AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Economy: ಕಳೆದ 6 ತಿಂಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಂದ ಭಾರತಕ್ಕೆ ಉತ್ತಮ ಆರ್ಥಿಕ ಪ್ರಗತಿ: ಪ್ರಧಾನಿ ನರೇಂದ್ರ ಮೋದಿ

PM Narendra Modi Speaks: ಕಳೆದ 10 ವರ್ಷಗಳಿಂದ ಸರ್ಕಾರ ಕೈಗೊಂಡ ಪರಿವರ್ತನೀಯ ಸುಧಾರಣಾ ಕ್ರಮಗಳು ಜಿಡಿಪಿ ಬೆಳವಣಿಗೆ ಕಾರಣವಾಗುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 2023-24ರ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಕ್ರಮವಾಗಿ ಶೇ. 7.8 ಮತ್ತು ಶೇ. 7.6ರಷ್ಟು ಬೆಳೆದಿತ್ತು. ಪ್ರಧಾನಿ ನರೇಂದ್ರ ಮೋದಿ ಡಿ. 9ರಂದು ಗುಜರಾತ್​ನ ಗಿಫ್ಟ್ ಸಿಟಿಯಲ್ಲಿ ನಡೆದ ಇನ್ಫಿನಿಟಿ ಫೋರಂ 2.0 ಕಾನ್ಫೆರೆನ್ಸ್ ಉದ್ದೇಶಿಸಿ ಮಾತನಾಡುತ್ತಿದ್ದರು.

Indian Economy: ಕಳೆದ 6 ತಿಂಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಂದ ಭಾರತಕ್ಕೆ ಉತ್ತಮ ಆರ್ಥಿಕ ಪ್ರಗತಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 10, 2023 | 10:35 AM

ನವದೆಹಲಿ, ಡಿಸೆಂಬರ್ 10: ಭಾರತದ ಜಿಡಿಪಿ 2023ರ ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗಿನ ಅವಧಿಯಲ್ಲಿ ಶೇ. 7.7ರಷ್ಟು ಬೆಳೆದಿರುವುದು ದೇಶದ ಆರ್ಥಿಕತೆ ಬಲಗೊಳ್ಳುತ್ತಿರುವ ಕುರುಹು ಆಗಿದೆ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಕೈಗೊಳ್ಳಲಾದ ಪರಿವರ್ತನೀಯ ಸುಧಾರಣಾ ಕ್ರಮಗಳ ಪ್ರತಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್​ನ ಗಿಫ್ಟ್ ಸಿಟಿಯಲ್ಲಿ ನಿನ್ನೆ ಡಿಸೆಂಬರ್ 9ರಂದು ನಡೆದ ‘ಇನ್ಫಿನಿಟಿ ಫೋರಂ 2.0’ ಕಾನ್ಫೆರೆನ್ಸ್ ಉದ್ದೇಶಿಸಿ ಆನ್​ಲೈನ್​ನಲ್ಲಿ ಮಾತನಾಡಿದ ಪ್ರಧಾನಿಗಳು, ‘ಈ ಹಣಕಾಸು ವರ್ಷದ ಮೊದಲ ಆರು ತಿಂಗಳು ಭಾರತದ ಜಿಡಿಪಿ ಶೇ. 7.7ರಷ್ಟು ಬೆಳವಣಿಗೆ ಸಾಧಿಸಿದೆ. ಇವತ್ತು ಇಡೀ ಜಗತ್ತು ಭಾರತದ ಮೇಲೆ ಭರವಸೆ ಇಟ್ಟಿದೆ. ಈ ಬೆಳವಣಿಗೆ ತನ್ನಿಂದ ತಾನೇ ಆಗಿದ್ದಲ್ಲ. ಭಾರತದ ಆರ್ಥಿಕತೆ ಬಲಗೊಳ್ಳುತ್ತಿರುವ ಮತ್ತು ಕಳೆದ 10 ವರ್ಷದಲ್ಲಿ ತೆಗೆದುಕೊಳ್ಳಲಾದ ಸುಧಾರಣಾ ಕ್ರಮಗಳ ಪರಿಣಾಮ ಇದಾಗಿದೆ’ ಎಂದಿದ್ದಾರೆ.

ಭಾರತದ ಜಿಡಿಪಿ ಈ ವರ್ಷದ ಮೊದಲ ಎರಡು ತ್ರೈಮಾಸಿಕ ಅವಧಿಯಲ್ಲಿ ಸರಾಸರಿಯಾಗಿ ಶೇ. 7.7ರಷ್ಟು ಬೆಳೆದಿದೆ. ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಮೂನ್​ವರೆಗಿನ ಅವಧಿಯಲ್ಲಿ ಶೇ. 7.8ರಷ್ಟು; ಹಾಗೂ ಎರಡನೇ ಕ್ವಾರ್ಟರ್ ಆದ ಜುಲೈನಿಂದ ಸೆಪ್ಟಂಬರ್​ವರೆಗಿನ ಅವಧಿಯಲ್ಲಿ ಶೇ. 7.6ರಷ್ಟು ಜಿಡಿಪಿ ವೃದ್ಧಿಸಿದೆ. ವಿಶ್ವದ ದೊಡ್ಡ ಆರ್ಥಿಕತೆಯ ದೇಶಗಳ ಪೈಕಿ ಭಾರತ ಅತಿವೇಗದ ಜಿಡಿಪಿ ವೃದ್ಧಿ ದರ ಸಾಧಿಸಿರುವುದು. ಪ್ರಧಾನಿಗಳು ಇದೇ ವಿಚಾರವನ್ನು ಪ್ರಸ್ತಾಪಿಸಿ ಗಿಫ್ಟ್ ಸಿಟಿಯ ‘ಇನ್ಫಿನಿಟಿ ಫೋರಂ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: ವಾರದಲ್ಲಿ 70 ಗಂಟೆ ಕೆಲಸ ಹೇಳಿಕೆಗೆ ಬದ್ಧ, 40 ವರ್ಷ ನಾನೂ ಮಾಡಿದ್ದೇನೆ: ನಾರಾಯಣ ಮೂರ್ತಿ

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್ ಅಥವಾ GIFT City ಬಗ್ಗೆ ಪ್ರಧಾನಿಗಳು ಇದೇ ವೇಳೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

‘ಇವತ್ತು ವಿಶ್ವದಲ್ಲಿ ಅತಿವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಫಿನ್​ಟೆಕ್ ಮಾರುಕಟ್ಟೆಗಳಲ್ಲಿ ಭಾರತವೂ ಒಂದು. ಗಿಫ್ಟ್ ಇಂಟರ್ನ್ಯಾಷನಲ್ ಫೈನಾನ್ಷಿಯಲ್ ಸರ್ವಿಸಸ್ ಸೆಂಟರ್ (ಐಎಫ್​ಎಸ್​ಸಿ) ಈ ಮಾರುಕಟ್ಟೆಯ ಕೇಂದ್ರಬಿಂದುವಾಗಿ ಹೊರಹೊಮ್ಮುತ್ತಿದೆ’ ಎಂದು ಹೇಳಿದ ನರೇಂದ್ರ ಮೋದಿ, ಹೊಸ ಜಾಗತಿಕ ಹಣಕಾಸು ಮತ್ತು ತಂತ್ರಜ್ಞಾನ ಸೇವೆಗಳ ಜಾಗತಿಕ ಕೇಂದ್ರವಾಗಿ ಗಿಫ್ಟ್ ಸಿಟಿಯನ್ನು ಬೆಳೆಸುವುದು ತಮ್ಮ ಸರ್ಕಾರದ ಗುರಿ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ