AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮ ಉದ್ಘಾಟನೆ; ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳ ಸಮಾಗಮ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 17ರಂದು ದೇಶ ವಿದೇಶಗಳ ಸೆಮಿಕಂಡಕ್ಟರ್ ಕ್ಷೇತ್ರದ ದಿಗ್ಗಜರು ಮೇಳೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 19ರವರೆಗೆ ಕಾರ್ಯಕ್ರಮ ನಡೆಯುತ್ತಿದ್ದು, ಮೈಕ್ರಾನ್, ಎಎಸ್​ಎಂಎಲ್, ಅಪ್ಲೈಡ್ ಮೆಟೀರಿಯಲ್ಸ್ ಮೊದಲಾದ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮ ಉದ್ಘಾಟನೆ; ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳ ಸಮಾಗಮ
ಸೆಮಿಕಾನ್ ಇಂಡಿಯಾ 2026 ಉದ್ಘಾಟಿಸಿದ ಪಿಎಂ ಮೋದಿImage Credit source: Youtube
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 17, 2026 | 11:32 AM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್​ನಲ್ಲಿ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಸೆಮಿ ಸಂಘಟನೆಗಳು ಆಯೋಜಿಸಿರುವ ಈ ಕಾರ್ಯಕ್ರಮ ಇವತ್ತಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಸೆಪ್ಟೆಂಬರ್ 19ಕ್ಕೆ ಸಮಾರೋಪಗೊಳ್ಳಲಿದೆ. ‘ಸಿಲಿಕಾನ್ ಟು ಸಿಸ್ಟಮ್ಸ್: ಬ್ಯುಲ್ಡಿಂಗ್ ದಿ ಇಕೋಸಿಸ್ಟಂ’ ಥೀಮ್ ಹೊಂದಿರುವ ಈ ಬಾರಿಯ ಸೆಮಿಕಾನ್ ಇಂಡಿಯಾ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸೆಮಿಕಂಡಕ್ಟರ್ ಕ್ಷೇತ್ರದ ಉದ್ಯಮಿಗಳು ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಬಳಿಕ ಪ್ರಧಾನಿಗಳು ಪ್ರದರ್ಶಕರು ಹಾಗೂ ಭಾಗಿದಾರರೊಂದಿಗೆ ಸಂವಾದ ನಡೆಸಿದರು. ಸೆಪ್ಟೆಂಬರ್ 17ರಿಂದ 19ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ 52 ದೇಶಗಳಿಂದ ಪ್ರತಿನಿಧಿಗಳು ಬಂದಿದ್ದಾರೆ. 600ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ. 400ಕ್ಕೂ ಹೆಚ್ಚು ಎಕ್ಸಿಕ್ಯೂಟಿವ್​ಗಳು, 150ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸುತ್ತಿದ್ದಾರೆ.

ಕಾರ್ಯಕ್ರಮದ ಲೈವ್

ಯಶೋಭೂಮಿಯಲ್ಲಿ ಜಪಾನ್, ಸೌತ್ ಕೊರಿಯಾ, ಮಲೇಷ್ಯಾ, ನೆದರ್​ಲ್ಯಾಂಡ್ಸ್, ಸಿಂಗಾಪುರ್ ಮತ್ತು ಸ್ವೀಡನ್ ದೇಶಗಳಿಗೆ ಪೆವಿಲಿಯನ್​ಗಳನ್ನು ನಿರ್ಮಿಸಲಾಗಿದೆ. 12 ರಾಜ್ಯಗಳ ಬೂತ್​ಗಳು, ಒಂದು ಸ್ಟಾರ್ಟಪ್ ಪೆವಿಲಿಯನ್, ವರ್ಕ್​ಫೋರ್ಸ್ ಡೆವಲಪ್ಮೆಂಟ್ ಪೆವಿಲಿಯನ್ ಇವೆ. ಈ ಮೂರು ದಿನಗಳ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಅಮೆರಿಕದ ಶೇ.100 ಸುಂಕ ಬೆದರಿಕೆಗೆ ಭಾರತದ ಖಡಕ್ ಪ್ರತ್ಯುತ್ತರ: 140 ಕೋಟಿ ಜನರ ಇಂಧನ ಭದ್ರತೆ ನಮಗೆ ಮೊದಲ ಆದ್ಯತೆ

ಇವತ್ತು ಉದ್ಘಾಟನಾ ದಿನದಂದು ಸೆಮಿಕಂಡಕ್ಟರ್ ಉದ್ಯಮದ ಮುಂದಾಳುಗಳು ಭಾಷಣ ಮಾಡಿದರು. ಮೈಕ್ರಾನ್ ಎಲೆಕ್ಟ್ರಾನಿಕ್ಸ್, ಟಾಟಾ ಟೆಕ್ನಾಲಜೀಸ್, ಅಪ್ಲೈಡ್ ಮೆಟೀರಿಯಲ್ಸ್, ಎಎಸ್​ಎಂಎಲ್, ಟೋಕಿಯೋ ಎಲೆಕ್ಟ್ರಾನ್, ಜಬಿಲ್, ರಾಬಿಡಸ್, ಲಾಮ್ ರಿಸರ್ಚ್, ಅಡ್ವಾಂಟೆಸ್ಟ್ ಇತ್ಯಾದಿ ದಿಗ್ಗಜ ಸಂಸ್ಥೆಗಳ ಸಿಇಒಗಳು ಭಾರತದ ಸೆಮಿಕಂಡಕ್ಟರ್ ಬೆಳವಣಿಗೆಯಲ್ಲಿ ಭಾಗವಾಗಲು ಇಚ್ಛೆ ತೋರ್ಪಡಿಸಿದ್ದಾರೆ. ಭಾರತದ ಶಕ್ತಿ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Thu, 17 September 26

Follow Us
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್