AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ

PM Narendra Modi's blog post on natural farming: ಭಾರತೀಯ ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್​ನ್ ಪೋಸ್ಟ್​ನಲ್ಲಿ ಬ್ಲಾಗ್ ಬರೆದಿರುವ ಮೋದಿ, ರಾಸಾಯನಿಕ ಬಳಕೆ ನಿಲ್ಲಿಸಿ, ಸಂಪೂರ್ಣ ದೇಸೀಯವಾದ ಕೃಷಿ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ, ಮಲ್ಚಿಂಗ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು ಎಂದಿದ್ದಾರೆ.

ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ
ಕೊಯಮತ್ತೂರಿನ ಕೃಷಿ ಮೇಳದಲ್ಲಿ ಪ್ರಧಾನಿ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2025 | 4:21 PM

Share

ಕೊಯಮತ್ತೂರು, ಡಿಸೆಂಬರ್ 3: ಭಾರತೀಯ ಕೃಷಿ ಕ್ಷೇತ್ರದ ಪರಿವರ್ತನೆಗೆ ನೈಸರ್ಗಿಕ ಬೇಸಾಯ ವಿಧಾನ (natural farming) ಬಹಳ ಮುಖ್ಯವಾದುದು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ರಾಸಾಯನಿಕ ಬಳಕೆ ಕಡಿಮೆ ಮಾಡಿ ಪರಿಸರಸ್ನೇಹಿ ಕೃಷಿ ವಿಧಾನ ಅನುಸರಿಸುವಂತೆ ರೈತರಿಗೆ (Farmer) ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್​ಇನ್ ಸೋಷಿಯಲ್ ಮೀಡಿಯಾ ಅಕೌಂಟ್​ನಲ್ಲಿ (LinkedIn) ಪ್ರಧಾನಿಗಳು ಬ್ಲಾಗ್ ಬರೆದಿದ್ದು, ಅದರಲ್ಲಿ ನೈಸರ್ಗಿಕ ಕೃಷಿ ಕುರಿತು ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ತಿಂಗಳು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆಯಲ್ಲಿ ಪಾಲ್ಗೊಂಡು, ಅದರಲ್ಲಿ ಸಿಕ್ಕ ಅನುಭವವನ್ನು ಪ್ರಧಾನಿಗಳು ತಮ್ಮ ಬ್ಲಾಗ್​ನಲ್ಲಿ ಹಂಚಿಕೊಂಡಿದ್ದಾರೆ. ತಮಿಳುನಾಡಿನ ರೈತರು ನೈಸರ್ಗಿಕ ಕೃಷಿ ಪದ್ಧತಿಗೆ ಹಾಕುತ್ತಿರುವ ಶ್ರಮ ತಮ್ಮನ್ನು ಅಚ್ಚರಿಗೊಳಿಸಿತು. ಭಾರತೀಯ ರೈತರು ಮತ್ತು ಕೃಷಿ ಉದ್ದಿಮೆದಾರರು ಈ ಕೃಷಿ ಕ್ಷೇತ್ರದ ಅಭಿವೃದ್ಧಿಪಡಿಸುತ್ತಿರುವ ಪರಿ, ತಮಗೆ ಭರವಸೆ ಮೂಡಿಸಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ಪರಿಸರೀಯ ತತ್ವಗಳ ಸಮ್ಮಿಳನ

ನೈಸರ್ಗಿಕ ಕೃಷಿ ಎಂಬುದು ಭಾರತದ ಸಾಂಪ್ರದಾಯಿಕ ಜ್ಞಾನ ಹಾಗೂ ಆಧುನಿಕ ಪರಿಸರೀಯ ತತ್ವಗಳ ಸಮ್ಮಿಶ್ರಣ ಎಂದು ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕೃಷಿಗಾರಿಕೆಯಲ್ಲಿ ರಾಸಾಯನಿಕ ರಸಗೊಬ್ಬರ, ಕ್ರಿಮಿನಾಶಕಗಳ ಬಳಕೆ ನಿಲ್ಲಿಸಬೇಕು. ಗಿಡ, ಮರ, ಜಾನುವಾರಗಳು ಒಟ್ಟಿಗೆ ಇದ್ದು ನೈಸರ್ಗಿಕವಾದ ಜೀವವೈವಿಧ್ಯತೆಯನ್ನು ಬೆಂಬಲಿಸುವಂತಹ ಕೃಷಿ ಭೂಮಿ ಸೃಷ್ಟಿಯಾಗಬೇಕು. ಕೃಷಿ ತ್ಯಾಜ್ಯಗಳ ಮರುಬಳಕೆ, ಮಲ್ಚಿಂಗ್ ಇತ್ಯಾದಿ ಮೂಲಕ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವ ಕೆಲಸ ಆಗಬೇಕು ಎಂದು ಪ್ರಧಾನಿಗಳು ತಮ್ಮ ಬ್ಲಾಗ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ

ಪ್ರಧಾನಿಗಳು ಕೊಯಮತ್ತೂರಿನ ಕೃಷಿ ಕಾರ್ಯಕ್ರಮದಲ್ಲಿ ಭೇಟಿಯಾದ ಕೆಲ ರೈತರ ಅನುಭವಗಳನ್ನೂ ನೆನಪು ಮಾಡಿಕೊಂಡಿದ್ದಾರೆ.

ಒಬ್ಬ ರೈತ 10 ಎಕರೆ ಭೂಮಿಯಲ್ಲಿ ಬಹುಸ್ತರ ಕೃಷಿ ಮೂಲಕ ಬಾಳೆ, ತೆಂಗು, ಪಪ್ಪಾಯ, ಕಾಣುಮೆಣಸು, ಅರಿಶಿನವನ್ನು ಬೆಳೆದಿರುವುದಲ್ಲದೆ, 60 ದೇಸೀ ಹಸುಗಳು, 400 ಆಡು ಕುರಿಗಳು ಹಾಗೂ ನಾಟಿ ಕೋಳಿಗಳನ್ನು ಸಾಕುತ್ತಿರುವ ಸಂಗತಿಯನ್ನು ಮೋದಿ ಮೆಲುಕು ಹಾಕಿದ್ದಾರೆ.

ಸ್ಥಳೀಯ ತಳಿಯ ಅಕ್ಕಿ ಬೆಳೆದು, ಪ್ರೋಟೀನ್ ಬಾರ್, ಹೆಲ್ತ್ ಮಿಕ್ಸ್, ಪುರಿ ಇತ್ಯಾದಿ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರುವ ರೈತ; 15 ಎಕರೆ ಜಾಗದಲ್ಲಿ ನೈಸರ್ಗಿಕ ಕೃಷಿ ನಡೆಸಿ ಪ್ರತೀ ತಿಂಗಳು 30 ಟನ್ ತರಕಾರಿ ಮಾರುವ ಪದವೀಧರ ರೈತ ಇತ್ಯಾದಿ ಹಲವರ ಅನುಭವಗಳನ್ನು ಮೋದಿ ತಮ್ಮ ಬ್ಲಾಗ್​ನಲ್ಲಿ ಹೈಲೈಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರ ಹಾಗೂ ನೈಸರ್ಗಿಕ ಕೃಷಿಗಾರಿಕೆಗೆ ವಿವಿಧ ಯೋಜನೆಗಳ ಮೂಲಕ ಹೇಗೆ ಪುಷ್ಟಿ ಕೊಡಲು ಯತ್ನಿಸುತ್ತಿದೆ ಎಂಬುದನ್ನೂ ಮೋದಿ ವಿವರಿಸಿದ್ದಾರೆ. ಕಳೆದ ವರ್ಷ ಜಾರಿಗೆ ಬಂದ ನೈಸರ್ಗಿಕ ಕೃಷಿ ಮಿಷನ್ ಮೂಲಕ ಲಕ್ಷಾಂತರ ರೈತರು ಸಾಂಪ್ರದಾಯಿಕ ಕೃಷಿ ವಿಧಾನ ಅಳವಡಿಸಿಕೊಂಡಿರುವ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: PM Fasal Bima Yojana: ಬೆಳೆ ವಿಮೆ ವ್ಯಾಪ್ತಿ ಹೆಚ್ಚಳ; ಅಪಾಯ ಮೂಲಗಳ ಪಟ್ಟಿಗೆ ಕಾಡುಪ್ರಾಣಿಗಳೂ ಸೇರ್ಪಡೆ

ಕಿಸಾನ್ ಕ್ರೆಡಿಟ್ ಕಾರ್ಡ್, ಪಿಎಂ ಕಿಸಾನ್ ಸೌಲಭ್ಯಗಳು ರೈತರಿಗೆ ನೈಸರ್ಗಿಕ ಕೃಷಿ ವಿಧಾನ ಅಳವಡಿಸಿಕೊಳ್ಳಲು ಧೈರ್ಯ ನೀಡಿವೆ. ಸರ್ಕಾರವು ಸಿರಿಧಾನ್ಯಗಳಿಗೆ ಒತ್ತು ನೀಡುವ ಮೂಲಕ ನೈಸರ್ಗಿಕ ಕೃಷಿಗೆ ರೈತರನ್ನು ಉತ್ತೇಜಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪಂಚಗವ್ಯ, ಜೀವಾಮೃತಗಳ ಬಳಕೆಗೆ ಕರೆ

ರಾಸಾಯನಿಕ, ಕ್ರಿಮಿನಾಶಕಗಳ ಬಳಕೆಯಿಂದ ಮಣ್ಣಿನ ಸಾರ ಕಡಿಮೆ ಆಗುತ್ತದೆ. ಕೃಷಿಗಾರಿಕೆ ವೆಚ್ಚ ಹೆಚ್ಚುತ್ತದೆ ಎಂದು ಹೇಳಿರುವ ಮೋದಿ, ನೈಸರ್ಗಿಕ ವಿಧಾನದಿಂದ ಈ ಸಮಸ್ಯೆ ನಿವಾರಿಸಬಹುದು ಎಂದಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ ಮತ್ತು ಮಲ್ಚಿಂಗ್​ನಿಂದ ಮಣ್ಣಿನ ಆರೋಗ್ಯ ಕಾಪಾಡಬಹುದು. ಹವಾಮಾನ ಬದಲಾವಣೆ ಸಮಸ್ಯೆಯಲ್ಲೂ ಕೃಷಿಯನ್ನು ನಡೆಸಬಹುದು ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಿಂಕ್ಡ್​ಇನ್​ನಲ್ಲಿ ಬರೆದ ಬ್ಲಾಗ್​ನ ಲಿಂಕ್ ಇಲ್ಲಿದೆ

ನರೇಂದ್ರ ಮೋದಿ ಅವರು ಕೊಯಮತ್ತೂರಿನ ಕೃಷಿ ಸಮಿಟ್​ನಲ್ಲಿ ಪಾಲ್ಗೊಂಡಿರುವ ವಿಡಿಯೋ ಇಲ್ಲಿದೆ…

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ