂಟಿಯಲ್ಲಿ (Khunti, Jharkhand) ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿಗಳಿಂದ 15ನೇ ಕಂತಿನ ಹಣ ರಿಲೀಸ್ ಆಗಿದೆ. ಒಟ್ಟು 8.5 ಕೋಟಿ ರೈತರ ಖಾತೆಗಳಿಗೆ ತಲಾ 2,000 ರೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ.

2019ರ ಫೆಬ್ರವರಿಯಲ್ಲಿ ಈ ಯೋಜನೆ ಆರಂಭಗೊಂಡಿತು. ವರ್ಷಕ್ಕೆ 6 ಸಾವಿರ ರೂಗಳನ್ನು ತಲಾ 2,000 ರೂಗಳ 3 ಕಂತುಗಳಲ್ಲಿ ಸರ್ಕಾರವು ಕೃಷಿಕ ಕುಟುಂಬಗಳಿಗೆ ನೀಡುತ್ತಿದೆ. ಅದರಂತೆ ಈವರೆಗೆ 15 ಕಂತುಗಳನ್ನು ನೀಡಿದೆ. ಇಲ್ಲಿಯವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಹಣದ ಮೊತ್ತ 2.75 ಲಕ್ಷ ಕೋಟಿ ರೂ ಆಗಿದೆ.

ಒಂದು ಹಣಕಾಸು ವರ್ಷದಲ್ಲಿ ಏಪ್ರಿಲ್​ನಿಂದ ಜುಲೈವರೆಗೆ ಒಂದು ಕಂತು; ಆಗಸ್ಟ್​ನಿಂದ ನವೆಂಬರ್​ವರೆಗೂ ಇನ್ನೊಂದು ಕಂತು; ಹಾಗು ಡಿಸೆಂಬರ್​ನಿಂದ ಮಾರ್ಚ್​ವರೆಗೆ ಮಗದೊಂದು ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತದೆ. ಸ್ವಂತವಾಗಿ ಕೃಷಿ ಜಮೀನು ಹೊಂದಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರು.

ಇದನ್ನೂ ಓದಿ: LIC Scheme: ನಿವೃತ್ತಿ ಬಳಿಕ ವರ್ಷಕ್ಕೆ 1 ಲಕ್ಷ ರೂ ಪಿಂಚಣಿ ಬರಲು ಪಾಲಿಸಿ ಮೊತ್ತ ಎಷ್ಟು ಬೇಕು?

ಪಿಎಂ ಕಿಸಾನ್ ಯೋಜನೆ; ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ ಆಗಿದೆ. ನೀವು ಫಲಾನುಭವಿಗಳಾಗಿದ್ದೂ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲದೇ ಹೋಗಿದ್ದರೆ, ಈ ಬಾರಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಒಮ್ಮೆ ಪರೀಕ್ಷಿಸಿ. ಅದರ ಕ್ರಮ ಹೀಗಿದೆ…

  • ಪಿಎಂ ಕಿಸಾನ್ ಸ್ಕೀಮ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: pmkisan.gov.in
  • ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಅನ್ನು ನೋಡಬಹುದು.
  • ಅಲ್ಲಿ ವಿವಿಧ ಟ್ಯಾಬ್​​ಗಳಿದ್ದು, ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
  • ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ದುಕೊಂಡು, ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.

ಈಗ ಆ ಗ್ರಾಮದಲ್ಲಿ ಇರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು.

ಇದನ್ನೂ ಓದಿ: ಬಾಂಗ್ಲಾದೇಶದ ಬೆನ್ನೆಲುಬಾದ ಗಾರ್ಮೆಂಟ್ಸ್ ಫ್ಯಾಕ್ಟರಿಗಳ ಬಾಗಿಲು ಬಂದ್; ತಲೆನೋವು ತಂದ ಕಾರ್ಮಿಕರ ಪ್ರತಿಭಟನೆ; 11,000 ಮಂದಿ ಮೇಲೆ ಪೊಲೀಸ್ ಕೇಸ್

ನೀವು ಇತ್ತೀಚೆಗೆ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದರೆ, ಬೆನಿಫಿಶಿಯರಿ ಸ್ಟೇಟಸ್ ಅನ್ನು ಪರಿಶೀಲಿಸಬಹುದು.

  • ಫಾರ್ಮರ್ಸ್ ಕಾರ್ನರ್​ನಲ್ಲಿ ನೋ ಯುವರ್ ಸ್ಟೇಟಸ್ ಎಂಬ ಟ್ಯಾಬ್ ಕ್ಲಿಕ್ ಮಾಡಿ.
  • ಅಲ್ಲಿ ರಿಜಿಸ್ಟ್ರೇಶನ್ ನಂಬರ್ ದಾಖಲಿಸಿ ಸ್ಟೇಟಸ್ ಪರಿಶೀಲಿಸಬಹುದು.

ರಿಜಿಸ್ಟ್ರೇಶನ್ ಸಂಖ್ಯೆ ಗೊತ್ತಿಲ್ಲದೇ ಇದ್ದರೆ ನಿಮ್ಮ ನೊಂದಾಯಿತು ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಮೂಲಕ ರಿಜಿಸ್ಟ್ರೇಶನ್ ನಂಬರ್ ಪಡೆಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು