AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಾನ್ ಇಂಡಿಯಾ 2024ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಮೂರು ದಿನದ ಸಮಾವೇಶದಲ್ಲಿ ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜರ ಸಮಾಗಮ

PM Narendra Modi inaugurates Semicon India 2024: ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಪುಷ್ಟಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಆಯೋಜಿಸಿದೆ. ಸೆ. 11, ಇಂದು ಪ್ರಧಾನಿ ಮೋದಿ ಈ ಮೂರು ದಿನಗಳ ಕಾನ್ಫೆರೆನ್ಸ್​ಗೆ ಚಾಲನೆ ನೀಡಿದ್ದಾರೆ. ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸೆಮಿಕಾನ್ ಇಂಡಿಯಾ 2024ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಮೂರು ದಿನದ ಸಮಾವೇಶದಲ್ಲಿ ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜರ ಸಮಾಗಮ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 11, 2024 | 11:42 AM

Share

ನವದೆಹಲಿ, ಸೆಪ್ಟೆಂಬರ್ 11: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 13ರವರೆಗೆ ಮೂರು ದಿನಗಳ ಕಾಲ ನಡೆಯುವ ಸೆಮಿಕಾನ್ ಇಂಡಿಯಾ ಸಮಾವೇಶದಲ್ಲಿ ಸೆಮಿಕಂಡಕ್ಟರ್ ಭವಿಷ್ಯ ರೂಪಿಸುವುದು ಈ ಬಾರಿಯ ಥೀಮ್ ಆಗಿದೆ. ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಅಭಿವೃದ್ಧಿಪಡಿಸಬಲ್ಲಂತಹ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಚುರಪಡಿಸಲಾಗುತ್ತದೆ.

ಇದನ್ನೂ ಓದಿ: ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ

ಈ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ. 150ಕ್ಕೂ ಹೆಚ್ಚು ತಜ್ಞರು ಮಾತನಾಡಲಿದ್ದಾರೆ. ಬಹುತೇಕ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ನಿರ್ಮಿಸಲು ಆಸಕ್ತಿ ತೋರಿವೆ. ಚಿಪ್ ತಯಾರಿಕೆಗೆ ಪೂರಕವಾದ ಇತರ ಉದ್ದಿಮೆಗಳೂ ಕೂಡ ಭಾರತದಲ್ಲೇ ನೆಲೆಗೊಳ್ಳಲಿವೆ. ಆ ನಿಟ್ಟಿನಲ್ಲಿ ಸರ್ಕಾರ ಸೆಮಿಕಂಡಕ್ಟರ್ ನೀತಿಗಳನ್ನು ರೂಪಿಸುತ್ತಿದೆ. ಈ ಸಮಾವೇಶದಲ್ಲೂ ಈ ನೀತಿಗಳು ಅನಾವರಣಗೊಳ್ಳಬಹುದು.

ನಿನ್ನೆ ಮಂಗಳವಾರ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಸ್ತೃತ ಸೆಮಿಕಂಡಕ್ಟರ್ ಸರಬರಾಜು ಸರಪಳಿಯಲ್ಲಿ ಭಾರತ ಪ್ರಮುಖ ಭಾಗಿದಾರ ದೇಶವಾಗುವ ಸಾಮರ್ಥ್ಯ ಹೊಂದಿದೆ. ಸರ್ಕಾರದ ನೀತಿಯಲ್ಲಿ ಸ್ಥಿರತೆ ಇರಲಿದೆ ಎಂದು ವಾಗ್ದಾನ ನೀಡಿದ್ದಾರೆ.

ಇದನ್ನೂ ಓದಿ: Video- ದೇಶ ವಿದೇಶಗಳ ಸೆಮಿಕಂಡಕ್ಟರ್ ಉದ್ಯಮ ದಿಗ್ಗಜರಿಂದ ಪ್ರಧಾನಿ ಮೋದಿಗೆ ಪ್ರಶಂಸೆ

ಇದೇ ವೇಳೆ ಪ್ರಮುಖ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು ಮಾತನಾಡುತ್ತಾ, ಭಾರತ ಸರ್ಕಾರದ ನೀತಿಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?