AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಬಜೆಟ್ ಕುರಿತ ಸಲಹೆಗಾಗಿ ಜಾಗತಿಕ ಹೂಡಿಕೆದಾರರ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಕೇಂದ್ರ ಬಜೆಟ್​ 2022ರ ಸಲುವಾಗಿ ಜಾಗತಿಕ ಹೂಡಿಕೆದಾರರ ಜತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರದಂದು ಮಾತುಕತೆ ನಡೆಸಿದ್ದಾರೆ.

Budget 2022: ಬಜೆಟ್ ಕುರಿತ ಸಲಹೆಗಾಗಿ ಜಾಗತಿಕ ಹೂಡಿಕೆದಾರರ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
ನರೇಂದ್ರ ಮೋದಿ
TV9 Web
| Edited By: |

Updated on: Dec 17, 2021 | 8:34 PM

Share

2022- 23ನೇ ಸಾಲಿನ (ಮುಂದಿನ ವರ್ಷದ) ಬಜೆಟ್‌ಗೆ ಸಿದ್ಧತೆ ಚುರುಕುಗೊಳ್ಳುತ್ತಿದ್ದಂತೆ ಭಾರತವನ್ನು ಹೆಚ್ಚು ಆಕರ್ಷಕ ಹೂಡಿಕೆಯ ತಾಣವನ್ನಾಗಿ ಮಾಡುವ ಕುರಿತು ಸಲಹೆಗಳನ್ನು ಪಡೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ (ಡಿಸೆಂಬರ್ 17) ಪ್ರಮುಖ ಖಾಸಗಿ ಷೇರು/ಜಂಟಿ ಬಂಡವಾಳ ಹೂಡಿಕೆದಾರರನ್ನು ಭೇಟಿ ಮಾಡಿದರು. ಭಾರತದಲ್ಲಿ ವ್ಯಾಪಾರವನ್ನು ಇನ್ನಷ್ಟು ಸುಲಭಗೊಳಿಸಲು, ಹೆಚ್ಚಿನ ಬಂಡವಾಳವನ್ನು ಆಕರ್ಷಿಸಲು ಮತ್ತು ಸುಧಾರಣಾ ಪ್ರಕ್ರಿಯೆಯನ್ನು ಮತ್ತಷ್ಟು ಹೆಚ್ಚಿಸಲು ಸಲಹೆಗಳನ್ನು ಕೇಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂದಿನ ಬಜೆಟ್‌ಗೆ ಮುಂಚಿತವಾಗಿ ಸಲಹೆಗಳನ್ನು ಸಂಗ್ರಹಿಸಲು ಉದ್ಯಮದ ಪ್ರಮುಖರೊಂದಿಗೆ ಪ್ರಧಾನಿ ಹೇಗೆ ವೈಯಕ್ತಿಕವಾಗಿ ಸಂವಹನ ನಡೆಸುತ್ತಿದ್ದಾರೆ ಎಂಬುದನ್ನು ಸಭೆಯು ವಿವರಿಸುತ್ತದೆ ಎಂದು ಹೇಳಲಾಗಿದೆ.

ಏಪ್ರಿಲ್ 1, 2022ರಂದು ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ 6 ಟ್ರಿಲಿಯನ್ ಡಾಲರ್‌ಗಿಂತಲೂ ಹೆಚ್ಚಿನ ಆಸ್ತಿಯನ್ನು ನಿರ್ವಹಿಸುವ 20 ದೊಡ್ಡ ಜಾಗತಿಕ ಹೂಡಿಕೆದಾರರನ್ನು ಮೋದಿ ಭೇಟಿ ಮಾಡಿದ್ದರು. 2014ರಲ್ಲಿ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ಸರ್ಕಾರವು ಸುಧಾರಣೆ ಸರಣಿಗಳನ್ನು ಅನಾವರಣಗೊಳಿಸಿದ್ದು, ಅದು ಭಾರತವು ವ್ಯಾಪಾರ ಮಾಡುವ ಸುಲಭ ತಾಣವಾಗುವ ಶ್ರೇಯಾಂಕದಲ್ಲಿ ಏರಲು ಸಹಾಯ ಮಾಡಿದೆ.

ಅದು ಈಗ ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಉತ್ತೇಜಿಸುತ್ತಿದೆ. ದೇಶದಲ್ಲಿ ನೆಲೆಯನ್ನು ಸ್ಥಾಪಿಸಲು ಜಾಗತಿಕ ತಯಾರಕರನ್ನು ಆಕರ್ಷಿಸಲು ಆಟೋಮೊಬೈಲ್‌ಗಳಿಂದ ಸೆಮಿಕಂಡಕ್ಟರ್‌ಗಳು ಮತ್ತು ಸೋಲಾರ್​ವರೆಗಿನ ವಲಯಗಳಿಗೆ ಉತ್ಪಾದನೆ-ಸಂಯೋಜಿತ ಪ್ರೋತ್ಸಾಹ ಯೋಜನೆಗಳನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Union Budget 2022: ತೆರಿಗೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಬಜೆಟ್​ ಸಲಹೆಗಳನ್ನು ಆಹ್ವಾನಿಸಿದ ಕೇಂದ್ರ ಸರ್ಕಾರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು