AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಆದ್ಯತೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

PM Mudra Yojana: ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಮುದ್ರಾ ಯೋಜನೆ ಸ್ಕೀಮ್​ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ಕೊಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭಾನುವಾರ ಹೇಳಿದ್ದಾರೆ. ತಮಿಳುನಾಡಿನ ರಾಮೇಶ್ವರಂನಲ್ಲಿ ಪಿಎಂ ಸ್ವನಿಧಿ ಸೆ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಿದ ನಿರ್ಮಲಾ ಸೀತಾರಾಮ್, ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ದಿಮೆದಾರರಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬುದನ್ನು ತಿಳಿಸಿದ್ದಾರೆ.

ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಆದ್ಯತೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 19, 2023 | 6:34 PM

Share

ರಾಮೇಶ್ವರಂ, ನವೆಂಬರ್ 19: ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಮುದ್ರಾ ಯೋಜನೆ ಸ್ಕೀಮ್​ನಲ್ಲಿ (PM Mudra Yojana) ಮಹಿಳೆಯರಿಗೆ ಹೆಚ್ಚು ಆದ್ಯತೆ ಕೊಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭಾನುವಾರ ಹೇಳಿದ್ದಾರೆ. ತಮಿಳುನಾಡಿನ ರಾಮೇಶ್ವರಂನಲ್ಲಿ ಪಿಎಂ ಸ್ವನಿಧಿ ಸೆ ಸಮೃದ್ಧಿ (PM SVANidhi Se Samriddhi) ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಿದ ನಿರ್ಮಲಾ ಸೀತಾರಾಮ್, ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ದಿಮೆದಾರರಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬುದನ್ನು ತಿಳಿಸಿದ್ದಾರೆ.

‘ಪಿಎಂ ಮುದ್ರಾ ಯೋಜನೆಯ ಒಂದು ಪ್ರಮುಖ ಅಂಶ ಎಂದರೆ ಸಣ್ಣ ಉದ್ದಿಮೆ ನಡೆಸುತ್ತಿರುವ ಅಥವಾ ಹೊಸ ಉದ್ದಿಮೆ ಆರಂಭಿಸುವ ಆಸಕ್ತಿ ಹೊಂದಿರುವ ಮಹಿಳೆಯರು ಬ್ಯಾಂಕ್​ಗೆ ಹೋಗಿ ಪಿಎಂ ಮುದ್ರಾ ಯೋಜನೆ ಅಡಿ ಸಾಲ ಪಡೆಯಬಹುದು. ಈ ಯೋಜನೆಯಲ್ಲಿ 100 ಮಂದಿ ಫಲಾನುಭವಿಗಳ ಪೈಕಿ 60 ಮಂದಿ ಮಹಿಳೆಯರಿರುತ್ತಾರೆ. ಪಿಎಂ ಮುದ್ರಾ ಸ್ಕೀಮ್​ನಲ್ಲಿ ಮಹಿಳೆಯರಿಗೆ ಆದ್ಯತೆ ಕೊಡಲಾಗಿದೆ,’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಮೈಲಿಗಲ್ಲು; 4 ಟ್ರಿಲಿಯನ್ ಗಡಿ ದಾಟಿದ ಜಿಡಿಪಿ; ಭಾರತ ಈಗ ವಿಶ್ವದ ನಂಬರ್ 4

ಪಿಎಂ ಮುದ್ರಾ ಯೋಜನೆಯನ್ನು 2015ರ ಎಪ್ರಿಲ್ 8ರಂದು ಆರಂಭಿಸಲಾಗಿದೆ. ಕಾರ್ಪೊರೇಟ್ ಅಲ್ಲದ, ಕೃಷಿ ಅಲ್ಲದ ಸಣ್ಣ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಇರುವ ಸ್ಕೀಮ್ ಇದಾಗಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ 10 ಲಕ್ಷ ರೂವರೆಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಲಾಗುತ್ತದೆ.

ಸ್ವನಿಧಿ ಯೋಜನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ

ಪಿಎಂ ಸ್ವನಿಧಿ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 50,000 ರೂವರೆಗೂ ಸಾಲ ಸಿಗುತ್ತದೆ. ಮೊದಲಿಗೆ ಒಬ್ಬ ಫಲಾನುಭವಿ 10,000 ರೂ ಸಾಲ ಪಡೆಯಬಹುದು. ಅದನ್ನು ಸಕಾಲದಲ್ಲಿ ಮರುಪಾವತಿಸಿದರೆ, 20 ಸಾವಿರ ರೂ ಮೊತ್ತದ ಹೊಸ ಸಾಲ ಪಡೆಯಬಹುದು. ಅದನ್ನೂ ಮರಳಿಸಿದರೆ 50,000 ರೂವರೆಗೂ ಸಾಲ ಕೊಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ