AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಆದ್ಯತೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

PM Mudra Yojana: ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಮುದ್ರಾ ಯೋಜನೆ ಸ್ಕೀಮ್​ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ಕೊಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭಾನುವಾರ ಹೇಳಿದ್ದಾರೆ. ತಮಿಳುನಾಡಿನ ರಾಮೇಶ್ವರಂನಲ್ಲಿ ಪಿಎಂ ಸ್ವನಿಧಿ ಸೆ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಿದ ನಿರ್ಮಲಾ ಸೀತಾರಾಮ್, ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ದಿಮೆದಾರರಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬುದನ್ನು ತಿಳಿಸಿದ್ದಾರೆ.

ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಆದ್ಯತೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 19, 2023 | 6:34 PM

Share

ರಾಮೇಶ್ವರಂ, ನವೆಂಬರ್ 19: ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಮುದ್ರಾ ಯೋಜನೆ ಸ್ಕೀಮ್​ನಲ್ಲಿ (PM Mudra Yojana) ಮಹಿಳೆಯರಿಗೆ ಹೆಚ್ಚು ಆದ್ಯತೆ ಕೊಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭಾನುವಾರ ಹೇಳಿದ್ದಾರೆ. ತಮಿಳುನಾಡಿನ ರಾಮೇಶ್ವರಂನಲ್ಲಿ ಪಿಎಂ ಸ್ವನಿಧಿ ಸೆ ಸಮೃದ್ಧಿ (PM SVANidhi Se Samriddhi) ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಿದ ನಿರ್ಮಲಾ ಸೀತಾರಾಮ್, ಪಿಎಂ ಮುದ್ರಾ ಯೋಜನೆಯಲ್ಲಿ ಮಹಿಳಾ ಉದ್ದಿಮೆದಾರರಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬುದನ್ನು ತಿಳಿಸಿದ್ದಾರೆ.

‘ಪಿಎಂ ಮುದ್ರಾ ಯೋಜನೆಯ ಒಂದು ಪ್ರಮುಖ ಅಂಶ ಎಂದರೆ ಸಣ್ಣ ಉದ್ದಿಮೆ ನಡೆಸುತ್ತಿರುವ ಅಥವಾ ಹೊಸ ಉದ್ದಿಮೆ ಆರಂಭಿಸುವ ಆಸಕ್ತಿ ಹೊಂದಿರುವ ಮಹಿಳೆಯರು ಬ್ಯಾಂಕ್​ಗೆ ಹೋಗಿ ಪಿಎಂ ಮುದ್ರಾ ಯೋಜನೆ ಅಡಿ ಸಾಲ ಪಡೆಯಬಹುದು. ಈ ಯೋಜನೆಯಲ್ಲಿ 100 ಮಂದಿ ಫಲಾನುಭವಿಗಳ ಪೈಕಿ 60 ಮಂದಿ ಮಹಿಳೆಯರಿರುತ್ತಾರೆ. ಪಿಎಂ ಮುದ್ರಾ ಸ್ಕೀಮ್​ನಲ್ಲಿ ಮಹಿಳೆಯರಿಗೆ ಆದ್ಯತೆ ಕೊಡಲಾಗಿದೆ,’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಮೈಲಿಗಲ್ಲು; 4 ಟ್ರಿಲಿಯನ್ ಗಡಿ ದಾಟಿದ ಜಿಡಿಪಿ; ಭಾರತ ಈಗ ವಿಶ್ವದ ನಂಬರ್ 4

ಪಿಎಂ ಮುದ್ರಾ ಯೋಜನೆಯನ್ನು 2015ರ ಎಪ್ರಿಲ್ 8ರಂದು ಆರಂಭಿಸಲಾಗಿದೆ. ಕಾರ್ಪೊರೇಟ್ ಅಲ್ಲದ, ಕೃಷಿ ಅಲ್ಲದ ಸಣ್ಣ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಇರುವ ಸ್ಕೀಮ್ ಇದಾಗಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ 10 ಲಕ್ಷ ರೂವರೆಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಲಾಗುತ್ತದೆ.

ಸ್ವನಿಧಿ ಯೋಜನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ

ಪಿಎಂ ಸ್ವನಿಧಿ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 50,000 ರೂವರೆಗೂ ಸಾಲ ಸಿಗುತ್ತದೆ. ಮೊದಲಿಗೆ ಒಬ್ಬ ಫಲಾನುಭವಿ 10,000 ರೂ ಸಾಲ ಪಡೆಯಬಹುದು. ಅದನ್ನು ಸಕಾಲದಲ್ಲಿ ಮರುಪಾವತಿಸಿದರೆ, 20 ಸಾವಿರ ರೂ ಮೊತ್ತದ ಹೊಸ ಸಾಲ ಪಡೆಯಬಹುದು. ಅದನ್ನೂ ಮರಳಿಸಿದರೆ 50,000 ರೂವರೆಗೂ ಸಾಲ ಕೊಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ