AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ

Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್​ಡೇಟ್ ಆಗದೇ ಇರುವುದೂ ಸೇರಿ ಹಲವು ಕಾರಣಗಳಿಗೆ ಹಣ ಬಿಡುಗಡೆ ಆಗದೇ ಇರಬಹುದು.

PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2025 | 8:26 PM

Share

ನವದೆಹಲಿ, ನವೆಂಬರ್ 21: ಪಿಎಂ ಕಿಸಾನ್ ಸ್ಕೀಮ್​ನ (PM Kisan Scheme) 21ನೇ ಕಂತಿನ ಹಣ ಮೊನ್ನೆ (ನ. 19) ಬಿಡುಗಡೆ ಆಗಿದೆ. 9 ಕೋಟಿ ರೈತರಿಗೆ (farmers) ತಲಾ 2,000 ರೂನಂತೆ ಒಟ್ಟು 18,000 ಕೋಟಿ ರೂ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದಿನ ಕಂತುಗಳಲ್ಲಿ ಸುಮಾರು 10 ಕೋಟಿ ರೈತರಿಗೆ ಹಣ ನೀಡಲಾಗಿತ್ತು. 21ನೇ ಕಂತಿನಲ್ಲಿ ಹಣ ಪಡೆದವರ ಸಂಖ್ಯೆ ಕಡಿಮೆ ಆಗಿದೆ. ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ ಹಲವರಿಗೆ ಹಣ ಸಿಕ್ಕಿಲ್ಲ. ಬೇರೆ ಬೇರೆ ಕಾರಣದಿಂದ ಹಲವರು ಯೋಜನೆಯಿಂದ ವಂಚಿತರಾಗಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ಯಾರು ಅನರ್ಹರು?

ಪಿಎಂ ಕಿಸಾನ್ ಯೋಜನೆಯು ಕೃಷಿ ಭೂಮಿ ಹೊಂದಿರುವ ಎಲ್ಲಾ ರೈತರಿಗೂ ಲಭ್ಯ ಇರುತ್ತದೆ. ಆದರೆ, ವೃತ್ತಿಪರ ಕೆಲಸ ಮಾಡುವವರು, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಜಿಪಂ ಅಧ್ಯಕ್ಷರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ಸರ್ಕಾರಿ ನೌಕರರು, ಪಿಂಚಣಿದಾರರು, ಐಟಿ ಪಾವತಿದಾರರು ಮೊದಲಾದವರು ಕೃಷಿ ಜಮೀನು ಹೊಂದಿದರೂ ಯೋಜನೆಯ ಫಲಾನುಭವಿಯಾಗಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: ಗಮನ ಸೆಳೆಯುತ್ತಿದೆ ಕರ್ನಾಟಕದ ಐಟಿ, ಸ್ಪೇಸ್​ಟೆಕ್, ಸ್ಟಾರ್ಟಪ್ ನೀತಿಗಳು; ಬೆಂಗಳೂರಿನಲ್ಲಿ ದಟ್ಟಣೆ ತಪ್ಪಿಸಲೂ ಕ್ರಮ

ಈ ಕೆಳಗಿನ ರೈತರಿಗೂ ಸಿಗೋದಿಲ್ಲ ಕಿಸಾನ್ ಹಣ

  1. 2019ರ ಫೆಬ್ರುವರಿ 1ರಂದು ಜಮೀನು ಮಾಲಕತ್ವ ಪಡೆದ ರೈತರು ಯೋಜನೆಯ ಫಲಾನುಭವಿಯಾಗುವುದಿಲ್ಲ
  2. ಅಪ್ಪ ಅಥವಾ ಅಮ್ಮ ಬದುಕಿರುವಾಗಲೇ ಅವರಿಂದ ಜಮೀನು ವರ್ಗಾವಣೆ ಆಗಿದ್ದರೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ಲ
  3. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸುವಂತಿಲ್ಲ

ಬಹಳಷ್ಟು ಜನರಿಗೆ ಈ ಮೇಲಿನ ಮೂರು ಅಂಶಗಳು ತಿಳಿಯದೇ ಗೊಂದಲ ಆಗುತ್ತಿದೆ. ಹಾಗೆಯೇ, ಯೋಜನೆಗೆ ನೊಂದಾಯಿಸಿದ ಬಳಿಕ ಒಮ್ಮೆಯೂ ಇಕೆವೈಸಿ ಮಾಡಿಸದೇ ಇದ್ದರೂ ಪಿಎಂ ಕಿಸಾನ್ ಹಣ ಸಿಗೋದಿಲ್ಲ. ಈಗ ಇಕೆವೈಸಿ ಕಡ್ಡಾಯವಾಗಿದೆ. ಭೌತಿಕವಾಗಿಯೂ ಎಲ್ಲಾ ಫಲಾನುಭವಿಗಳ ದಾಖಲೆ ಪರೀಕ್ಷೆ ಮಾಡಲಾಗುತ್ತಿದೆ. ಯೋಜನೆಗೆ ನೀಡಿರುವ ಬ್ಯಾಂಕ್ ಖಾತೆಯ ಮಾಹಿತಿ ತಪ್ಪಾಗಿದ್ದರೆ ಅಥವಾ ಖಾತೆಗೆ ಆಧಾರ್ ಜೋಡಿತವಾಗದೇ ಇದ್ದಾಗಲೂ ಹಣ ಬರೋದಿಲ್ಲ.

ಇದನ್ನೂ ಓದಿ: ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; ಹಳೆಯ 29 ಕಾನೂನುಗಳ ಬದಲು ಹೊಸ 4 ಕಾನೂನು ಸಂಹಿತೆ ಜಾರಿಗೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದೆಯಾ ಪರಿಶೀಲಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್​ಸೈಟ್ ವಿಳಾಸ: pmkisan.gov.in/

ಇಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣುತ್ತದೆ. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ನೋಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!