AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅವರ ಪಂಚ ರಾಷ್ಟ್ರ ಪ್ರವಾಸದ ಪರಿಣಾಮ ಭಾರತಕ್ಕೆ ಹರಿದುಬರಲಿರುವ ಹೂಡಿಕೆ ಎಷ್ಟು ಗೊತ್ತಾ?

Investments from Modi's 5-Nation Tour: ಪ್ರಧಾನಿ ಮೋದಿ ಅವರ ಐದು ರಾಷ್ಟ್ರಗಳ (ಯುಎಇ, ನೆದರ್​ಲ್ಯಾಂಡ್ಸ್, ಸ್ವೀಡನ್, ನಾರ್ವೆ, ಇಟಲಿ) ಪ್ರವಾಸ ಭಾರತಕ್ಕೆ ₹3.5 ಲಕ್ಷ ಕೋಟಿ (40 ಬಿಲಿಯನ್ ಡಾಲರ್) ಹೂಡಿಕೆ ತರುವಲ್ಲಿ ಯಶಸ್ವಿಯಾಗಿದೆ. ಇಂಧನ ಭದ್ರತೆ ಮತ್ತು ಸೆಮಿಕಂಡಕ್ಟರ್ ತಯಾರಿಕೆಯಲ್ಲಿ ಮಹತ್ವದ ಒಪ್ಪಂದಗಳು ನಡೆದಿವೆ. ಇದು ಭಾರತದ ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡಲಿದೆ. ಮೋದಿ ಅವರ ವಿದೇಶ ಪ್ರವಾಸದ ಆರ್ಥಿಕ ಪರಿಣಾಮಗಳ ಕುರಿತು ಲೇಖನ ಬೆಳಕು ಚೆಲ್ಲಲಿದೆ.

ಮೋದಿ ಅವರ ಪಂಚ ರಾಷ್ಟ್ರ ಪ್ರವಾಸದ ಪರಿಣಾಮ ಭಾರತಕ್ಕೆ ಹರಿದುಬರಲಿರುವ ಹೂಡಿಕೆ ಎಷ್ಟು ಗೊತ್ತಾ?
ನರೇಂದ್ರ ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 21, 2026 | 12:53 PM

Share

ನವದೆಹಲಿ, ಮೇ 21: ಯುಎಇ, ನೆದರ್​ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ಈ ಐದು ದೇಶಗಳಿಗೆ ನರೇಂದ್ರ ಮೋದಿ ನೀಡಿದ ಭೇಟಿ (PM Narendra Modi’s 5 nation tour) ಬಹುತೇಕ ಫಲಪ್ರದವಾಗಿದೆ ಎಂದು ಹೇಳಲಾಗುತ್ತಿದೆ. ಈ ಐದು ದೇಶಗಳ ಪ್ರವಾಸದಿಂದ ಮೋದಿ ಅವರು ಭಾರತಕ್ಕೆ 40 ಬಿಲಿಯನ್ ಡಾಲರ್ (3.5 ಲಕ್ಷ ಕೋಟಿ ರೂ) ಹೂಡಿಕೆ ಹರಿದುಬರಲು ನೆರವಾಗಿದ್ದಾರೆ. ಇದರಲ್ಲಿ ಹೊಸ ಹೂಡಿಕೆಗಳು ಸೇರಿವೆ. ಹಾಗೆಯೇ, ಹೆಚ್ಚುವರಿ ಹೂಡಿಕೆಗಳಿಗೂ ಕೆಲ ಕಂಪನಿಗಳು ಬದ್ಧವಾಗಿವೆ.

ಮೋದಿ ಅವರು ಹೂಡಿಕೆಗಳನ್ನು ಸೆಳೆದಿರುವುದು ಮಾತ್ರವಲ್ಲ, ಇಂಧನ ಭದ್ರತೆಗೂ ವ್ಯವಸ್ಥೆ ಬಿಗಿ ಮಾಡಿದ್ದಾರೆ. ಯುಎಇಗೆ ಮೊದಲು ತೆರಳಿದ ಪ್ರಧಾನಿಗಳು ಅಲ್ಲಿ ದೀರ್ಘಾವಧಿ ಎಲ್​ಪಿಜಿ ಪೂರೈಕೆ ಮತ್ತು ಕಚ್ಚಾ ತೈಲ ಸಂಗ್ರಹಕ್ಕೆ ವಿವಿಧ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ

ನೆದರ್​ಲ್ಯಾಂಡ್ಸ್​ನಲ್ಲಿ ಮೋದಿ ಅವರು ಅಲ್ಲಿಯ ಪ್ರಧಾನಿ ಜೊತೆಗೂಡಿ ವಿವಿಧ ಕ್ಷೇತ್ರಗಳಲ್ಲಿನ 50ಕ್ಕೂ ಹೆಚ್ಚು ಜಾಗತಿಕ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದಾರೆ. ಈ ಕಂಪನಿಗಳ ಒಟ್ಟೂ ಮೌಲ್ಯ ಅಂದಾಜು 3 ಟ್ರಿಲಿಯನ್ ಡಾಲರ್​ನಷ್ಟು ಇದೆ. ಈ ಹೆಚ್ಚಿನ ಕಂಪನಿಗಳು ಭಾರತದಲ್ಲಿ ಈಗಾಗಲೇ ಸಾಕಷ್ಟು ಹೂಡಿಕೆ ಮಾಡಿವೆ. ಭಾರತದಲ್ಲಿ ಅವುಗಳು ಮಾಡಿರುವ ಹೂಡಿಕೆ ಒಟ್ಟು 180 ಬಿಲಿಯನ್ ಡಾಲರ್ ಇರಬಹುದು.

ವಿವಿಧ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು 17 ಒಪ್ಪಂದಗಳನ್ನು ಮಾಡಿಕೊಂಡಿವೆ. ಇದರಲ್ಲಿ ಪ್ರಮುಖವಾದುದು ಎಎಸ್​ಎಂಎಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ನಡುವಿನ ಸೆಮಿಕಂಡಕ್ಟರ್ ಡೀಲ್. ಎಎಸ್​ಎಂಎಲ್ ಭಾರತದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಘಟಕ ಸ್ಥಾಪಿಸಲು ಟಾಟಾ ಎಲೆಕ್ಟ್ರಾನಿಕ್ಸ್​ಗೆ ನೆರವಾಗಲಿದೆ. ಈ ಬೆಳವಣಿಗೆ ಭಾರತದ ಮಟ್ಟಿಗೆ ಐತಿಹಾಸಿಕವೆನಿಸಿದೆ.

ಇದನ್ನೂ ಓದಿ: ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ?

ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ವೇಳೆ 40 ಬಿಲಿಯನ್ ಡಾಲರ್ ಮೊತ್ತದಷ್ಟು ಹೂಡಿಕೆಗಳು ಭಾರತಕ್ಕೆ ಹರಿದುಬರಲು ಸಿದ್ಧವಾಗಿರುವುದು ಗಮನಾರ್ಹ. ಜಾಗತಿಕ ಹೂಡಿಕೆಗಳಿಗೆ ಭಾರತವು ಆದ್ಯತಾ ರಾಷ್ಟ್ರಗಳಲ್ಲಿ ಒಂದೆನಿಸಿರುವುದು ಗಮನಾರ್ಹ. ಹಾಗೆಯೇ, ವಿದೇಶ ಪ್ರವಾಸ ಮಾಡಬೇಡಿರೆಂದು ಸಾಮಾನ್ಯ ಜನರಿಗೆ ಹೇಳುವ ಪ್ರಧಾನಿಗಳು ತಾವೇ ಖುದ್ದಾಗಿ ವಿದೇಶ ಪ್ರವಾಸಗಳನ್ನು ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಈ ಸಂಭಾವ್ಯ ಹೂಡಿಕೆಗಳೇ ಉತ್ತರವೆನಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ