AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ

Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್​ಡೇಟ್ ಆಗದೇ ಇರುವುದೂ ಸೇರಿ ಹಲವು ಕಾರಣಗಳಿಗೆ ಹಣ ಬಿಡುಗಡೆ ಆಗದೇ ಇರಬಹುದು.

PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2025 | 8:26 PM

Share

ನವದೆಹಲಿ, ನವೆಂಬರ್ 21: ಪಿಎಂ ಕಿಸಾನ್ ಸ್ಕೀಮ್​ನ (PM Kisan Scheme) 21ನೇ ಕಂತಿನ ಹಣ ಮೊನ್ನೆ (ನ. 19) ಬಿಡುಗಡೆ ಆಗಿದೆ. 9 ಕೋಟಿ ರೈತರಿಗೆ (farmers) ತಲಾ 2,000 ರೂನಂತೆ ಒಟ್ಟು 18,000 ಕೋಟಿ ರೂ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದಿನ ಕಂತುಗಳಲ್ಲಿ ಸುಮಾರು 10 ಕೋಟಿ ರೈತರಿಗೆ ಹಣ ನೀಡಲಾಗಿತ್ತು. 21ನೇ ಕಂತಿನಲ್ಲಿ ಹಣ ಪಡೆದವರ ಸಂಖ್ಯೆ ಕಡಿಮೆ ಆಗಿದೆ. ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ ಹಲವರಿಗೆ ಹಣ ಸಿಕ್ಕಿಲ್ಲ. ಬೇರೆ ಬೇರೆ ಕಾರಣದಿಂದ ಹಲವರು ಯೋಜನೆಯಿಂದ ವಂಚಿತರಾಗಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ಯಾರು ಅನರ್ಹರು?

ಪಿಎಂ ಕಿಸಾನ್ ಯೋಜನೆಯು ಕೃಷಿ ಭೂಮಿ ಹೊಂದಿರುವ ಎಲ್ಲಾ ರೈತರಿಗೂ ಲಭ್ಯ ಇರುತ್ತದೆ. ಆದರೆ, ವೃತ್ತಿಪರ ಕೆಲಸ ಮಾಡುವವರು, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಜಿಪಂ ಅಧ್ಯಕ್ಷರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ಸರ್ಕಾರಿ ನೌಕರರು, ಪಿಂಚಣಿದಾರರು, ಐಟಿ ಪಾವತಿದಾರರು ಮೊದಲಾದವರು ಕೃಷಿ ಜಮೀನು ಹೊಂದಿದರೂ ಯೋಜನೆಯ ಫಲಾನುಭವಿಯಾಗಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: ಗಮನ ಸೆಳೆಯುತ್ತಿದೆ ಕರ್ನಾಟಕದ ಐಟಿ, ಸ್ಪೇಸ್​ಟೆಕ್, ಸ್ಟಾರ್ಟಪ್ ನೀತಿಗಳು; ಬೆಂಗಳೂರಿನಲ್ಲಿ ದಟ್ಟಣೆ ತಪ್ಪಿಸಲೂ ಕ್ರಮ

ಈ ಕೆಳಗಿನ ರೈತರಿಗೂ ಸಿಗೋದಿಲ್ಲ ಕಿಸಾನ್ ಹಣ

  1. 2019ರ ಫೆಬ್ರುವರಿ 1ರಂದು ಜಮೀನು ಮಾಲಕತ್ವ ಪಡೆದ ರೈತರು ಯೋಜನೆಯ ಫಲಾನುಭವಿಯಾಗುವುದಿಲ್ಲ
  2. ಅಪ್ಪ ಅಥವಾ ಅಮ್ಮ ಬದುಕಿರುವಾಗಲೇ ಅವರಿಂದ ಜಮೀನು ವರ್ಗಾವಣೆ ಆಗಿದ್ದರೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ಲ
  3. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸುವಂತಿಲ್ಲ

ಬಹಳಷ್ಟು ಜನರಿಗೆ ಈ ಮೇಲಿನ ಮೂರು ಅಂಶಗಳು ತಿಳಿಯದೇ ಗೊಂದಲ ಆಗುತ್ತಿದೆ. ಹಾಗೆಯೇ, ಯೋಜನೆಗೆ ನೊಂದಾಯಿಸಿದ ಬಳಿಕ ಒಮ್ಮೆಯೂ ಇಕೆವೈಸಿ ಮಾಡಿಸದೇ ಇದ್ದರೂ ಪಿಎಂ ಕಿಸಾನ್ ಹಣ ಸಿಗೋದಿಲ್ಲ. ಈಗ ಇಕೆವೈಸಿ ಕಡ್ಡಾಯವಾಗಿದೆ. ಭೌತಿಕವಾಗಿಯೂ ಎಲ್ಲಾ ಫಲಾನುಭವಿಗಳ ದಾಖಲೆ ಪರೀಕ್ಷೆ ಮಾಡಲಾಗುತ್ತಿದೆ. ಯೋಜನೆಗೆ ನೀಡಿರುವ ಬ್ಯಾಂಕ್ ಖಾತೆಯ ಮಾಹಿತಿ ತಪ್ಪಾಗಿದ್ದರೆ ಅಥವಾ ಖಾತೆಗೆ ಆಧಾರ್ ಜೋಡಿತವಾಗದೇ ಇದ್ದಾಗಲೂ ಹಣ ಬರೋದಿಲ್ಲ.

ಇದನ್ನೂ ಓದಿ: ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; ಹಳೆಯ 29 ಕಾನೂನುಗಳ ಬದಲು ಹೊಸ 4 ಕಾನೂನು ಸಂಹಿತೆ ಜಾರಿಗೆ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದೆಯಾ ಪರಿಶೀಲಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್​ಸೈಟ್ ವಿಳಾಸ: pmkisan.gov.in/

ಇಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣುತ್ತದೆ. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿದರೆ, ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ನೋಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು